ಮೈಸೂರು: ಕೇಂದ್ರ ಸಚಿವರಾಗಿ ನೇಮಕಗೊಂಡಿರುವ ಎಚ್ಡಿ ಕುಮಾರಸ್ವಾಮಿ ಅವರ ಚನ್ನಪಟ್ಟಣ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಯಲಿದ್ದು, ಎಚ್ಡಿಕೆಯಿಂದ ತೆರವಾಗಿರುವ ಕ್ಷೇತ್ರದಿಂದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಸ್ಪರ್ಧೆ ಮಾಡುವುದಿಲ್ಲ. ಇದೊಂದು ಕೇವಲ ರಾಜಕೀಯ ಗಿಮಿಕ್ ಅಷ್ಟೆ ಎಂದು ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿಟಿ ದೇವೇಗೌಡ ಹೇಳಿದ್ದಾರೆ.
ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ಇದು ನನ್ನ ರಾಜಕೀಯ ಅನುಭವದಿಂದ ಹೇಳುತ್ತಿರುವ ಮಾತು. ಡಿಕೆಶಿ ಅವರ ಮಾತಿನಲ್ಲಿ ಕೇವಲ ರಾಜಕೀಯ ತಂತ್ರಗಾರಿಕೆಯಷ್ಟೆ ಇದೆ. ಈ ಕ್ಷೇತ್ರದಿಂದ ಡಿಕೆ ಸುರೇಶ್ ಸ್ಪರ್ಧೆ ಮಾಡಿಸುವ ಮೂಲಕ ನಾನು ಮತ ಕೇಳಿದರೇ ನೀಡುತ್ತಾರಾ ಎಂದು ಅವರು ಚನ್ನಪಟ್ಟಣ ಜನರನ್ನು ಕೇಳುತ್ತಿದ್ದಾರೆ ಎಂದರು.
ಚನ್ನಪಟ್ಟಣ ಕ್ಷೇತ್ರದಿಂದ ನಿಖಿಲ್ ಸ್ಪರ್ಧೇ ವಿಚಾರವಾಗಿ ಎಲ್ಲಿಯೂ ಹೇಳಿಲ್ಲ. ಜನಗಳ ಅಭಿಪ್ರಾಯ ನನ್ನ ಪರವಾಗಿದೆ ಎಂದಷ್ಟೆ ಸಿ.ಪಿ ಯೋಗೇಶ್ವರ್ ಹೇಳಿದ್ದಾರೆ. ಈ ಸ್ಪರ್ಧೆ ಬಗ್ಗೆ ಮೈತ್ರಿ ಹೈಕಮಾಂಡ್ ತೀರ್ಮಾನ ಮಾಡಲಿದೆ.
ಇನ್ನು ನಮ್ಮ ಸ್ಪರ್ಧಿ ಯಾರೆಂದು ಈವರೆಗೂ ಚಿಂತನೆ ಮಾಡಿಲ್ಲ. ಕೋರ್ ಕಮಿಟಿ ಅಧ್ಯಕ್ಷ ನಾನೇ ಆಗಿರುವ ಕಾರಣ ವೈಯಕ್ತಿಕ ಅಭಿಪ್ರಾಯ ಹೇಳಲು ಆಗುವುದಿಲ್ಲ ಈ ಬಗ್ಗೆ ಕೋರ್ ಕಮಿಟಿಯಲ್ಲಿ ಚರ್ಚೆ ಮಾಡಿ ನಾನೇ ಮಾಹಿತಿ ನೀಡುತ್ತೇನೆ ಎಂದು ಜಿಟಿಡಿ ತಿಳಿಸಿದರು.
ಮಂಡ್ಯ: ಆಸ್ತಿಗಾಗಿ ತಂದೆಯನ್ನೇ ಪಾಪಿ ಮಗನೋರ್ವ ಕೊಲೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ದಳವಾಯಿಕೋಡಿಯಲ್ಲಿ ನಡೆದಿದೆ. ಗ್ರಾಮದ…
ಹಾಸನ: ನಿವೃತ್ತ ಯೋಧರೊಬ್ಬರು ಪಿಸ್ತೂಲ್ನಿಂದ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ಜಿಲ್ಲೆ ಬೇಲೂರು…
ಮೈಸೂರು: ಈ ದೇಶದಲ್ಲಿ ಬಂಡವಾಳಶಾಹಿಗಳಾಗಲೀ, ಸಕ್ಕರೆ ಕಾರ್ಖಾನೆ ಮಾಲೀಕರಾಗಲೀ ಅಥವಾ ಉದ್ಯಮಿಗಳು ಸೇರಿ ಯಾರೂ ಸಹ ಆತ್ಮಹತ್ಯೆ ಮಾಡಿಕೊಂಡಿಲ್ಲ. ಆದರೇ,…
ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಭೈರತಿ ಬಸವರಾಜ್ ಜಾಮೀನು ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. ಈ…
ನವದೆಹಲಿ: ರಾಜಧಾನಿ ಬೆಂಗಳೂರು ಹಾಗೂ ರಾಜ್ಯದ ಕರಾವಳಿ ಪ್ರದೇಶಗಳ ನಡುವೆ ಪ್ರಯಾಣವನ್ನು ಮತ್ತಷ್ಟು ಸುಲಭಗೊಳಿಸುವ ನಿಟ್ಟಿನಲ್ಲಿ ವಂದೇ ಭಾರತ್ ಎಕ್ಸ್…
ಹಾಸನ: ಅಪ್ರಾಪ್ತ ಬಾಲಕಿಯೊಬ್ಬಳಿಗೆ ಚಾಕೋಲೇಟ್ ನೀಡಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ಹಿನ್ನೆಲೆಯಲ್ಲಿ ಆಕೆ ಮಗುವಿಗೆ ಜನ್ಮ ನೀಡಿದ ಘಟನೆ…