ತಿ.ನರಸೀಪುರ: ‘ಕತ್ತಲಿಂದ ಬೆಳಕಿನೆಡೆಗೆ’ಎಂದು ದೀಪಾವಳಿ ಹಬ್ಬ ಸಂದೇಶ ಸಾರಿದರೆ, ಪಟ್ಟಣದ ಮುಖ್ಯ ರಸ್ತೆಗಳಲ್ಲಿ ಬೀದಿ ದೀಪಗಳಿಲ್ಲದೇ ಪಟ್ಟಣದ ಹಲವೆಡೆ ಕತ್ತಲು ಆವರಿಸಿದೆ.
ಪುರಸಭಾ ವ್ಯಾಪ್ತಿಗೆ ಒಳಪಡುವ ಪಟ್ಟಣದ ಕಾವೇರಿ- ಕಪಿಲಾ ಜೋಡಿ ರಸ್ತೆಯ ಹಳೇ ತಿರುಮಕೂಡಲನಿಂದ ವಿದ್ಯೋದಯ ಕಾಲೇಜ್ ವೃತ್ತ,ಮಹದೇವಪ್ಪ ಕಲ್ಯಾಣ ಮಂಟಪದಿಂದ ಹೆಳವರಹುಂಡಿ ಮತ್ತು ಕಪಿಲಾ ನದಿಗೆ ನಿರ್ಮಿಸಿರುವ ಹೊಸ ಸೇತುವೆಯ ಮೇಲ್ಭಾಗದಲ್ಲಿರುವ ವಿದ್ಯುತ್ ಕಂಬಗಳಿಗೆ ಬೀದಿ ದೀಪ ಅಳವಡಿಸದೆ ಇರುವುದರಿಂದ ಸದರಿ ಜಾಗಗಳಲ್ಲಿ ಕತ್ತಲು ಕವಿದಿದೆ.ಬೀದಿ ದೀಪ ಇಲ್ಲದ ಪರಿಣಾಮ ಖಾಸಗಿ ಬಸ್ ನಿಲ್ದಾಣದ ಬಳಿ ವಾಹನ ಸಂಚಾರ ದುಸ್ತರವಾಗಿದೆ.
ಹೊಸ ಸೇತುವೆ ಮೇಲ್ಭಾಗದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್ ಗಳ ಕೋರಿಕೆ ನಿಲ್ದಾಣ ವಿದ್ದು, ಇಲ್ಲಿ ಬೀದಿ ದೀಪ ಇಲ್ಲದ ಕಾರಣ ರಾತ್ರಿ ವೇಳೆಯಲ್ಲಿ ಬಸ್ ನಿಂದ ಇಳಿಯುವ ಮಹಿಳಾ ಪ್ರಯಾಣಿಕರಿಗೆ ಯಾವುದೇ ಭದ್ರತೆ ಇರುವುದಿಲ್ಲ.
ಪಟ್ಟಣದ ವಿವಿಧ ರಸ್ತೆಗಳಲ್ಲಿ ಬೀದಿ ದೀಪ ಇಲ್ಲದ ಕಾರಣ ರಾತ್ರಿ ವೇಳೆಯಲ್ಲಿ ಓಡಾಡುವ ವಾಹನ ಚಾಲಕ ಮತ್ತು ಪಾದಚಾರಿಗಳಿಗೆ ಬಹಳ ತೊಂದರೆಯಾಗಿದೆ.
ಈ ಸ್ಥಳಗಳಲ್ಲಿ ಕತ್ತಲು ಆವರಿಸಿರುವುದರಿಂದ ಅಪಘಾತಗಳು ನಡೆಯುವ ಸಂಭವವಿರುತ್ತದೆ.
ಕಳೆದ ಹಲವು ದಿನಗಳಿಂದಲೂ ಬೀದಿ ದೀಪದ ಸಮಸ್ಯೆ ಇದ್ದು,ಈ ಬಗ್ಗೆ ಪುರಸಭೆ ಮುಖ್ಯಾಧಿಕಾರಿ ಮತ್ತು ಅಧ್ಯಕ್ಷರ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ.
