ಮೈಸೂರು

ಬೆಳಕಿನ ಹಬ್ಬಕ್ಕೆ ಭರದ ಸಿದ್ಧತೆ: ಜೋರಾಗಿದೆ ಖರೀದಿ ಭರಾಟೆ

ಪ್ರಶಾಂತ್‌ ಎಸ್‌ ಮೈಸೂರು.

ಮೈಸೂರು: ಕಳೆದ ಎರಡು ವರ್ಷಗಳಿಂದ ಕೋವಿಡ್ ಹಿನ್ನೆಲೆಯಲ್ಲಿ ಮಂದವಾಗಿದ್ದ ಬೆಳಕಿನ ಹಬ್ಬ ದೀಪಾವಳಿ ಈ ಬಾರಿ ಜನರ ಸಡಗರಕ್ಕೆ ವೇದಿಕೆಯಾಗಿ ಪರಿಣಮಿಸಿದೆ.
ಜನರು ಉತ್ಸಾಹದಿಂದ ಅಗತ್ಯ ವಸ್ತುಗಳ ಖರೀದಿಯತ್ತ ಆಸಕ್ತಿ ತೋರಿದ್ದಾರೆ. ಹೊಸ ಬಟ್ಟೆ, ಹೂ, ಹಣ್ಣು, ಪಟಾಕಿ ಸೇರಿ ಇತರೆ ವಸ್ತುಗಳ ಖರೀದಿ ಭರಾಟೆ ಜೋರಾಗಿತ್ತು. ಹಿಂದೂಗಳು ವಿಜೃಂಭಣೆಯಿಂದ ಆಚರಿಸುವ ಈ ಹಬ್ಬದ ನಿಮಿತ್ತ ಆಕಾಶಬುಟ್ಟಿ, ಬಾಳೆ-ಕಬ್ಬು, ಚೆಂಡು ಹೂ, ಸೇವಂತಿಗೆ, ಕಾಕಡ ಮುಂತಾದ ಹೂಗಳ ಖರೀದಿಗೆ ಜನ ಮುಗಿಬಿದ್ದಿದ್ದರು. ಕಳೆದ ವರ್ಷಕ್ಕಿಂತ ಈ ಬಾರಿ ಬೆಳಕಿನ ಹಬ್ಬಕ್ಕೆ ಕಳೆ ಬಂದಿದೆ.

ಎಲ್ಲೆಲ್ಲೂ ಜನಜಂಗುಳಿ: ಬೆಳಕಿನ ಹಬ್ಬದ ನಿಮಿತ್ತ ನಗರದ ಗಾಂಧಿಚೌಕ, ಅಗ್ರಹಾರ , ಕೆ.ಆರ್. ಸರ್ಕಲ್, ಚಿಕ್ಕ ಗಡಿಯಾರ ವೃತ್ತ, ಸೇರಿ ನಾನಾ ಕಡೆ ಹೂವಿನ ವ್ಯಾಪಾರ, ಹಣ್ಣು, ತರಕಾರಿ ಹಾಗೂ ಬಾಳೆ ಎಲೆ, ಕಂದುಗಳ ವ್ಯಾಪಾರ ಜೋರಾಗಿತ್ತು. ನಗರದ ಟೌನ್‌ಹಾಲ್ ಸೇರಿದಂತೆ ನಾನಾ ಕಡೆ ಪಟಾಕಿ ಅಂಗಡಿಗಳ ಮುಂದೆ ಗ್ರಾಹಕರು ಸಾಲುಗಟ್ಟಿ ನಿಂತು ನಾನಾ ರೀತಿಯ ಸಿಡಿಮದ್ದು ಹಾಗೂ ಮಣ್ಣಿನ ದೀಪ ಕೊಂಡುಕೊಳ್ಳುವ ದೃಶ್ಯ ಕಂಡುಬಂತು.

ಪಟಾಕಿ ಖರೀದಿ ಜೋರು : ಬೆಳಕಿನ ಹಬ್ಬ ದೀಪಾವಳಿ ಸಂಭ್ರಮ ಎಲ್ಲೆಡೆ ಮನೆ ಮಾಡಿದ್ದು, ಜಿಲ್ಲೆಯಲ್ಲಿ ಪಟಾಕಿ ಖರೀದಿಯೂ ಜೋರಾಗಿದೆ. ನಗರ ಸೇರಿದಂತೆ ಜಿಲ್ಲಾದ್ಯಂತ ದೀಪಾವಳಿ ಹಬ್ಬಕ್ಕೆ ಪಟಾಕಿ ಖರೀದಿ ಭರಾಟೆ ಈಗಾಗಲೇ ಆರಂಭವಾಗಿದ್ದು, ಇದು ಪಟಾಕಿ ವರ್ತಕರನ್ನು ಕೊಂಚ ನೆಮ್ಮದಿಯ ನಿಟ್ಟುಸಿರು ಬಿಡುವಂತೆ ಮಾಡಿದೆ.

