ಮೈಸೂರು

ದೀಪಾವಳಿಯಂದೇ ಕತ್ತಲು ಕವಿದ ಪಟ್ಟಣದ ರಸ್ತೆಗಳು

ತಿ.ನರಸೀಪುರ: ‘ಕತ್ತಲಿಂದ ಬೆಳಕಿನೆಡೆಗೆ’ಎಂದು ದೀಪಾವಳಿ ಹಬ್ಬ ಸಂದೇಶ ಸಾರಿದರೆ, ಪಟ್ಟಣದ ಮುಖ್ಯ ರಸ್ತೆಗಳಲ್ಲಿ ಬೀದಿ ದೀಪಗಳಿಲ್ಲದೇ ಪಟ್ಟಣದ ಹಲವೆಡೆ ಕತ್ತಲು ಆವರಿಸಿದೆ.
ಪುರಸಭಾ ವ್ಯಾಪ್ತಿಗೆ ಒಳಪಡುವ ಪಟ್ಟಣದ ಕಾವೇರಿ- ಕಪಿಲಾ ಜೋಡಿ ರಸ್ತೆಯ ಹಳೇ ತಿರುಮಕೂಡಲನಿಂದ ವಿದ್ಯೋದಯ ಕಾಲೇಜ್ ವೃತ್ತ,ಮಹದೇವಪ್ಪ ಕಲ್ಯಾಣ ಮಂಟಪದಿಂದ ಹೆಳವರಹುಂಡಿ ಮತ್ತು ಕಪಿಲಾ ನದಿಗೆ ನಿರ್ಮಿಸಿರುವ ಹೊಸ ಸೇತುವೆಯ ಮೇಲ್ಭಾಗದಲ್ಲಿರುವ ವಿದ್ಯುತ್ ಕಂಬಗಳಿಗೆ ಬೀದಿ ದೀಪ ಅಳವಡಿಸದೆ ಇರುವುದರಿಂದ ಸದರಿ ಜಾಗಗಳಲ್ಲಿ ಕತ್ತಲು ಕವಿದಿದೆ.ಬೀದಿ ದೀಪ ಇಲ್ಲದ ಪರಿಣಾಮ ಖಾಸಗಿ ಬಸ್ ನಿಲ್ದಾಣದ ಬಳಿ ವಾಹನ ಸಂಚಾರ ದುಸ್ತರವಾಗಿದೆ.

ಹೊಸ ಸೇತುವೆ ಮೇಲ್ಭಾಗದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್ ಗಳ ಕೋರಿಕೆ ನಿಲ್ದಾಣ ವಿದ್ದು, ಇಲ್ಲಿ ಬೀದಿ ದೀಪ ಇಲ್ಲದ ಕಾರಣ ರಾತ್ರಿ ವೇಳೆಯಲ್ಲಿ ಬಸ್ ನಿಂದ ಇಳಿಯುವ ಮಹಿಳಾ ಪ್ರಯಾಣಿಕರಿಗೆ ಯಾವುದೇ ಭದ್ರತೆ ಇರುವುದಿಲ್ಲ.
ಪಟ್ಟಣದ ವಿವಿಧ ರಸ್ತೆಗಳಲ್ಲಿ ಬೀದಿ ದೀಪ ಇಲ್ಲದ ಕಾರಣ ರಾತ್ರಿ ವೇಳೆಯಲ್ಲಿ ಓಡಾಡುವ ವಾಹನ ಚಾಲಕ ಮತ್ತು ಪಾದಚಾರಿಗಳಿಗೆ ಬಹಳ ತೊಂದರೆಯಾಗಿದೆ.

ಈ ಸ್ಥಳಗಳಲ್ಲಿ ಕತ್ತಲು ಆವರಿಸಿರುವುದರಿಂದ ಅಪಘಾತಗಳು ನಡೆಯುವ ಸಂಭವವಿರುತ್ತದೆ.
ಕಳೆದ ಹಲವು ದಿನಗಳಿಂದಲೂ ಬೀದಿ ದೀಪದ ಸಮಸ್ಯೆ ಇದ್ದು,ಈ ಬಗ್ಗೆ ಪುರಸಭೆ ಮುಖ್ಯಾಧಿಕಾರಿ ಮತ್ತು ಅಧ್ಯಕ್ಷರ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ.

