ಮೈಸೂರು

ದೀಪಾವಳಿಯಂದೇ ಕತ್ತಲು ಕವಿದ ಪಟ್ಟಣದ ರಸ್ತೆಗಳು

ತಿ.ನರಸೀಪುರ: ‘ಕತ್ತಲಿಂದ ಬೆಳಕಿನೆಡೆಗೆ’ಎಂದು ದೀಪಾವಳಿ ಹಬ್ಬ ಸಂದೇಶ ಸಾರಿದರೆ, ಪಟ್ಟಣದ ಮುಖ್ಯ ರಸ್ತೆಗಳಲ್ಲಿ ಬೀದಿ ದೀಪಗಳಿಲ್ಲದೇ ಪಟ್ಟಣದ ಹಲವೆಡೆ ಕತ್ತಲು ಆವರಿಸಿದೆ.
ಪುರಸಭಾ ವ್ಯಾಪ್ತಿಗೆ ಒಳಪಡುವ ಪಟ್ಟಣದ ಕಾವೇರಿ- ಕಪಿಲಾ ಜೋಡಿ ರಸ್ತೆಯ ಹಳೇ ತಿರುಮಕೂಡಲನಿಂದ ವಿದ್ಯೋದಯ ಕಾಲೇಜ್ ವೃತ್ತ,ಮಹದೇವಪ್ಪ ಕಲ್ಯಾಣ ಮಂಟಪದಿಂದ ಹೆಳವರಹುಂಡಿ ಮತ್ತು ಕಪಿಲಾ ನದಿಗೆ ನಿರ್ಮಿಸಿರುವ ಹೊಸ ಸೇತುವೆಯ ಮೇಲ್ಭಾಗದಲ್ಲಿರುವ ವಿದ್ಯುತ್ ಕಂಬಗಳಿಗೆ ಬೀದಿ ದೀಪ ಅಳವಡಿಸದೆ ಇರುವುದರಿಂದ ಸದರಿ ಜಾಗಗಳಲ್ಲಿ ಕತ್ತಲು ಕವಿದಿದೆ.ಬೀದಿ ದೀಪ ಇಲ್ಲದ ಪರಿಣಾಮ ಖಾಸಗಿ ಬಸ್ ನಿಲ್ದಾಣದ ಬಳಿ ವಾಹನ ಸಂಚಾರ ದುಸ್ತರವಾಗಿದೆ.

ಹೊಸ ಸೇತುವೆ ಮೇಲ್ಭಾಗದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್ ಗಳ ಕೋರಿಕೆ ನಿಲ್ದಾಣ ವಿದ್ದು, ಇಲ್ಲಿ ಬೀದಿ ದೀಪ ಇಲ್ಲದ ಕಾರಣ ರಾತ್ರಿ ವೇಳೆಯಲ್ಲಿ ಬಸ್ ನಿಂದ ಇಳಿಯುವ ಮಹಿಳಾ ಪ್ರಯಾಣಿಕರಿಗೆ ಯಾವುದೇ ಭದ್ರತೆ ಇರುವುದಿಲ್ಲ.
ಪಟ್ಟಣದ ವಿವಿಧ ರಸ್ತೆಗಳಲ್ಲಿ ಬೀದಿ ದೀಪ ಇಲ್ಲದ ಕಾರಣ ರಾತ್ರಿ ವೇಳೆಯಲ್ಲಿ ಓಡಾಡುವ ವಾಹನ ಚಾಲಕ ಮತ್ತು ಪಾದಚಾರಿಗಳಿಗೆ ಬಹಳ ತೊಂದರೆಯಾಗಿದೆ.

ಈ ಸ್ಥಳಗಳಲ್ಲಿ ಕತ್ತಲು ಆವರಿಸಿರುವುದರಿಂದ ಅಪಘಾತಗಳು ನಡೆಯುವ ಸಂಭವವಿರುತ್ತದೆ.
ಕಳೆದ ಹಲವು ದಿನಗಳಿಂದಲೂ ಬೀದಿ ದೀಪದ ಸಮಸ್ಯೆ ಇದ್ದು,ಈ ಬಗ್ಗೆ ಪುರಸಭೆ ಮುಖ್ಯಾಧಿಕಾರಿ ಮತ್ತು ಅಧ್ಯಕ್ಷರ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ.

ಕಳ್ಳ-ಕಾಕರಿಗೆ ಆಸ್ಪದ ಈ ರಸ್ತೆ : ಪಟ್ಟಣದ ಪ್ರಮುಖ ರಸ್ತೆಗಳಾದ ಕಾಲೇಜ್ ರಸ್ತೆ, ಜೋಡಿ ರಸ್ತೆ,ಲಿಂಕ್ ರಸ್ತೆಗಳಲ್ಲಿ ಚಿನ್ನದ, ಮೊಬೈಲ್ ಮತ್ತು ಕಿರಾಣಿ ಅಂಗಡಿಗಳು ಹೆಚ್ಚಿವೆ. ಹಾಗಾಗಿ ಭಾಗಗಳಲ್ಲಿ ಬೀದಿ ದೀಪ ಇಲ್ಲದಿರುವುದು ಕಳ್ಳಕಾಕರು ಕಳ್ಳತನ ನಡೆಸಲು ಅವಕಾಶ ಕಲ್ಪಿಸಿದಂತಾಗುತ್ತದೆ.ಅಲ್ಲದೇ  ಈ ಭಾಗಗಳಲ್ಲಿ ಯಾರೇ ಓಡಾಡಿದರೂ ಪತ್ತೆ ಹಚ್ಚಲು ಗುರುತಿಸಲಾಗದಷ್ಟು ಕತ್ತಲು ಆವರಿಸಿದೆ.

andolana

Recent Posts

ಇರಾನ್ ಮಹಿಳಾ ಫುಟ್ಬಾಲ್ ತಂಡಕ್ಕೆ ಹೆಚ್ಚುತ್ತಿರುವ ಭಯ ; ಆಸ್ಟ್ರೇಲಿಯಾದಲ್ಲಿ ಆಶ್ರಯಕ್ಕೆ ಹೆಚ್ಚುತ್ತಿರುವ ಕರೆ!