ಕಳ್ಳ-ಕಾಕರಿಗೆ ಆಸ್ಪದ ಈ ರಸ್ತೆ : ಪಟ್ಟಣದ ಪ್ರಮುಖ ರಸ್ತೆಗಳಾದ ಕಾಲೇಜ್ ರಸ್ತೆ, ಜೋಡಿ ರಸ್ತೆ,ಲಿಂಕ್ ರಸ್ತೆಗಳಲ್ಲಿ ಚಿನ್ನದ, ಮೊಬೈಲ್ ಮತ್ತು ಕಿರಾಣಿ ಅಂಗಡಿಗಳು ಹೆಚ್ಚಿವೆ. ಹಾಗಾಗಿ ಭಾಗಗಳಲ್ಲಿ ಬೀದಿ ದೀಪ ಇಲ್ಲದಿರುವುದು ಕಳ್ಳಕಾಕರು ಕಳ್ಳತನ ನಡೆಸಲು ಅವಕಾಶ ಕಲ್ಪಿಸಿದಂತಾಗುತ್ತದೆ.ಅಲ್ಲದೇ ಈ ಭಾಗಗಳಲ್ಲಿ ಯಾರೇ ಓಡಾಡಿದರೂ ಪತ್ತೆ ಹಚ್ಚಲು ಗುರುತಿಸಲಾಗದಷ್ಟು ಕತ್ತಲು ಆವರಿಸಿದೆ.
ರಾಮನಗರ: ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ ಅವರ ಸಹೋದರಿ ಮಹಾದೇವಮ್ಮ ನಿಧನರಾಗಿದ್ದಾರೆ. ಕನಕಪುರ ತಾಲ್ಲೂಕಿನ…
ಹಾಸನ: ಭ್ರಷ್ಟಾಚಾರದ ಆರೋಪಗಳ ಹಿನ್ನೆಲೆಯಲ್ಲಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದು ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರು, ಮೈಸೂರು, ಬಾಗಲಕೋಟೆ,…
ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಬೆಳ್ಳಂಬೆಳಿಗ್ಗೆ ಭ್ರಷ್ಟ ಅಧಿಕಾರಿಗೆ ಲೋಕಾಯುಕ್ತ ಅಧಿಕಾರಿಗಳು ಶಾಕ್ ನೀಡಿದ್ದಾರೆ. ಪಿಡಬ್ಲ್ಯೂಡಿ ಎಇಇ ಸತೀಶ್ ಮನೆ…
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಬೇಸಿಗೆಯ ಬಿಸಿಲು ದಿನದಿಂದ ದಿನಕ್ಕೆ ಏರುತ್ತಿದ್ದು, ಮನುಷ್ಯರಂತೆ ಮೃಗಾಲಯದ ವನ್ಯಜೀವಿಗಳೂ ಕೂಡ ತತ್ತರಿಸಿವೆ. ಪ್ರಾಣಿ-ಪಕ್ಷಿಗಳಿಗೆ…
ಬೆಂಗಳೂರು: ಇರಾನ್-ಇಸ್ರೇಲ್ ನಡುವಿನ ಯುದ್ಧದಿಂದಾಗಿ ಪ್ರಪಂಚದಾದ್ಯಂತ ತೈಲ ಮಾರುಕಟ್ಟೆಗಳು ಸಂಪೂರ್ಣವಾಗಿ ಅಲುಗಾಡುತ್ತಿವೆ. ಇದರ ಎಫೆಕ್ಟ್ ರಾಜ್ಯದ ಮೇಲೂ ತಟ್ಟಿದ್ದು, ಡ್ರೈಫ್ರೂಟ್ಸ್…
ನಂಜನಗೂಡು: ಸ್ವಚ್ಛತೆಯ ಮೂಲಕವೇ ಗ್ರಾಮದ ಆರೋಗ್ಯ ಕಾಪಾಡುವ ಪೌರ ಕಾರ್ಮಿಕರಿಗೆ ಸರ್ಕಾರ ಅಗತ್ಯ ರಕ್ಷಣಾತ್ಮಕ ಸೌಲಭ್ಯಗಳನ್ನು ನೀಡುವುದರ ಜೊತೆ ಚರಂಡಿಗಳನ್ನು…