ಮೈಸೂರು: ಕೇಂದ್ರ ಸಚಿವರಾಗಿ ನೇಮಕಗೊಂಡಿರುವ ಎಚ್ಡಿ ಕುಮಾರಸ್ವಾಮಿ ಅವರ ಚನ್ನಪಟ್ಟಣ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಯಲಿದ್ದು, ಎಚ್ಡಿಕೆಯಿಂದ ತೆರವಾಗಿರುವ ಕ್ಷೇತ್ರದಿಂದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಸ್ಪರ್ಧೆ ಮಾಡುವುದಿಲ್ಲ. ಇದೊಂದು ಕೇವಲ ರಾಜಕೀಯ ಗಿಮಿಕ್ ಅಷ್ಟೆ ಎಂದು ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿಟಿ ದೇವೇಗೌಡ ಹೇಳಿದ್ದಾರೆ.
ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ಇದು ನನ್ನ ರಾಜಕೀಯ ಅನುಭವದಿಂದ ಹೇಳುತ್ತಿರುವ ಮಾತು. ಡಿಕೆಶಿ ಅವರ ಮಾತಿನಲ್ಲಿ ಕೇವಲ ರಾಜಕೀಯ ತಂತ್ರಗಾರಿಕೆಯಷ್ಟೆ ಇದೆ. ಈ ಕ್ಷೇತ್ರದಿಂದ ಡಿಕೆ ಸುರೇಶ್ ಸ್ಪರ್ಧೆ ಮಾಡಿಸುವ ಮೂಲಕ ನಾನು ಮತ ಕೇಳಿದರೇ ನೀಡುತ್ತಾರಾ ಎಂದು ಅವರು ಚನ್ನಪಟ್ಟಣ ಜನರನ್ನು ಕೇಳುತ್ತಿದ್ದಾರೆ ಎಂದರು.
ಚನ್ನಪಟ್ಟಣ ಕ್ಷೇತ್ರದಿಂದ ನಿಖಿಲ್ ಸ್ಪರ್ಧೇ ವಿಚಾರವಾಗಿ ಎಲ್ಲಿಯೂ ಹೇಳಿಲ್ಲ. ಜನಗಳ ಅಭಿಪ್ರಾಯ ನನ್ನ ಪರವಾಗಿದೆ ಎಂದಷ್ಟೆ ಸಿ.ಪಿ ಯೋಗೇಶ್ವರ್ ಹೇಳಿದ್ದಾರೆ. ಈ ಸ್ಪರ್ಧೆ ಬಗ್ಗೆ ಮೈತ್ರಿ ಹೈಕಮಾಂಡ್ ತೀರ್ಮಾನ ಮಾಡಲಿದೆ.
ಇನ್ನು ನಮ್ಮ ಸ್ಪರ್ಧಿ ಯಾರೆಂದು ಈವರೆಗೂ ಚಿಂತನೆ ಮಾಡಿಲ್ಲ. ಕೋರ್ ಕಮಿಟಿ ಅಧ್ಯಕ್ಷ ನಾನೇ ಆಗಿರುವ ಕಾರಣ ವೈಯಕ್ತಿಕ ಅಭಿಪ್ರಾಯ ಹೇಳಲು ಆಗುವುದಿಲ್ಲ ಈ ಬಗ್ಗೆ ಕೋರ್ ಕಮಿಟಿಯಲ್ಲಿ ಚರ್ಚೆ ಮಾಡಿ ನಾನೇ ಮಾಹಿತಿ ನೀಡುತ್ತೇನೆ ಎಂದು ಜಿಟಿಡಿ ತಿಳಿಸಿದರು.
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…
ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…
ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…
ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…
ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…
ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…