ಗೋಲ್ಡ್ ಕೋಸ್ಟ್ (ಆಸ್ಟ್ರೇಲಿಯಾ) :  ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಏಷ್ಯಾ ಮಹಿಳಾ ಫುಟ್ಬಾಲ್ ಕಪ್ 2026ನಲ್ಲಿ ಭಾಗವಹಿಸಿದ್ದ ಇರಾನ್ ರಾಷ್ಟ್ರೀಯ ಮಹಿಳಾ…

7 hours ago

ಜಾಗತಿಕ ತೈಲ ಬೆಲೆಗಳಲ್ಲಿ ಭಾರೀ ಏರಿಕೆ ; ಬ್ಯಾರೆಲ್‌ಗೆ 120 ಡಾಲರ್ ಗಡಿ ದಾಟಿದ ತೈಲ ಬೆಲೆ

ಹೊಸದಿಲ್ಲಿ : ಇರಾನ್ ಮೇಲಿನ ಅಮೆರಿಕಾ-ಇಸ್ರೇಲ್ ದಾಳಿಗಳು ಮತ್ತು ಇರಾನ್‌ಗೆ ಹೊಸ ಸುಪ್ರೀಂ ಲೀಡರ್ ನೇಮಕದ ನಂತರ ಮಧ್ಯಪ್ರಾಚ್ಯದಲ್ಲಿ ತೀವ್ರ…

7 hours ago

ಮಧ್ಯಪ್ರಾಚ್ಯ ಸಂಘರ್ಷ | ದೆಹಲಿಯಿಂದ ಮ್ಯಾಂಚೆಸ್ಟರ್‌ಗೆ ತೆರಳುತಿದ್ದ ಇಂಡಿಗೊ ವಿಮಾನ ಯು-ಟರ್ನ್‌

ಹೊಸದಿಲ್ಲಿ : ಮಧ್ಯಪ್ರಾಚ್ಯದಲ್ಲಿ ಇರಾನ್-ಇಸ್ರೇಲ್-ಅಮೆರಿಕಾ ನಡುವಿನ ಸಂಘರ್ಷದ ಹಿನ್ನೆಲೆಯಲ್ಲಿ ವಾಯುಪ್ರದೇಶದಲ್ಲಿ ತುರ್ತು ನಿರ್ಬಂಧಗಳು ಜಾರಿಯಾಗಿರುವುದರಿಂದ ದೆಹಲಿಯಿಂದ ಮ್ಯಾಂಚೆಸ್ಟರ್‌ಗೆ ಹೋಗುತಿದ್ದ ಇಂಡಿಗೊ…

9 hours ago

ಎಂಡಿಎ ಬಜೆಟ್‌ | ಮೈಸೂರು ಅಭಿವೃದ್ಧಿಗೆ ಒತ್ತು ; 799.90 ಕೋಟಿ ರೂ. ಸಂಪನ್ಮೂಲ ನಿರೀಕ್ಷೆ

ಮೈಸೂರು : ಮೈಸೂರು ಅಭಿವೃದ್ಧಿ ಪ್ರಾಧಿಕಾರ (MDA) ಈ ಬಾರಿಯ ಆರ್ಥಿಕ ವರ್ಷದ ಬಜೆಟ್‌ನಲ್ಲಿ ನಗರದ ಸಮಗ್ರ ಅಭಿವೃದ್ಧಿಗೆ ತೀವ್ರ…

9 hours ago

ಮೈಸೂರು | 24 ಅಪರಾಧ ಪ್ರಕರಣ ಭೇಧಿಸಿದ ಪೊಲೀಸರು ; 20ಕ್ಕೂ ಹೆಚ್ಚು ಆರೋಪಿಗಳು ವಶಕ್ಕೆ

ಮೈಸೂರು : ಮನೆಗಳ್ಳತನ, ವಾಹನ ಕಳ್ಳತನ, ದರೋಡೆ ಸೇರಿದಂತೆ ಕಳೆದ ಎರಡು ತಿಂಗಳಲ್ಲಿ ಜಿಲ್ಲೆಯಲ್ಲಿ ನಡೆದಿದ್ದ 24 ಅಪರಾಧ ಪ್ರಕರಣಗಳನ್ನು…

10 hours ago

ʻಪಂಚ ಗ್ಯಾರಂಟಿʼಯಿಂದ ಮಹಿಳಾ ಸಬಲೀಕರಣ ಸಾಧ್ಯ : ಅರುಣ್ ಕುಮಾರ್

ಮೈಸೂರು : ರಾಜ್ಯ ಸರ್ಕಾರದ ʻಪಂಚ ಗ್ಯಾರಂಟಿʼ ಯೋಜನೆಗಳಿಂದ ಮಹಿಳಾ ಸಬಲೀಕರಣ ಸಾಧ್ಯವಾಗಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ…

10 hours ago