ಮೈಸೂರು

ಬೆಳಕಿನ ಹಬ್ಬಕ್ಕೆ ಭರದ ಸಿದ್ಧತೆ: ಜೋರಾಗಿದೆ ಖರೀದಿ ಭರಾಟೆ

ಪ್ರಶಾಂತ್‌ ಎಸ್‌ ಮೈಸೂರು.

ಮೈಸೂರು: ಕಳೆದ ಎರಡು ವರ್ಷಗಳಿಂದ ಕೋವಿಡ್ ಹಿನ್ನೆಲೆಯಲ್ಲಿ ಮಂದವಾಗಿದ್ದ ಬೆಳಕಿನ ಹಬ್ಬ ದೀಪಾವಳಿ ಈ ಬಾರಿ ಜನರ ಸಡಗರಕ್ಕೆ ವೇದಿಕೆಯಾಗಿ ಪರಿಣಮಿಸಿದೆ.
ಜನರು ಉತ್ಸಾಹದಿಂದ ಅಗತ್ಯ ವಸ್ತುಗಳ ಖರೀದಿಯತ್ತ ಆಸಕ್ತಿ ತೋರಿದ್ದಾರೆ. ಹೊಸ ಬಟ್ಟೆ, ಹೂ, ಹಣ್ಣು, ಪಟಾಕಿ ಸೇರಿ ಇತರೆ ವಸ್ತುಗಳ ಖರೀದಿ ಭರಾಟೆ ಜೋರಾಗಿತ್ತು. ಹಿಂದೂಗಳು ವಿಜೃಂಭಣೆಯಿಂದ ಆಚರಿಸುವ ಈ ಹಬ್ಬದ ನಿಮಿತ್ತ ಆಕಾಶಬುಟ್ಟಿ, ಬಾಳೆ-ಕಬ್ಬು, ಚೆಂಡು ಹೂ, ಸೇವಂತಿಗೆ, ಕಾಕಡ ಮುಂತಾದ ಹೂಗಳ ಖರೀದಿಗೆ ಜನ ಮುಗಿಬಿದ್ದಿದ್ದರು. ಕಳೆದ ವರ್ಷಕ್ಕಿಂತ ಈ ಬಾರಿ ಬೆಳಕಿನ ಹಬ್ಬಕ್ಕೆ ಕಳೆ ಬಂದಿದೆ.

ಎಲ್ಲೆಲ್ಲೂ ಜನಜಂಗುಳಿ: ಬೆಳಕಿನ ಹಬ್ಬದ ನಿಮಿತ್ತ ನಗರದ ಗಾಂಧಿಚೌಕ, ಅಗ್ರಹಾರ , ಕೆ.ಆರ್. ಸರ್ಕಲ್, ಚಿಕ್ಕ ಗಡಿಯಾರ ವೃತ್ತ, ಸೇರಿ ನಾನಾ ಕಡೆ ಹೂವಿನ ವ್ಯಾಪಾರ, ಹಣ್ಣು, ತರಕಾರಿ ಹಾಗೂ ಬಾಳೆ ಎಲೆ, ಕಂದುಗಳ ವ್ಯಾಪಾರ ಜೋರಾಗಿತ್ತು. ನಗರದ ಟೌನ್‌ಹಾಲ್ ಸೇರಿದಂತೆ ನಾನಾ ಕಡೆ ಪಟಾಕಿ ಅಂಗಡಿಗಳ ಮುಂದೆ ಗ್ರಾಹಕರು ಸಾಲುಗಟ್ಟಿ ನಿಂತು ನಾನಾ ರೀತಿಯ ಸಿಡಿಮದ್ದು ಹಾಗೂ ಮಣ್ಣಿನ ದೀಪ ಕೊಂಡುಕೊಳ್ಳುವ ದೃಶ್ಯ ಕಂಡುಬಂತು.

ಪಟಾಕಿ ಖರೀದಿ ಜೋರು : ಬೆಳಕಿನ ಹಬ್ಬ ದೀಪಾವಳಿ ಸಂಭ್ರಮ ಎಲ್ಲೆಡೆ ಮನೆ ಮಾಡಿದ್ದು, ಜಿಲ್ಲೆಯಲ್ಲಿ ಪಟಾಕಿ ಖರೀದಿಯೂ ಜೋರಾಗಿದೆ. ನಗರ ಸೇರಿದಂತೆ ಜಿಲ್ಲಾದ್ಯಂತ ದೀಪಾವಳಿ ಹಬ್ಬಕ್ಕೆ ಪಟಾಕಿ ಖರೀದಿ ಭರಾಟೆ ಈಗಾಗಲೇ ಆರಂಭವಾಗಿದ್ದು, ಇದು ಪಟಾಕಿ ವರ್ತಕರನ್ನು ಕೊಂಚ ನೆಮ್ಮದಿಯ ನಿಟ್ಟುಸಿರು ಬಿಡುವಂತೆ ಮಾಡಿದೆ.

