ಮೈಸೂರು

ದೀಪಾವಳಿ ಸಂಭ್ರಮ ; ಇರಲಿ ಎಚ್ಚರಿಕೆ

ಮೈಸೂರು : ಬೆಳಕಿನ ಹಬ್ಬ ದೀಪಾವಳಿಯ ಸಂಭ್ರಮದ ನಡುವೆ ವಿದ್ಯುತ್ ಸುರಕ್ಷತಾ ಕ್ರಮಗಳನ್ನು ಅನುಸರಿಸುವಂತೆ ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮ ನಿಯಮಿತ(ಸೆಸ್ಕ್‌) ಮನವಿ ಮಾಡಿದೆ.

ದೀಪಾವಳಿ ಹಬ್ಬದ ಆಚರಣೆಯ ಸಂದರ್ಭದಲ್ಲಿ ಅನೇಕರು ತಮ್ಮ ಮನೆ ಹಾಗೂ ಅಂಗಡಿಗಳಿಗೆ ವಿದ್ಯುತ್‌ ದೀಪಗಳಿಂದ ಅಲಂಕೃತಗೊಳಿಸುತ್ತಾರೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಸೀರಿಯಲ್ ಲೈಟ್‌ಗಳನ್ನು ಮತ್ತು ವಿದ್ಯುತ್ ತಂತಿಗಳನ್ನು ನೀರಿನಿಂದ ದೂರವಿರಿಸಬೇಕು. ಪ್ಲಗ್ ಪಾಯಿಂಟ್‌ಗಳಲ್ಲಿ ಅತಿಯಾದ ಲೋಡ್‌ ಹಾಕಬೇಡಿ, ಇದು ಶಾರ್ಟ್ ಸರ್ಕ್ಯೂಟ್‌ ಉಂಟಾಗುವ ಸಾಧ್ಯತೆ ಇರಲಿದೆ. ಹಣತೆ, ದೀಪಗಳನ್ನು ಕೇಬಲ್‌ಗಳು, ವಿದ್ಯುತ್‌ ತಂತಿಗಳು ಹಾಗೂ ಪ್ಲಗ್‌ಗಳಿಂದ ದೂರವಿರಿಸಿ.

ಇದನ್ನು ಓದಿ: ಚಾಮರಾಜನಗರ| ಮಲೆ ಮಹದೇಶ್ವರ ಬೆಟ್ಟದಲ್ಲಿ ದೀಪಾವಳಿ ಜಾತ್ರೆಯ ಸಂಭ್ರಮ

ಮುಖ್ಯವಾಗಿ ಪಟಾಕಿ ಹಚ್ಚುವ ಸಂದರ್ಭದಲ್ಲಿ ವಿದ್ಯುತ್‌ ಕಂಬಗಳು ಅಥವಾ ಟ್ರಾನ್ಸ್‌ ಫಾರ್ಮರ್‌ಗಳು ಇರುವ ಸ್ಥಳಗಳ ಬಗ್ಗೆ ನಿಗಾವಹಿಸಿ ಮತ್ತು ಇಂತಹ ಸ್ಥಳಗಳಲ್ಲಿ ಪಟಾಕಿ ಹಚ್ಚುವುದನ್ನು ತಪ್ಪಿಸಿ. ವಿದ್ಯುತ್ ಉಪಕರಣಗಳಿಂದ ಮಕ್ಕಳನ್ನು ದೂರವಿರಿಸಿ ಹಾಗೂ ಹಿರಿಯ ಸಮ್ಮುಖದಲ್ಲಿ ಪಟಾಕಿ ಹಚ್ಚುವ ಹಾಗೂ ದೀಪಗಳನ್ನು ಇರಿಸುವಂತೆ ಗಮನವಹಿಸಿ. ವಿದ್ಯುತ್‌ ಸಮಸ್ಯೆಗಳು  ಅಥವಾ ಅವಘಡಗಳು ಸಂಭವಿಸಿದಲ್ಲಿ ಗ್ರಾಹಕ ಸಹಾಯವಾಣಿ 1912ಗೆ ಮಾಹಿತಿ ನೀಡಬೇಕಿದೆ. ಸೆಸ್ಕ್‌ ವತಿಯಿಂದ ನೀಡಿರುವ ಸುರಕ್ಷತಾ ಕ್ರಮಗಳನ್ನು ತಪ್ಪದೇ ಅನುಸರಿಸುವಂತೆ ಸೆಸ್ಕ್‌ ವ್ಯವಸ್ಥಾಪಕ ನಿರ್ದೇಶಕರಾದ ಕೆ.ಎಂ. ಮುನಿಗೋಪಾಲ್‌ ರಾಜು ಅವರು ಪತ್ರಿಕಾ ಪ್ರಕಟಣೆಯಲ್ಲಿ ಕೋರಿದ್ದಾರೆ.

ಆಂದೋಲನ ಡೆಸ್ಕ್

Recent Posts

ರಾಮಕೃಷ್ಣ ಆಶ್ರಮದವರು ಕೊಟ್ಟ ಮಾತು ಉಳಿಸಿಕೊಳ್ಳಬೇಕಿತ್ತು

ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್‌ಟಿಎಂ) ಶಾಲೆ’…

3 hours ago

ಅರವತ್ತು ದಿನಗಳು ಕಳೆಯಿತು…ಫಲದ ನಿರೀಕ್ಷೆಯಲ್ಲಿ!

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…

3 hours ago

ಇಂದು ಕೊಡಗು ಜಿಲ್ಲೆಯಲ್ಲಿ ಕಕ್ಕಡ 18ರ ಸಂಭ್ರಮ

ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…

3 hours ago

ಸಾರ್ವಜನಿಕರ ಶೌಚಾಲಯಕ್ಕೆ ಬೇಕಿದೆ ಚಿಕಿತ್ಸೆ!

ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…

3 hours ago

ಗ್ರಾಪಂಗಳ ಅತ್ಯುತ್ತಮ ಕೆಲಸಕ್ಕೆ ಉತ್ತಮ ಪ್ರಶಸ್ತಿ

ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…

3 hours ago

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

1 day ago