A Manju
ಮೈಸೂರು : ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಈಗ ಮುಖ್ಯಮಂತ್ರಿ ಆಗದಿದ್ದರೆ ಮುಂದೆ ಅವಕಾಶ ಸಿಗುವುದಿಲ್ಲ. ಡಿಕೆಶಿಗೆ ಮುಖ್ಯಮಂತ್ರಿ ಸ್ಥಾನ ಸಿಗುತ್ತದೆ ಎನ್ನುವ ಕಾರಣದಿಂದಲೇ ಹಳೆ ಮೈಸೂರು ಭಾಗದಲ್ಲಿ ಒಕ್ಕಲಿಗರು ಕಾಂಗ್ರೆಸ್ ಬೆಂಬಲಿಸಿದರು ಎಂದು ಮಾಜಿ ಸಚಿವರೂ ಆದ ಜಾ.ದಳ ಶಾಸಕ ಎ.ಮಂಜು ಹೇಳಿದರು.
ಚಾಮುಂಡೇಶ್ವರಿ ದರ್ಶನ ಪಡೆದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ರಾತ್ರಿ ೧೨ಗಂಟೆಗೆ ಹುಟ್ಟಿದ ಪಾರ್ಟಿ ಕಾಂಗ್ರೆಸ್. ರಾತ್ರೋ ರಾತ್ರಿ ಅಲ್ಲಿ ಏನು ಬೇಕಾದರೂ ಬದಲಾಗುತ್ತದೆ. ಡಿ.ಕೆ.ಶಿವಕುಮಾರ್ ಕಾರಣದಿಂದಲೇ ಹಳೆ ಮೈಸೂರು ಭಾಗದಲ್ಲಿ ಒಕ್ಕಲಿಗರು ಕಾಂಗ್ರೆಸ್ಗೆ ಮತ ಹಾಕಿದರು. ೩೦,೪೦ ಸೀಟುಗಳು ಕಾಂಗ್ರೆಸ್ಗೆ ಜಾಸ್ತಿ ಬಂದವು. ಈಗ ಜನರಿಗೆ ನಾವು ಮೋಸ ಹೋದೆವು ಎಂಬುದು ಅರ್ಥವಾಗುತ್ತಿದೆ. ೨೦೧೩ರಲ್ಲಿ ಇದ್ದಂತಹ ಸಿದ್ದರಾಮಯ್ಯ ಈಗ ಸಂಪೂರ್ಣವಾಗಿ ಬದಲಾಗಿದ್ದಾರೆ. ಡಿ.ಕೆ.ಶಿವಕುಮಾರ್ ಅವರಿಗೆ ಇದು ಕೊನೆಯ ಅವಕಾಶ. ಈಗ ಸಿಎಂ ಆದರೆ ಆಗಬೇಕು. ಇಲ್ಲದಿದ್ದರೆ ಮುಂದೆ ಅವಕಾಶ ಸಿಗಲ್ಲ. ಒಪ್ಪಂದವೇ ಆಗಿದ್ದರೆ ಸಿದ್ದರಾಮಯ್ಯ ಬಿಟ್ಟುಕೊಡಬೇಕು ಕಾಂಗ್ರೆಸ್ನಲ್ಲಿ ಶಾಸಕರಿಂದ ಏನು ತೀರ್ಮಾನ ಆಗುವುದಿಲ್ಲ. ಹೈಕಮಾಂಡ್ ಎಲ್ಲವನ್ನೂ ತೀರ್ಮಾನ ಮಾಡಲಿದೆ ಎಂದರು.
ಜಾ.ದಳ ಮತ್ತು ಬಿಜೆಪಿಯವರಿಗೆ ಸಿದ್ದರಾಮಯ್ಯ ಆಗಲಿ, ಡಿ.ಕೆ.ಶಿವಕುಮಾರ್ ಆಗಲಿ. ಯಾರೇ ಮುಖ್ಯಮಂತ್ರಿಯಾದರೂ ನಮಗೆ ಸಮಸ್ಯೆ ಇಲ್ಲ. ೨೦೨೮ಕ್ಕೆ ನಾವು ಅಧಿಕಾರಕ್ಕೆ ಬಂದೇ ಬರುತ್ತೇವೆ. ಸಿದ್ದರಾಮಯ್ಯ ಈಗ ರಾಜ್ಯದ ಮುಖ್ಯಮಂತ್ರಿ. ಪದೇ ಪದೆ ಯಾಕೆ ನಾನೇ ಮುಖ್ಯಮಂತ್ರಿ ಎಂದು ಅವರೇ ಹೇಳುತ್ತಿದ್ದಾರೆ ಎಂಬುದು ಗೊತ್ತಾಗುತ್ತಿಲ್ಲ ಎಂದು ಟೀಕಿಸಿದರು.
ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಮಾಡಲು ದುಡ್ಡಿಲ್ಲ. ಇದನ್ನು ಮರೆಮಾಚಲು ಈ ರೀತಿಯ ಗೊಂದಲಗಳನ್ನು ಸೃಷ್ಟಿ ಮಾಡುತ್ತಿದ್ದಾರೆ. ಖಜಾನೆ ಖಾಲಿ ಆಗಿರುವುದರಿಂದ ಶಾಸಕರ ಕ್ಷೇತ್ರಗಳಿಗೂ ಅನುದಾನ ಇಲ್ಲದಂತಾಗಿದೆ ಎಂದರು.
ಜಿ.ಟಿ.ದೇವೇಗೌಡರು ನಮ್ಮ ಪಕ್ಷದಲ್ಲಿದ್ದಾರೆ. ಮನೆ ಅಂದ ಮೇಲೆ ಸಮಸ್ಯೆಗಳು ಇರುತ್ತವೆ. ನಂತರ ಎಲ್ಲವೂ ಬಗೆಹರಿಯುತ್ತದೆ. ಚುನಾವಣೆ ಬಂದಾಗ ನಾವೆಲ್ಲ ಒಟ್ಟಾಗಿ ಸೇರಿಕೊಳ್ಳುತ್ತೇವೆ. ಯಾವ ಸಮಸ್ಯೆಗಳೂ ಇಲ್ಲ. ಜಿ.ಟಿ.ದೇವೇಗೌಡರ ಜತೆ ಮಾತನಾಡುತ್ತೇವೆ. ನಮ್ಮ ನಾಯಕರಾಗಿರುವ ಕಾರಣ ಯಾವಾಗಬೇಕಾದರೂ ಸರಿ ಹೋಗುತ್ತಾರೆ ಎಂದರು.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಹದೇಶ್ವರಬೆಟ್ಟ ರಸ್ತೆಯ ತಾಳುಬೆಟ್ಟ–ಕೋಣನಕೆರೆ ಮಾರ್ಗದಲ್ಲಿ ಮಂಗಳವಾರ ಬೆಳ್ಳಂಬೆಳಿಗ್ಗೆ ಆಟೋ…
ಬೆಂಗಳೂರು: ನೀಟ್ ಪರೀಕ್ಷೆಯನ್ನು ಸಮರ್ಪಕವಾಗಿ ನಡೆಸದ ಕೇಂದ್ರ ಸರ್ಕಾರ, ಪರೀಕ್ಷೆ ರದ್ದು ಮಾಡುವ ಮೂಲಕ ವೈದ್ಯರಾಗಬೇಕು ಎಂಬ ಕನಸು ಹೊತ್ತಿದ್ದ…
ಪಾಕಿಸ್ತಾನ: ಇಲ್ಲಿನ ವಾಯುವ್ಯ ಭಾಗದ ಮಾರುಕಟ್ಟೆಯೊಂದರಲ್ಲಿ ರಿಕ್ಷಾಗೆ ಅಳವಡಿಸಿದ್ದ ಬಾಂಬ್ ಸ್ಫೋಟಗೊಂಡ ಪರಿಣಾಮ 9 ಮಂದಿ ಸಾವನ್ನಪ್ಪಿದ್ದು, ಹಲವರಿಗೆ ಗಂಭೀರ…
ಮೈಸೂರು: ನಾಳೆಯಿಂದ ಎರಡು ದಿನಗಳ ಕಾಲ ಸಿಎಂ ಸಿದ್ದರಾಮಯ್ಯ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಸಂಜೆ 5.30ಕ್ಕೆ ವಿಶೇಷ…
ಬೆಂಗಳೂರು: ಚಾಮರಾಜನಗರದ ನಾಗಮಲೆ ಅರಣ್ಯದಲ್ಲಿ ಚಿರತೆ ದಾಳಿಯಿಂದ 10 ವರ್ಷದ ಬಾಲಕ ಮೃತಪಟ್ಟಿರುವ ಹಿನ್ನೆಲೆಯಲ್ಲಿ ವನ್ಯಜೀವಿ ಸಂಚಾರ ಇರುವ ಎಲ್ಲ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಇಂಡಿಗನತ್ತ…