ಮೈಸೂರು : ಬೆಳಕಿನ ಹಬ್ಬ ದೀಪಾವಳಿಯ ಸಂಭ್ರಮದ ನಡುವೆ ವಿದ್ಯುತ್ ಸುರಕ್ಷತಾ ಕ್ರಮಗಳನ್ನು ಅನುಸರಿಸುವಂತೆ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್) ಮನವಿ ಮಾಡಿದೆ.
ದೀಪಾವಳಿ ಹಬ್ಬದ ಆಚರಣೆಯ ಸಂದರ್ಭದಲ್ಲಿ ಅನೇಕರು ತಮ್ಮ ಮನೆ ಹಾಗೂ ಅಂಗಡಿಗಳಿಗೆ ವಿದ್ಯುತ್ ದೀಪಗಳಿಂದ ಅಲಂಕೃತಗೊಳಿಸುತ್ತಾರೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಸೀರಿಯಲ್ ಲೈಟ್ಗಳನ್ನು ಮತ್ತು ವಿದ್ಯುತ್ ತಂತಿಗಳನ್ನು ನೀರಿನಿಂದ ದೂರವಿರಿಸಬೇಕು. ಪ್ಲಗ್ ಪಾಯಿಂಟ್ಗಳಲ್ಲಿ ಅತಿಯಾದ ಲೋಡ್ ಹಾಕಬೇಡಿ, ಇದು ಶಾರ್ಟ್ ಸರ್ಕ್ಯೂಟ್ ಉಂಟಾಗುವ ಸಾಧ್ಯತೆ ಇರಲಿದೆ. ಹಣತೆ, ದೀಪಗಳನ್ನು ಕೇಬಲ್ಗಳು, ವಿದ್ಯುತ್ ತಂತಿಗಳು ಹಾಗೂ ಪ್ಲಗ್ಗಳಿಂದ ದೂರವಿರಿಸಿ.
ಇದನ್ನು ಓದಿ: ಚಾಮರಾಜನಗರ| ಮಲೆ ಮಹದೇಶ್ವರ ಬೆಟ್ಟದಲ್ಲಿ ದೀಪಾವಳಿ ಜಾತ್ರೆಯ ಸಂಭ್ರಮ
ಮುಖ್ಯವಾಗಿ ಪಟಾಕಿ ಹಚ್ಚುವ ಸಂದರ್ಭದಲ್ಲಿ ವಿದ್ಯುತ್ ಕಂಬಗಳು ಅಥವಾ ಟ್ರಾನ್ಸ್ ಫಾರ್ಮರ್ಗಳು ಇರುವ ಸ್ಥಳಗಳ ಬಗ್ಗೆ ನಿಗಾವಹಿಸಿ ಮತ್ತು ಇಂತಹ ಸ್ಥಳಗಳಲ್ಲಿ ಪಟಾಕಿ ಹಚ್ಚುವುದನ್ನು ತಪ್ಪಿಸಿ. ವಿದ್ಯುತ್ ಉಪಕರಣಗಳಿಂದ ಮಕ್ಕಳನ್ನು ದೂರವಿರಿಸಿ ಹಾಗೂ ಹಿರಿಯ ಸಮ್ಮುಖದಲ್ಲಿ ಪಟಾಕಿ ಹಚ್ಚುವ ಹಾಗೂ ದೀಪಗಳನ್ನು ಇರಿಸುವಂತೆ ಗಮನವಹಿಸಿ. ವಿದ್ಯುತ್ ಸಮಸ್ಯೆಗಳು ಅಥವಾ ಅವಘಡಗಳು ಸಂಭವಿಸಿದಲ್ಲಿ ಗ್ರಾಹಕ ಸಹಾಯವಾಣಿ 1912ಗೆ ಮಾಹಿತಿ ನೀಡಬೇಕಿದೆ. ಸೆಸ್ಕ್ ವತಿಯಿಂದ ನೀಡಿರುವ ಸುರಕ್ಷತಾ ಕ್ರಮಗಳನ್ನು ತಪ್ಪದೇ ಅನುಸರಿಸುವಂತೆ ಸೆಸ್ಕ್ ವ್ಯವಸ್ಥಾಪಕ ನಿರ್ದೇಶಕರಾದ ಕೆ.ಎಂ. ಮುನಿಗೋಪಾಲ್ ರಾಜು ಅವರು ಪತ್ರಿಕಾ ಪ್ರಕಟಣೆಯಲ್ಲಿ ಕೋರಿದ್ದಾರೆ.
ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…
ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…
ನವದೆಹಲಿ: ದೇಶಾದ್ಯಂತ ಇಂಡಿಗೋ ವಿಮಾನದ ಹಾರಾಟದಲ್ಲಿ ಭಾರೀ ವ್ಯತ್ಯಯ ಉಂಟಾದ ಬೆನ್ನಲ್ಲೇ ಕೇಂದ್ರ ನಾಗರಿಕ ವಿಮಾನಯಾನ ನಿರ್ದೇಶನಾಲಯ ಪೈಲಟ್ಗಳ ರಜಾ…
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…
ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…
ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…