ಮೈಸೂರು

ದೀಪಾವಳಿ ಸಂಭ್ರಮ ; ಇರಲಿ ಎಚ್ಚರಿಕೆ

ಮೈಸೂರು : ಬೆಳಕಿನ ಹಬ್ಬ ದೀಪಾವಳಿಯ ಸಂಭ್ರಮದ ನಡುವೆ ವಿದ್ಯುತ್ ಸುರಕ್ಷತಾ ಕ್ರಮಗಳನ್ನು ಅನುಸರಿಸುವಂತೆ ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮ ನಿಯಮಿತ(ಸೆಸ್ಕ್‌) ಮನವಿ ಮಾಡಿದೆ.

ದೀಪಾವಳಿ ಹಬ್ಬದ ಆಚರಣೆಯ ಸಂದರ್ಭದಲ್ಲಿ ಅನೇಕರು ತಮ್ಮ ಮನೆ ಹಾಗೂ ಅಂಗಡಿಗಳಿಗೆ ವಿದ್ಯುತ್‌ ದೀಪಗಳಿಂದ ಅಲಂಕೃತಗೊಳಿಸುತ್ತಾರೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಸೀರಿಯಲ್ ಲೈಟ್‌ಗಳನ್ನು ಮತ್ತು ವಿದ್ಯುತ್ ತಂತಿಗಳನ್ನು ನೀರಿನಿಂದ ದೂರವಿರಿಸಬೇಕು. ಪ್ಲಗ್ ಪಾಯಿಂಟ್‌ಗಳಲ್ಲಿ ಅತಿಯಾದ ಲೋಡ್‌ ಹಾಕಬೇಡಿ, ಇದು ಶಾರ್ಟ್ ಸರ್ಕ್ಯೂಟ್‌ ಉಂಟಾಗುವ ಸಾಧ್ಯತೆ ಇರಲಿದೆ. ಹಣತೆ, ದೀಪಗಳನ್ನು ಕೇಬಲ್‌ಗಳು, ವಿದ್ಯುತ್‌ ತಂತಿಗಳು ಹಾಗೂ ಪ್ಲಗ್‌ಗಳಿಂದ ದೂರವಿರಿಸಿ.

ಇದನ್ನು ಓದಿ: ಚಾಮರಾಜನಗರ| ಮಲೆ ಮಹದೇಶ್ವರ ಬೆಟ್ಟದಲ್ಲಿ ದೀಪಾವಳಿ ಜಾತ್ರೆಯ ಸಂಭ್ರಮ

ಮುಖ್ಯವಾಗಿ ಪಟಾಕಿ ಹಚ್ಚುವ ಸಂದರ್ಭದಲ್ಲಿ ವಿದ್ಯುತ್‌ ಕಂಬಗಳು ಅಥವಾ ಟ್ರಾನ್ಸ್‌ ಫಾರ್ಮರ್‌ಗಳು ಇರುವ ಸ್ಥಳಗಳ ಬಗ್ಗೆ ನಿಗಾವಹಿಸಿ ಮತ್ತು ಇಂತಹ ಸ್ಥಳಗಳಲ್ಲಿ ಪಟಾಕಿ ಹಚ್ಚುವುದನ್ನು ತಪ್ಪಿಸಿ. ವಿದ್ಯುತ್ ಉಪಕರಣಗಳಿಂದ ಮಕ್ಕಳನ್ನು ದೂರವಿರಿಸಿ ಹಾಗೂ ಹಿರಿಯ ಸಮ್ಮುಖದಲ್ಲಿ ಪಟಾಕಿ ಹಚ್ಚುವ ಹಾಗೂ ದೀಪಗಳನ್ನು ಇರಿಸುವಂತೆ ಗಮನವಹಿಸಿ. ವಿದ್ಯುತ್‌ ಸಮಸ್ಯೆಗಳು  ಅಥವಾ ಅವಘಡಗಳು ಸಂಭವಿಸಿದಲ್ಲಿ ಗ್ರಾಹಕ ಸಹಾಯವಾಣಿ 1912ಗೆ ಮಾಹಿತಿ ನೀಡಬೇಕಿದೆ. ಸೆಸ್ಕ್‌ ವತಿಯಿಂದ ನೀಡಿರುವ ಸುರಕ್ಷತಾ ಕ್ರಮಗಳನ್ನು ತಪ್ಪದೇ ಅನುಸರಿಸುವಂತೆ ಸೆಸ್ಕ್‌ ವ್ಯವಸ್ಥಾಪಕ ನಿರ್ದೇಶಕರಾದ ಕೆ.ಎಂ. ಮುನಿಗೋಪಾಲ್‌ ರಾಜು ಅವರು ಪತ್ರಿಕಾ ಪ್ರಕಟಣೆಯಲ್ಲಿ ಕೋರಿದ್ದಾರೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಇನ್ಸ್‌ಪೆಕ್ಟರ್ ಧನಂಜಯರ ಹೇಳಿಕೆಯಲ್ಲಿ ತಪ್ಪಿಲ್ಲ

ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…

5 hours ago

ಓದುಗರ ಪತ್ರ: ದಸರಾ ಬಂದಾಗ ಮಾತ್ರ ಮೈಸೂರಿಗೆ ಸಿಂಗಾರ

ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…

5 hours ago

ಓದುಗರ ಪತ್ರ: ತ್ಯಾಜ್ಯದಿಂದ ವಿದ್ಯುತ್ ಉತ್ಪಾದನೆ ಕಡ್ಡಾಯವಾಗಲಿ

ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…

5 hours ago

ಓದುಗರ ಪತ್ರ: ಯುಪಿಐ ವಹಿವಾಟು ಶುಲ್ಕ; ಹೊರೆಯಾಗದಿರಲಿ

ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…

5 hours ago

ಮೋದಿ ಅಧಿಕಾರ ಪರ್ವ ರಜತ ಮಹೋತ್ಸವ: ಏನಿತ್ತು? ಏನಿಲ್ಲ?

ನರೇಂದ್ರ ಮೋದಿ ಅವರು ೨೦೦೧ರಲ್ಲಿ ಮೊದಲ ಬಾರಿಗೆ ಗುಜರಾತ್ ಸಿಎಂ ಆಗಿ ಅಧಿಕಾರ ಸ್ವೀಕರಿಸಿದರು. ಸತತ ೧೫ ವರ್ಷಗಳು ಅಲ್ಲಿ…

5 hours ago

ತನ್ನನ್ನು ತಾನೇ ಚಿವುಟಿ ಎಚ್ಚರಿಸಿದ್ದ ನೆಹರೂ

ಜವಾಹರಲಾಲ್ ಎಂಬ ಅಪಾಯಕಾರಿ ಮನುಷ್ಯ ೬ ಬಾರಿ ಕಾಂಗ್ರೆಸ್ ಪಕ್ಷದ ರಾಷ್ಟ್ರಾಧ್ಯಕ್ಷರಾಗಿ ೩ ಬಾರಿ ಸತತವಾಗಿ ದೇಶದ ಪ್ರಧಾನಿಯಾಗಿದ್ದ ಜವಾಹರಲಾಲ್…

5 hours ago