ನಗರದ ಪುರಭವನ ಮೈದಾನದಲ್ಲಿ ಪಟಾಕಿ ಮಳಿಗೆಗಳನ್ನು ಹಾಕಲಾಗಿದ್ದು, ವ್ಯಾಪಾರದಲ್ಲಿ ಸ್ವಲ್ಪ ಸುಧಾರಣೆ ಕಂಡಿದೆ. ಒಂದೊಂದು ಮಳಿಗೆಗಳಲ್ಲಿ ವಿವಿಧ ಬಗೆಯ ಪಟಾಕಿಗಳು ಸುರಸುರ ಬತ್ತಿ, ಹೂವಿನ ಬತ್ತಿ, ಚಕ್ಕರ್, ಮಿರ್ಚಿ ಪಟಾಕಿ, ಆಕಾಶ ಬಾಣ ಹಾಗೂ ಇತರೆ ಪಟಾಕಿಗಳಿದ್ದವು. ಪಟಾಕಿಯ ಬೆಲೆ ಕಡಿಮೆ ಮಾಡುವವರ ಬಳಿ ಜನರು ಹೆಚ್ಚಾಗಿ ಹೋಗುತ್ತಿದ್ದರು. ನೂರಕ್ಕೂ ಹೆಚ್ಚು ಅಧಿಕ ಬೆಲೆಯ ಪಟಾಕಿಗಳನ್ನು ಜನರು ಖರೀದಿಸುತ್ತಿದ್ದರು. ಯಾವುದೇ ಅನಾಹುತ ಆಗದಂತೆ ಮಳಿಗೆಗಳಲ್ಲಿ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದ್ದಾರೆ.

andolana

Recent Posts

ರಾಜ್ಯದ 50 ವರ್ಷಗಳ ಹಳೆಯ ಎಲ್ಲಾ ಡ್ಯಾಂ ಗೇಟ್‌ ಬದಲಾವಣೆಗೆ ನಿರ್ಧಾರ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ರಾಜ್ಯದಲ್ಲಿ ಇರುವ 50 ವರ್ಷ ಹಳೆಯ ಎಲ್ಲಾ ಜಲಾಶಯಗಳ ಗೇಟ್‌ಗಳನ್ನು ಬದಲಾವಣೆ ಮಾಡಲು ನಮ್ಮ ಸರ್ಕಾರ ನಿರ್ಧಾರ ಮಾಡಿದೆ…

10 hours ago

ಗೃಹ ಬಳಕೆ ಗ್ಯಾಸ್‌ ಸಿಲಿಂಡರ್‌ಗೆ ಸಮಸ್ಯೆ ಇಲ್ಲ: ಸಚಿವ ಮುನಿಯಪ್ಪ

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಗ್ಯಾಸ್‌ ಸಿಲಿಂಡರ್‌ ಕೊರತೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಆಹಾರ ಇಲಾಖೆ ಸಚಿವ ಮುನಿಯಪ್ಪ ಪ್ರತಿಕ್ರಿಯೆ…

10 hours ago

ಗುಂಡ್ಲುಪೇಟೆ: ಬರಗಿ ಗ್ರಾಮದಲ್ಲಿ ದೇವಸ್ಥಾನದ ಬಾಗಿಲು ಮುರಿದು ದೇವರನ್ನೇ ಹೊತ್ತೋಯ್ದ ಕಳ್ಳರು

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು  ಗುಂಡ್ಲುಪೇಟೆ: ತಾಲ್ಲೂಕಿನಾದ್ಯಂತ ಗ್ರಾಮೀಣ ಭಾಗದ ದೇವಸ್ಥಾನಗಳ ಕಳ್ಳತನ ಪ್ರಕರಣ ಸಂಖ್ಯೆ ದಿನದಿಂದ ದಿನಕ್ಕೆ…

10 hours ago

ನಮ್‌ ಜೀವನ ನಮ್ದಲ್ಲಾ.? ಕನ್ನಡದಲ್ಲೇ ಪೋಸ್ಟ್‌ ಹಾಕಿದ ರಶ್ಮಿಕಾ ಮಂದಣ್ಣ

ವಿವಾಹದ ಬಳಿಕ ಭಾರೀ ಸುದ್ದಿಯಲ್ಲಿರುವ ನಟಿ ರಶ್ಮಿಕಾ ಮಂದಣ್ಣ ಅವರು ಕನ್ನಡದಲ್ಲಿಯೇ ಪೋಸ್ಟ್‌ ಒಂದನ್ನು ಹಾಕಿದ್ದಾರೆ. ಇಲ್ಲಿ ತನಕ ನನಗೆ…

10 hours ago

ಅನೈತಿಕ ಸಂಬಂಧ; ಜೋಡಿ ಕೊಲೆ: ಮಹಿಳೆ ಸೋದರನಿಂದಲೇ ಕೃತ್ಯ

ಮಡಿಕೇರಿ: ಅನೈತಿಕ ಸಂಬಂಧ ಹಿನ್ನೆಲೆ ಸಹೋದರಿ ಹಾಗೂ ಆಕೆಯ ಜೊತೆ ಸಹ ಜೀವನ ನಡೆಸುತ್ತಿದ್ದ ವ್ಯಕ್ತಿಯನ್ನು ೭೦ ವರ್ಷದ ವೃದ್ಧ…

11 hours ago

ಬಿಕ್ಲು ಶಿವ ಕೊಲೆ ಪ್ರಕರಣ: ಶಾಸಕ ಭೈರತಿ ಬಸವರಾಜುಗೆ ಜಾಮೀನು ಮಂಜೂರು

ಬೆಂಗಳೂರು: ರೌಡಿಶೀಟರ್‌ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜುಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ ಜಾಮೀನು…

11 hours ago