ಮೈಸೂರು: ಕೇಂದ್ರ ಸಚಿವರಾಗಿ ನೇಮಕಗೊಂಡಿರುವ ಎಚ್ಡಿ ಕುಮಾರಸ್ವಾಮಿ ಅವರ ಚನ್ನಪಟ್ಟಣ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಯಲಿದ್ದು, ಎಚ್ಡಿಕೆಯಿಂದ ತೆರವಾಗಿರುವ ಕ್ಷೇತ್ರದಿಂದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಸ್ಪರ್ಧೆ ಮಾಡುವುದಿಲ್ಲ. ಇದೊಂದು ಕೇವಲ ರಾಜಕೀಯ ಗಿಮಿಕ್ ಅಷ್ಟೆ ಎಂದು ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿಟಿ ದೇವೇಗೌಡ ಹೇಳಿದ್ದಾರೆ.
ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ಇದು ನನ್ನ ರಾಜಕೀಯ ಅನುಭವದಿಂದ ಹೇಳುತ್ತಿರುವ ಮಾತು. ಡಿಕೆಶಿ ಅವರ ಮಾತಿನಲ್ಲಿ ಕೇವಲ ರಾಜಕೀಯ ತಂತ್ರಗಾರಿಕೆಯಷ್ಟೆ ಇದೆ. ಈ ಕ್ಷೇತ್ರದಿಂದ ಡಿಕೆ ಸುರೇಶ್ ಸ್ಪರ್ಧೆ ಮಾಡಿಸುವ ಮೂಲಕ ನಾನು ಮತ ಕೇಳಿದರೇ ನೀಡುತ್ತಾರಾ ಎಂದು ಅವರು ಚನ್ನಪಟ್ಟಣ ಜನರನ್ನು ಕೇಳುತ್ತಿದ್ದಾರೆ ಎಂದರು.
ಚನ್ನಪಟ್ಟಣ ಕ್ಷೇತ್ರದಿಂದ ನಿಖಿಲ್ ಸ್ಪರ್ಧೇ ವಿಚಾರವಾಗಿ ಎಲ್ಲಿಯೂ ಹೇಳಿಲ್ಲ. ಜನಗಳ ಅಭಿಪ್ರಾಯ ನನ್ನ ಪರವಾಗಿದೆ ಎಂದಷ್ಟೆ ಸಿ.ಪಿ ಯೋಗೇಶ್ವರ್ ಹೇಳಿದ್ದಾರೆ. ಈ ಸ್ಪರ್ಧೆ ಬಗ್ಗೆ ಮೈತ್ರಿ ಹೈಕಮಾಂಡ್ ತೀರ್ಮಾನ ಮಾಡಲಿದೆ.
ಇನ್ನು ನಮ್ಮ ಸ್ಪರ್ಧಿ ಯಾರೆಂದು ಈವರೆಗೂ ಚಿಂತನೆ ಮಾಡಿಲ್ಲ. ಕೋರ್ ಕಮಿಟಿ ಅಧ್ಯಕ್ಷ ನಾನೇ ಆಗಿರುವ ಕಾರಣ ವೈಯಕ್ತಿಕ ಅಭಿಪ್ರಾಯ ಹೇಳಲು ಆಗುವುದಿಲ್ಲ ಈ ಬಗ್ಗೆ ಕೋರ್ ಕಮಿಟಿಯಲ್ಲಿ ಚರ್ಚೆ ಮಾಡಿ ನಾನೇ ಮಾಹಿತಿ ನೀಡುತ್ತೇನೆ ಎಂದು ಜಿಟಿಡಿ ತಿಳಿಸಿದರು.
ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…
ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…
ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…
ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…
ನರೇಂದ್ರ ಮೋದಿ ಅವರು ೨೦೦೧ರಲ್ಲಿ ಮೊದಲ ಬಾರಿಗೆ ಗುಜರಾತ್ ಸಿಎಂ ಆಗಿ ಅಧಿಕಾರ ಸ್ವೀಕರಿಸಿದರು. ಸತತ ೧೫ ವರ್ಷಗಳು ಅಲ್ಲಿ…
ಜವಾಹರಲಾಲ್ ಎಂಬ ಅಪಾಯಕಾರಿ ಮನುಷ್ಯ ೬ ಬಾರಿ ಕಾಂಗ್ರೆಸ್ ಪಕ್ಷದ ರಾಷ್ಟ್ರಾಧ್ಯಕ್ಷರಾಗಿ ೩ ಬಾರಿ ಸತತವಾಗಿ ದೇಶದ ಪ್ರಧಾನಿಯಾಗಿದ್ದ ಜವಾಹರಲಾಲ್…