A Manju
ಮೈಸೂರು : ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಈಗ ಮುಖ್ಯಮಂತ್ರಿ ಆಗದಿದ್ದರೆ ಮುಂದೆ ಅವಕಾಶ ಸಿಗುವುದಿಲ್ಲ. ಡಿಕೆಶಿಗೆ ಮುಖ್ಯಮಂತ್ರಿ ಸ್ಥಾನ ಸಿಗುತ್ತದೆ ಎನ್ನುವ ಕಾರಣದಿಂದಲೇ ಹಳೆ ಮೈಸೂರು ಭಾಗದಲ್ಲಿ ಒಕ್ಕಲಿಗರು ಕಾಂಗ್ರೆಸ್ ಬೆಂಬಲಿಸಿದರು ಎಂದು ಮಾಜಿ ಸಚಿವರೂ ಆದ ಜಾ.ದಳ ಶಾಸಕ ಎ.ಮಂಜು ಹೇಳಿದರು.
ಚಾಮುಂಡೇಶ್ವರಿ ದರ್ಶನ ಪಡೆದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ರಾತ್ರಿ ೧೨ಗಂಟೆಗೆ ಹುಟ್ಟಿದ ಪಾರ್ಟಿ ಕಾಂಗ್ರೆಸ್. ರಾತ್ರೋ ರಾತ್ರಿ ಅಲ್ಲಿ ಏನು ಬೇಕಾದರೂ ಬದಲಾಗುತ್ತದೆ. ಡಿ.ಕೆ.ಶಿವಕುಮಾರ್ ಕಾರಣದಿಂದಲೇ ಹಳೆ ಮೈಸೂರು ಭಾಗದಲ್ಲಿ ಒಕ್ಕಲಿಗರು ಕಾಂಗ್ರೆಸ್ಗೆ ಮತ ಹಾಕಿದರು. ೩೦,೪೦ ಸೀಟುಗಳು ಕಾಂಗ್ರೆಸ್ಗೆ ಜಾಸ್ತಿ ಬಂದವು. ಈಗ ಜನರಿಗೆ ನಾವು ಮೋಸ ಹೋದೆವು ಎಂಬುದು ಅರ್ಥವಾಗುತ್ತಿದೆ. ೨೦೧೩ರಲ್ಲಿ ಇದ್ದಂತಹ ಸಿದ್ದರಾಮಯ್ಯ ಈಗ ಸಂಪೂರ್ಣವಾಗಿ ಬದಲಾಗಿದ್ದಾರೆ. ಡಿ.ಕೆ.ಶಿವಕುಮಾರ್ ಅವರಿಗೆ ಇದು ಕೊನೆಯ ಅವಕಾಶ. ಈಗ ಸಿಎಂ ಆದರೆ ಆಗಬೇಕು. ಇಲ್ಲದಿದ್ದರೆ ಮುಂದೆ ಅವಕಾಶ ಸಿಗಲ್ಲ. ಒಪ್ಪಂದವೇ ಆಗಿದ್ದರೆ ಸಿದ್ದರಾಮಯ್ಯ ಬಿಟ್ಟುಕೊಡಬೇಕು ಕಾಂಗ್ರೆಸ್ನಲ್ಲಿ ಶಾಸಕರಿಂದ ಏನು ತೀರ್ಮಾನ ಆಗುವುದಿಲ್ಲ. ಹೈಕಮಾಂಡ್ ಎಲ್ಲವನ್ನೂ ತೀರ್ಮಾನ ಮಾಡಲಿದೆ ಎಂದರು.
ಜಾ.ದಳ ಮತ್ತು ಬಿಜೆಪಿಯವರಿಗೆ ಸಿದ್ದರಾಮಯ್ಯ ಆಗಲಿ, ಡಿ.ಕೆ.ಶಿವಕುಮಾರ್ ಆಗಲಿ. ಯಾರೇ ಮುಖ್ಯಮಂತ್ರಿಯಾದರೂ ನಮಗೆ ಸಮಸ್ಯೆ ಇಲ್ಲ. ೨೦೨೮ಕ್ಕೆ ನಾವು ಅಧಿಕಾರಕ್ಕೆ ಬಂದೇ ಬರುತ್ತೇವೆ. ಸಿದ್ದರಾಮಯ್ಯ ಈಗ ರಾಜ್ಯದ ಮುಖ್ಯಮಂತ್ರಿ. ಪದೇ ಪದೆ ಯಾಕೆ ನಾನೇ ಮುಖ್ಯಮಂತ್ರಿ ಎಂದು ಅವರೇ ಹೇಳುತ್ತಿದ್ದಾರೆ ಎಂಬುದು ಗೊತ್ತಾಗುತ್ತಿಲ್ಲ ಎಂದು ಟೀಕಿಸಿದರು.
ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಮಾಡಲು ದುಡ್ಡಿಲ್ಲ. ಇದನ್ನು ಮರೆಮಾಚಲು ಈ ರೀತಿಯ ಗೊಂದಲಗಳನ್ನು ಸೃಷ್ಟಿ ಮಾಡುತ್ತಿದ್ದಾರೆ. ಖಜಾನೆ ಖಾಲಿ ಆಗಿರುವುದರಿಂದ ಶಾಸಕರ ಕ್ಷೇತ್ರಗಳಿಗೂ ಅನುದಾನ ಇಲ್ಲದಂತಾಗಿದೆ ಎಂದರು.
ಜಿ.ಟಿ.ದೇವೇಗೌಡರು ನಮ್ಮ ಪಕ್ಷದಲ್ಲಿದ್ದಾರೆ. ಮನೆ ಅಂದ ಮೇಲೆ ಸಮಸ್ಯೆಗಳು ಇರುತ್ತವೆ. ನಂತರ ಎಲ್ಲವೂ ಬಗೆಹರಿಯುತ್ತದೆ. ಚುನಾವಣೆ ಬಂದಾಗ ನಾವೆಲ್ಲ ಒಟ್ಟಾಗಿ ಸೇರಿಕೊಳ್ಳುತ್ತೇವೆ. ಯಾವ ಸಮಸ್ಯೆಗಳೂ ಇಲ್ಲ. ಜಿ.ಟಿ.ದೇವೇಗೌಡರ ಜತೆ ಮಾತನಾಡುತ್ತೇವೆ. ನಮ್ಮ ನಾಯಕರಾಗಿರುವ ಕಾರಣ ಯಾವಾಗಬೇಕಾದರೂ ಸರಿ ಹೋಗುತ್ತಾರೆ ಎಂದರು.
ಉಡುಪಿ: ಇಲ್ಲಿನ ಮಲ್ಪೆ ಕೋಡಿಬೆಂಗ್ರೆ ಬೀಷಚ್ ಸಮೀಪ ಪ್ರವಾಸಿ ದೋಣಿ ಮುಗುಚಿದ ಪರಿಣಾಮ ತೀವ್ರ ಅಸ್ವಸ್ಥಗೊಂಡಿದ್ದ ಮೈಸೂರಿನ ಇಬ್ಬರು ಮೃತಪಟ್ಟಿರುವ…
ಹಾಸನ: ನಾನು ಜೆಡಿಎಸ್ ಬಿಟ್ಟು ಹೋದರೆ ದ್ರೋಹ ಹೇಗಾಗುತ್ತದೆ? ನಾನು ಅಲ್ಲಿದ್ದರೆ ಇನ್ನೊಂದು ಸೀಟ್ ಜಾಸ್ತಿ ಆಗೋದು ಅಷ್ಟೇ. ಏನು…
ಬೆಂಗಳೂರು: ವಿಧಾನಮಂಡಲ ವಿಶೇಷ ಜಂಟಿ ಅಧಿವೇಶನದಲ್ಲಿ ಭಾಷಣ ಮಾಡದೇ ತೆರಳುತ್ತಿದ್ದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಕಾಂಗ್ರೆಸ್ ಸದಸ್ಯರು…
ಮಳವಳ್ಳಿ: ಮಳವಳ್ಳಿ ತಾಲ್ಲೂಕಿನ ಹಲಗೂರು ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದಾಗ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟ ಘಟನೆ…
ಮಂಡ್ಯ: ಮಹಾತ್ಮ ಗಾಂಧೀಜಿ ಅವರ ವಿಚಾರಧಾರೆಗಳನ್ನು ಯುವ ಪೀಳಿಗೆಗೆ ತಲುಪಿಸುವ ಕೆಲಸವನ್ನು ಗಾಂಧಿ ಭವನದಲ್ಲಿ ಮಾಡಲಾಗುವುದು ಎಂದು ಮಂಡ್ಯ ಜಿಲ್ಲಾ…
ಮಂಡ್ಯ: ಮಂಡ್ಯ ಜಿಲ್ಲೆಯ ವ್ಯಾಪ್ತಿಯ ಗ್ರಾಮ ಪಂಚಾಯತ್ಗಳಲ್ಲಿ ದಿನಾಂಕ:31-10-2017ಕ್ಕೂ ಪೂರ್ವದಲ್ಲಿ ಗ್ರಾಮ ಪಂಚಾಯತ್ ನಿಂದ ನೇಮಕಗೊಂಡು ನೀರುಗಂಟಿ, ಸ್ವಚ್ಛತಗಾರ, ಅಟೆಂಡರ್…