ಮೈಸೂರು

ದೀಪಾವಳಿ ಸಂಭ್ರಮ ; ಇರಲಿ ಎಚ್ಚರಿಕೆ

ಮೈಸೂರು : ಬೆಳಕಿನ ಹಬ್ಬ ದೀಪಾವಳಿಯ ಸಂಭ್ರಮದ ನಡುವೆ ವಿದ್ಯುತ್ ಸುರಕ್ಷತಾ ಕ್ರಮಗಳನ್ನು ಅನುಸರಿಸುವಂತೆ ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮ ನಿಯಮಿತ(ಸೆಸ್ಕ್‌) ಮನವಿ ಮಾಡಿದೆ.

ದೀಪಾವಳಿ ಹಬ್ಬದ ಆಚರಣೆಯ ಸಂದರ್ಭದಲ್ಲಿ ಅನೇಕರು ತಮ್ಮ ಮನೆ ಹಾಗೂ ಅಂಗಡಿಗಳಿಗೆ ವಿದ್ಯುತ್‌ ದೀಪಗಳಿಂದ ಅಲಂಕೃತಗೊಳಿಸುತ್ತಾರೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಸೀರಿಯಲ್ ಲೈಟ್‌ಗಳನ್ನು ಮತ್ತು ವಿದ್ಯುತ್ ತಂತಿಗಳನ್ನು ನೀರಿನಿಂದ ದೂರವಿರಿಸಬೇಕು. ಪ್ಲಗ್ ಪಾಯಿಂಟ್‌ಗಳಲ್ಲಿ ಅತಿಯಾದ ಲೋಡ್‌ ಹಾಕಬೇಡಿ, ಇದು ಶಾರ್ಟ್ ಸರ್ಕ್ಯೂಟ್‌ ಉಂಟಾಗುವ ಸಾಧ್ಯತೆ ಇರಲಿದೆ. ಹಣತೆ, ದೀಪಗಳನ್ನು ಕೇಬಲ್‌ಗಳು, ವಿದ್ಯುತ್‌ ತಂತಿಗಳು ಹಾಗೂ ಪ್ಲಗ್‌ಗಳಿಂದ ದೂರವಿರಿಸಿ.

ಇದನ್ನು ಓದಿ: ಚಾಮರಾಜನಗರ| ಮಲೆ ಮಹದೇಶ್ವರ ಬೆಟ್ಟದಲ್ಲಿ ದೀಪಾವಳಿ ಜಾತ್ರೆಯ ಸಂಭ್ರಮ

ಮುಖ್ಯವಾಗಿ ಪಟಾಕಿ ಹಚ್ಚುವ ಸಂದರ್ಭದಲ್ಲಿ ವಿದ್ಯುತ್‌ ಕಂಬಗಳು ಅಥವಾ ಟ್ರಾನ್ಸ್‌ ಫಾರ್ಮರ್‌ಗಳು ಇರುವ ಸ್ಥಳಗಳ ಬಗ್ಗೆ ನಿಗಾವಹಿಸಿ ಮತ್ತು ಇಂತಹ ಸ್ಥಳಗಳಲ್ಲಿ ಪಟಾಕಿ ಹಚ್ಚುವುದನ್ನು ತಪ್ಪಿಸಿ. ವಿದ್ಯುತ್ ಉಪಕರಣಗಳಿಂದ ಮಕ್ಕಳನ್ನು ದೂರವಿರಿಸಿ ಹಾಗೂ ಹಿರಿಯ ಸಮ್ಮುಖದಲ್ಲಿ ಪಟಾಕಿ ಹಚ್ಚುವ ಹಾಗೂ ದೀಪಗಳನ್ನು ಇರಿಸುವಂತೆ ಗಮನವಹಿಸಿ. ವಿದ್ಯುತ್‌ ಸಮಸ್ಯೆಗಳು  ಅಥವಾ ಅವಘಡಗಳು ಸಂಭವಿಸಿದಲ್ಲಿ ಗ್ರಾಹಕ ಸಹಾಯವಾಣಿ 1912ಗೆ ಮಾಹಿತಿ ನೀಡಬೇಕಿದೆ. ಸೆಸ್ಕ್‌ ವತಿಯಿಂದ ನೀಡಿರುವ ಸುರಕ್ಷತಾ ಕ್ರಮಗಳನ್ನು ತಪ್ಪದೇ ಅನುಸರಿಸುವಂತೆ ಸೆಸ್ಕ್‌ ವ್ಯವಸ್ಥಾಪಕ ನಿರ್ದೇಶಕರಾದ ಕೆ.ಎಂ. ಮುನಿಗೋಪಾಲ್‌ ರಾಜು ಅವರು ಪತ್ರಿಕಾ ಪ್ರಕಟಣೆಯಲ್ಲಿ ಕೋರಿದ್ದಾರೆ.

ಆಂದೋಲನ ಡೆಸ್ಕ್

Recent Posts

ಸಂಧಾನ ಯಶಸ್ವಿ : ಮುಷ್ಕರ ಹಿಂಪಡೆದ ವೈದ್ಯರು

 ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ನಾಳೆಯಿಂದ  (ಮಾರ್ಚ್ 11) ಕರೆ ನೀಡಿದ್ದ ಅನಿರ್ದಿಷ್ಟಾವಧಿ ಮುಷ್ಕರವನ್ನು…

3 hours ago

ಪರಿಷತ್‌ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ : ಜೆಡಿಎಸ್‌ಗೆ 1 ಸೀಟು

ಬೆಂಗಳೂರು : ಕರ್ನಾಟಕ ವಿಧಾನಪರಿಷತ್‌ನ ನಾಲ್ಕು ಕ್ಷೇತ್ರಗಳ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಮೈತ್ರಿ ಪಕ್ಷ ಜೆಡಿಎಸ್‌ಗೆ ಒಂದು…

5 hours ago

ಎಲ್‌ಪಿಜಿ ಸಿಲಿಂಡರ್‌ ವ್ಯತ್ಯಯ, ಬೆಲೆ ಏರಿಕೆ : ಬಾಯಿ ಬಿಡದ ಬಿಜೆಪಿ ; ಡಿ.ಕೆ.ಶಿವಕುಮಾರ್‌ ಆರೋಪ

ಬೆಂಗಳೂರು : ಅಂತರರಾಷ್ಟ್ರೀಯ ಮಹಿಳಾ ದಿನದಂದೆ ಗ್ಯಾಸ್ ಸಿಲಿಂಡರ್ ಬೆಲೆಯನ್ನ ಕೇಂದ್ರ ಸರ್ಕಾರ 60 ರೂಪಾಯಿ ಏರಿಕೆ ಮಾಡಿದೆ. ಜೊತೆಗೆ…

5 hours ago

ಹುಲಿ ದಾಳಿಗೆ ಹಸು ಬಲಿ ; ರೈತ ಪಾರು

ಗುಂಡ್ಲುಪೇಟೆ : ಜಮೀನಿನಲ್ಲಿ ಮೇಯುತ್ತಿದ್ದ ಹಸುವಿನ ಮೇಲೆ ಹುಲಿಯೊಂದು ದಾಳಿ ನಡೆಸಿದೆ. ಈ ವೇಳೆ ರೈತ ತನ್ನ ಹಸು ರಕ್ಷಿಸಲು…

6 hours ago

ಎಲ್‌ಪಿಜಿ ಕೊರತೆ | ಕೇಂದ್ರದಿಂದ 1955ರ ಕಾಯ್ದೆ ಜಾರಿ ; ಏನಿದು ಅಗತ್ಯ ಸರಕು ಕಾಯ್ದೆ?

ಹೊಸದಿಲ್ಲಿ : ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ಇಂಧನ ಪೂರೈಕೆಯ ಮೇಲೆ ಹೆಚ್ಚುತ್ತಿರುವ ಒತ್ತಡದ ನಡುವೆ, ದೇಶೀಯ ಇಂಧನ ಮಾರುಕಟ್ಟೆಯನ್ನು…

6 hours ago

ನ್ಯಾಯಾಂಗ ಭ್ರಷ್ಟಾಚಾರ ಕುರಿತ ಅಧ್ಯಾಯ ವಿವಾದ ; ಸಾರ್ವಜನಿಕ ಕ್ಷಮೆ ಯಾಚಿಸಿದ ಎನ್‌ಸಿಇಆರ್‌ಟಿ

ಹೊಸದಿಲ್ಲಿ : ರಾಷ್ಟ್ರೀಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಪರಿಷತ್ (ಎನ್‌ಸಿಇಆರ್‌ಟಿ) ಇತ್ತೀಚೆಗೆ ಪ್ರಕಟಿಸಿದ್ದ 8ನೇ ತರಗತಿಯ ಸಮಾಜ ವಿಜ್ಞಾನ…

6 hours ago