ಮೈಸೂರು: ಚನ್ನಪಟ್ಟಣದಿಂದ ಡಿಸಿಎಂ ಡಿ.ಕೆ.ಶಿವಕುಮಾರ್ ಯಾವುದೇ ಕಾರಣಕ್ಕೂ ಸ್ಪರ್ಧೆ ಮಾಡಲ್ಲ ಎಂದು ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಹಾಗೂ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ಹೇಳಿದ್ದಾರೆ.
ಮಾಜಿ ಸಿಎಂ ಕುಮಾರಸ್ವಾಮಿ ರಾಜೀನಾಮೆಯಿಂದ ತೆರವಾಗಿರುವ ಚನ್ನಪಟ್ಟಣ ಕ್ಷೇತ್ರ ಈಗ ಜಿದ್ದಾಜಿದ್ದಿನ ಕಣವಾಗಿದೆ. ಕಾಂಗ್ರೆಸ್ ಹಾಗೂ ಬಿಜೆಪಿ-ಜೆಡಿಎಸ್ ಮೈತ್ರಿ ನಾಯಕರು ಚನ್ನಪಟ್ಟಣ ಕ್ಷೇತ್ರವನ್ನು ಗೆಲ್ಲಲೇಬೇಕು ಎಂದು ಪಣತೊಟ್ಟಿದ್ದಾರೆ. ಈ ಎಲ್ಲಾ ರಾಜಕೀಯ ಬೆಳವಣಿಗೆಗಳ ನಡುವೆ ಚನ್ನಪಟ್ಟಣ ಕ್ಷೇತ್ರದಿಂದ ಡಿಸಿಎಂ ಡಿ.ಕೆ.ಶಿವಕುಮಾರ್ ಸ್ಪರ್ಧೆ ಮಾಡುತ್ತಾರೆ ಎಂಬ ಸುದ್ದಿ ಎಲ್ಲೆಡೆ ಹರಿದಾಡುತ್ತಿದೆ.
ಈ ಬಗ್ಗೆ ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಶಾಸಕ ಜಿ.ಟಿ.ದೇವೇಗೌಡ ಅವರು ಚನ್ನಪಟ್ಟಣದಿಂದ ಡಿ.ಕೆ.ಶಿವಕುಮಾರ್ ಯಾವುದೇ ಕಾರಣಕ್ಕೂ ಸ್ಪರ್ಧಿಸಲ್ಲ. ನಾನು ನನಗಿರುವ ರಾಜಕೀಯದ ಅನುಭವದಿಂದ ಈ ಮಾತನ್ನು ಹೇಳುತ್ತಿದ್ದೇನೆ. ಡಿಕೆಶಿ ಮಾತಿನಲ್ಲಿ ರಾಜಕೀಯ ತಂತ್ರಗಾರಿಕೆ ಅಡಗಿದೆ. ಚನ್ನಪಟ್ಟಣ ಉಪಚುನಾವಣೆಯಲ್ಲಿ ಜಿದ್ದಾಜಿದ್ದಿನ ಫೈಟ್ ಇರಲಿದ್ದು, ಈ ಚುನಾವಣೆ ಸರ್ಕಾರದ ಪರ ಇರಲ್ಲ. ಒಂದೊಂದು ಬಾರಿ ಒಂದೊಂದು ಟ್ರೆಂಡ್ ಇರಲಿದೆ. ನಾವು ಚನ್ನಪಟ್ಟಣ ಕ್ಷೇತ್ರಕ್ಕೆ ಅಭ್ಯರ್ಥಿ ಫೈನಲ್ ಮಾಡಿಲ್ಲ ಎಂದರು.
ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…
ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…
ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್ಎನ್ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್ಎನ್ಎಲ್ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…