ಕಳ್ಳ-ಕಾಕರಿಗೆ ಆಸ್ಪದ ಈ ರಸ್ತೆ : ಪಟ್ಟಣದ ಪ್ರಮುಖ ರಸ್ತೆಗಳಾದ ಕಾಲೇಜ್ ರಸ್ತೆ, ಜೋಡಿ ರಸ್ತೆ,ಲಿಂಕ್ ರಸ್ತೆಗಳಲ್ಲಿ ಚಿನ್ನದ, ಮೊಬೈಲ್ ಮತ್ತು ಕಿರಾಣಿ ಅಂಗಡಿಗಳು ಹೆಚ್ಚಿವೆ. ಹಾಗಾಗಿ ಭಾಗಗಳಲ್ಲಿ ಬೀದಿ ದೀಪ ಇಲ್ಲದಿರುವುದು ಕಳ್ಳಕಾಕರು ಕಳ್ಳತನ ನಡೆಸಲು ಅವಕಾಶ ಕಲ್ಪಿಸಿದಂತಾಗುತ್ತದೆ.ಅಲ್ಲದೇ  ಈ ಭಾಗಗಳಲ್ಲಿ ಯಾರೇ ಓಡಾಡಿದರೂ ಪತ್ತೆ ಹಚ್ಚಲು ಗುರುತಿಸಲಾಗದಷ್ಟು ಕತ್ತಲು ಆವರಿಸಿದೆ.

andolana

Recent Posts

ಗಾಂಧಿ ಅಭಿಯಾನ ಅರಿವಿನ ಯಾನ | ಸತ್ಯದ ಆರಾಧಕ ಮೌನವನ್ನು ಅವಲಂಬಿಸುವುದು ಅವಶ್ಯಕ

ನಾನು ಶಾಕಾಹಾರಿ ಮಂಡಲಿಯ ಕಾರ್ಯಕಾರಿ ಸಮಿತಿಯ ಸದಸ್ಯನಾಗಿ ಆರಿಸಲ್ಪಟ್ಟೆನು. ಆದರ ಪ್ರತಿ ಯೊಂದು ಸಭೆಗೂ ನಾನು ತಪ್ಪದೆ ಹಾಜರಾಗುತ್ತಿದ್ದೆ. ಆದರೆ…

9 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಆಗಸ್ಟ್‌ 22 ಶನಿವಾರ  

9 hours ago

ಧಾವಂತ ಬದುಕಿಗೆ ಹೊಸ ಚೈತನ್ಯ ನೀಡುವ ಅರವಟ್ಟಿಗೆ

ಸಾಮಾಜಿಕ ಕಳವಳಿಯ ನೆಲೆಯಲ್ಲಿ ಮೂಡಿರುವ ಕಥಾ ಸಂಕಲನ ಹೆಚ್.ಎಸ್.ಸಿದ್ದಮಲ್ಲಿಕಾರ್ಜುನಸ್ವಾಮಿ, ಹುಂಡೀಪುರ ಸಾಹಿತಿ ಕೊತ್ತಲವಾಡಿ ಶಿವಕುಮಾರ್ ಅವರ ಹೊಸ ಕೃತಿ ‘ಅರವಟ್ಟಿಗೆ’…

11 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧೀಜಿ ಆತ್ಮಕತೆಯ ಶತಮಾನೋತ್ಸವಕ್ಕೆ ಆಂದೋಲನ ಕೈಜೋಡಿಸಿರುವುದು ಐತಿಹಾಸಿಕ

ಪ್ರೊ. ಜಿ. ಬಿ. ಶಿವರಾಜು, ಟ್ರಸ್ಟಿ, ಕಸ್ತೂರ ಬಾ ಗಾಂಧಿ ಆಶ್ರಮ ಗಾಂಧೀಜಿ ಆತ್ಮಕತೆ ‘ಸತ್ಯದೊಡನೆ ನನ್ನ ಅನ್ವೇಷಣೆ’ಗೆ ೧೦೦…

11 hours ago

ಸಾರ್ವಜನಿಕ ಸ್ಥಳದಲ್ಲಿ ಜಾತಿ ನಿಂದನೆಯಾದರೆ ಮಾತ್ರ ಎಸ್‌ಸಿ,ಎಸ್‌ಟಿ ಕಾಯ್ದೆ ಅನ್ವಯ ; ಸುಪ್ರೀಂ ಕೋರ್ಟ್‌

ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…

1 day ago

ಆರೋಪದಿಂದ ಮುಕ್ತನಾಗಿ ಹೊರಬರುತ್ತೇನೆ : ಸಚಿವ ನಾಗೇಂದ್ರ ವಿಶ್ವಾಸ

ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…

1 day ago