ಪ್ರಶಾಂತ್ ಎಸ್ ಮೈಸೂರು.
ಮೈಸೂರು: ಕಳೆದ ಎರಡು ವರ್ಷಗಳಿಂದ ಕೋವಿಡ್ ಹಿನ್ನೆಲೆಯಲ್ಲಿ ಮಂದವಾಗಿದ್ದ ಬೆಳಕಿನ ಹಬ್ಬ ದೀಪಾವಳಿ ಈ ಬಾರಿ ಜನರ ಸಡಗರಕ್ಕೆ ವೇದಿಕೆಯಾಗಿ ಪರಿಣಮಿಸಿದೆ.
ಜನರು ಉತ್ಸಾಹದಿಂದ ಅಗತ್ಯ ವಸ್ತುಗಳ ಖರೀದಿಯತ್ತ ಆಸಕ್ತಿ ತೋರಿದ್ದಾರೆ. ಹೊಸ ಬಟ್ಟೆ, ಹೂ, ಹಣ್ಣು, ಪಟಾಕಿ ಸೇರಿ ಇತರೆ ವಸ್ತುಗಳ ಖರೀದಿ ಭರಾಟೆ ಜೋರಾಗಿತ್ತು. ಹಿಂದೂಗಳು ವಿಜೃಂಭಣೆಯಿಂದ ಆಚರಿಸುವ ಈ ಹಬ್ಬದ ನಿಮಿತ್ತ ಆಕಾಶಬುಟ್ಟಿ, ಬಾಳೆ-ಕಬ್ಬು, ಚೆಂಡು ಹೂ, ಸೇವಂತಿಗೆ, ಕಾಕಡ ಮುಂತಾದ ಹೂಗಳ ಖರೀದಿಗೆ ಜನ ಮುಗಿಬಿದ್ದಿದ್ದರು. ಕಳೆದ ವರ್ಷಕ್ಕಿಂತ ಈ ಬಾರಿ ಬೆಳಕಿನ ಹಬ್ಬಕ್ಕೆ ಕಳೆ ಬಂದಿದೆ.
ಎಲ್ಲೆಲ್ಲೂ ಜನಜಂಗುಳಿ: ಬೆಳಕಿನ ಹಬ್ಬದ ನಿಮಿತ್ತ ನಗರದ ಗಾಂಧಿಚೌಕ, ಅಗ್ರಹಾರ , ಕೆ.ಆರ್. ಸರ್ಕಲ್, ಚಿಕ್ಕ ಗಡಿಯಾರ ವೃತ್ತ, ಸೇರಿ ನಾನಾ ಕಡೆ ಹೂವಿನ ವ್ಯಾಪಾರ, ಹಣ್ಣು, ತರಕಾರಿ ಹಾಗೂ ಬಾಳೆ ಎಲೆ, ಕಂದುಗಳ ವ್ಯಾಪಾರ ಜೋರಾಗಿತ್ತು. ನಗರದ ಟೌನ್ಹಾಲ್ ಸೇರಿದಂತೆ ನಾನಾ ಕಡೆ ಪಟಾಕಿ ಅಂಗಡಿಗಳ ಮುಂದೆ ಗ್ರಾಹಕರು ಸಾಲುಗಟ್ಟಿ ನಿಂತು ನಾನಾ ರೀತಿಯ ಸಿಡಿಮದ್ದು ಹಾಗೂ ಮಣ್ಣಿನ ದೀಪ ಕೊಂಡುಕೊಳ್ಳುವ ದೃಶ್ಯ ಕಂಡುಬಂತು.
ಪಟಾಕಿ ಖರೀದಿ ಜೋರು : ಬೆಳಕಿನ ಹಬ್ಬ ದೀಪಾವಳಿ ಸಂಭ್ರಮ ಎಲ್ಲೆಡೆ ಮನೆ ಮಾಡಿದ್ದು, ಜಿಲ್ಲೆಯಲ್ಲಿ ಪಟಾಕಿ ಖರೀದಿಯೂ ಜೋರಾಗಿದೆ. ನಗರ ಸೇರಿದಂತೆ ಜಿಲ್ಲಾದ್ಯಂತ ದೀಪಾವಳಿ ಹಬ್ಬಕ್ಕೆ ಪಟಾಕಿ ಖರೀದಿ ಭರಾಟೆ ಈಗಾಗಲೇ ಆರಂಭವಾಗಿದ್ದು, ಇದು ಪಟಾಕಿ ವರ್ತಕರನ್ನು ಕೊಂಚ ನೆಮ್ಮದಿಯ ನಿಟ್ಟುಸಿರು ಬಿಡುವಂತೆ ಮಾಡಿದೆ.
ನಗರದ ಪುರಭವನ ಮೈದಾನದಲ್ಲಿ ಪಟಾಕಿ ಮಳಿಗೆಗಳನ್ನು ಹಾಕಲಾಗಿದ್ದು, ವ್ಯಾಪಾರದಲ್ಲಿ ಸ್ವಲ್ಪ ಸುಧಾರಣೆ ಕಂಡಿದೆ. ಒಂದೊಂದು ಮಳಿಗೆಗಳಲ್ಲಿ ವಿವಿಧ ಬಗೆಯ ಪಟಾಕಿಗಳು ಸುರಸುರ ಬತ್ತಿ, ಹೂವಿನ ಬತ್ತಿ, ಚಕ್ಕರ್, ಮಿರ್ಚಿ ಪಟಾಕಿ, ಆಕಾಶ ಬಾಣ ಹಾಗೂ ಇತರೆ ಪಟಾಕಿಗಳಿದ್ದವು. ಪಟಾಕಿಯ ಬೆಲೆ ಕಡಿಮೆ ಮಾಡುವವರ ಬಳಿ ಜನರು ಹೆಚ್ಚಾಗಿ ಹೋಗುತ್ತಿದ್ದರು. ನೂರಕ್ಕೂ ಹೆಚ್ಚು ಅಧಿಕ ಬೆಲೆಯ ಪಟಾಕಿಗಳನ್ನು ಜನರು ಖರೀದಿಸುತ್ತಿದ್ದರು. ಯಾವುದೇ ಅನಾಹುತ ಆಗದಂತೆ ಮಳಿಗೆಗಳಲ್ಲಿ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದ್ದಾರೆ.
ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…
ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…