ನಗರದ ಪುರಭವನ ಮೈದಾನದಲ್ಲಿ ಪಟಾಕಿ ಮಳಿಗೆಗಳನ್ನು ಹಾಕಲಾಗಿದ್ದು, ವ್ಯಾಪಾರದಲ್ಲಿ ಸ್ವಲ್ಪ ಸುಧಾರಣೆ ಕಂಡಿದೆ. ಒಂದೊಂದು ಮಳಿಗೆಗಳಲ್ಲಿ ವಿವಿಧ ಬಗೆಯ ಪಟಾಕಿಗಳು ಸುರಸುರ ಬತ್ತಿ, ಹೂವಿನ ಬತ್ತಿ, ಚಕ್ಕರ್, ಮಿರ್ಚಿ ಪಟಾಕಿ, ಆಕಾಶ ಬಾಣ ಹಾಗೂ ಇತರೆ ಪಟಾಕಿಗಳಿದ್ದವು. ಪಟಾಕಿಯ ಬೆಲೆ ಕಡಿಮೆ ಮಾಡುವವರ ಬಳಿ ಜನರು ಹೆಚ್ಚಾಗಿ ಹೋಗುತ್ತಿದ್ದರು. ನೂರಕ್ಕೂ ಹೆಚ್ಚು ಅಧಿಕ ಬೆಲೆಯ ಪಟಾಕಿಗಳನ್ನು ಜನರು ಖರೀದಿಸುತ್ತಿದ್ದರು. ಯಾವುದೇ ಅನಾಹುತ ಆಗದಂತೆ ಮಳಿಗೆಗಳಲ್ಲಿ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದ್ದಾರೆ.

andolana

Recent Posts

ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ತುಟ್ಟಿ ಭತ್ಯೆ ಹೆಚ್ಚಳ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ(ಡಿಎ)ಯನ್ನು ಶೇ.1.50ರಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 2026 ಜನವರಿ 1ರಿಂದ ಅನ್ವಯವಾಗುವಂತೆ…

10 hours ago

ಮೇ.13ರಂದು ಬೆಂಗಳೂರು ಜನತೆಗೆ ಬಿಗ್‌ ಗಿಫ್ಟ್:‌ ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಮೇ.13ಕ್ಕೆ ಬೆಂಗಳೂರು ಜನತೆಗೆ ಬಿಗ್‌ ಗಿಫ್ಟ್‌ ನೀಡಲಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ…

10 hours ago

ದೇವರಾಜ ಮಾರುಕಟ್ಟೆಗೆ ಸಂಸದ ಯದುವೀರ್‌ ಒಡೆಯರ್‌ ಭೇಟಿ

ಮೈಸೂರು: ಮೈಸೂರಿನ ಪಾರಂಪರಿಕ ಕಟ್ಟಡದಲ್ಲಿ ಒಂದಾಗಿರುವ ದೇವರಾಜ ಮಾರುಕಟ್ಟೆಗೆ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರಿಂದು ಭೇಟಿ ನೀಡಿ…

11 hours ago

ಪಂಚಭೂತಗಳಲ್ಲಿ ಲೀನರಾದ ಸಚಿವ ಡಿ.ಸುಧಾಕರ್‌

ಚಿತ್ರದುರ್ಗ: ಸಕಲ ಸರ್ಕಾರಿ ಗೌರವಗಳೊಂದಿಗೆ ಚಳ್ಳಕೆರೆಯ ಚಿತಾಗಾರದಲ್ಲಿ ಹಿರಿಯೂರು ಶಾಸಕ ಡಿ.ಸುಧಾಕರ್‌ ಅವರ ಅಂತ್ಯಕ್ರಿಯೆ ನೆರವೇರಿತು. ಬೆಳಿಗ್ಗೆಯಿಂದ ಸುಧಾಕರ್‌ ಅವರ…

12 hours ago

ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತನ ಮೇಲೆ ಕಾಡಾನೆ ದಾಳಿ: ಗಂಭೀರ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಜಮೀನಿನಲ್ಲಿದ್ದ ರೈತನೋರ್ವನ ಮೇಲೆ ಕಾಡಾನೆ ದಾಳಿ ಮಾಡಿದ ಪರಿಣಾಮ ತೀವ್ರ…

12 hours ago

ಎಂ.ಕೆ.ಸ್ಟಾಲಿನ್‌ ಭೇಟಿಯಾದ ತಮಿಳುನಾಡು ನೂತನ ಸಿಎಂ ವಿಜಯ್‌

ಚೆನ್ನೈ: ತಮಿಳುನಾಡಿನ ನೂತನ ಸಿಎಂ ವಿಜಯ್‌ ಅವರಿಂದು ಮಾಜಿ ಸಿಎಂ ಎಂ.ಕೆ.ಸ್ಟಾಲಿನ್‌ ಅವರನ್ನು ಭೇಟಿಯಾದರು. ಸದ್ಯ ಇಂದಿನ ಸಭೆಯಲ್ಲಿ ಇಬ್ಬರು…

13 hours ago