ಮೈಸೂರು

ನೀರು ಸರಬರಾಜಿಗೆ ಮುನ್ನ ಅದರ ಗುಣಮಟ್ಟ ಪರಿಶೀಲಿಸಿ: ಸಿಇಒ ಕೆ.ಎಂ ಗಾಯತ್ರಿ

ಮೈಸೂರು: ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಗ್ರಾಮಗಳಲ್ಲಿ ನೀರನ್ನು ಸರಬರಾಜು ಮಾಡುವ ಮುನ್ನ ಪ್ರತಿ ನೀರಿನ ಮೂಲ, ನೀರಿನ ಸಂಗ್ರಹಣೆ ಹಾಗೂ ನೀರು ಪೂರೈಕೆ ಮಾಡುವ ಸ್ಥಳಕ್ಕೆ ಅಧಿಕಾರಿಗಳ ತಂಡ ರಚಿಸಿ ಖುದ್ದಾಗಿ ಭೇಟಿ ನೀಡಿ ನೀರಿನ ಗುಣಮಟ್ಟವನ್ನು ಪರಿಶೀಲಿಸಿ ವರದಿ ನೀಡಬೇಕು ಎಂದು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ. ಎಂ. ಗಾಯಿತ್ರಿ ಅಧಿಕಾರಿಗಳಿಗೆ ಸೂಚಿಸಿದರು.

ಇಂದು ಜಿಲ್ಲಾ ಪಂಚಾಯತ್‌ನ ಮಿನಿ ಸಭಾಂಗಣದಲ್ಲಿ ಆಯಾ ತಾಲೂಕಿನ ಕಾರ್ಯನಿರ್ವಾಹಕ ಅಧಿಕಾರಿಗಳು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಧಿಕಾರಿಗಳೊಂದಿಗೆ ಕುಡಿಯುವ ನೀರು ಪೂರೈಕೆ ಸಂಬಂಧ ಸಭೆ ನಡೆಸಿ ಮಾತನಾಡಿದರು.

ಗ್ರಾಮೀಣ ಪ್ರದೇಶದಲ್ಲಿನ ಕುಡಿಯುವ ನೀರಿನ ಪೈಪುಗಳು ರಸ್ತೆ, ಚರಂಡಿಗಳ ಮೂಲಕ ಹಾದು ಹೊಗಿ ಒಡೆದಿದ್ದರೆ, ತಕ್ಷಣ ಸರಿಪಡಿಸಿ, ಇಲ್ಲದಿದ್ದರೆ ಒಡೆದ ಪೈಪ್‌ನಿಂದ ಸೋರಿಕೆಯಾದ ನೀರು ಕಲುಷಿತ ನೀರಿನೊಂದಿಗೆ ಬೆರೆಯುವ ಸಂಭವವಿರುವುದರಿಂದ ಇದರ ಬಗ್ಗೆ ಮುನ್ನಚ್ಚರಿಕೆ ವಹಿಸಿ ಎಂದರು.

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ, ಗ್ರಾಮದ ಸ್ವಚ್ಛತೆ, ಚರಂಡಿ ಸ್ವಚ್ಛತೆ, OHT tank, ತೊಂಬೆ ಹಾಗೂ ಬೋರ್ವೆಲ್ ಗಳ ಸ್ವಚ್ಛತೆ ಬಗ್ಗೆ ಅಧಿಕಾರಿಗಳು ಅಗತ್ಯವಾಗಿ ಕ್ರಮವಹಿಸಬೇಕು ಎಂದು ಅವರು ತಿಳಿಸಿದರು.

ಜಿಲ್ಲೆಯ ತಗ್ಗು ಪ್ರದೇಶಗಳಲ್ಲಿರುವ ನೀರಿನ ಮೂಲಗಳ ದುರಸ್ಥಿ ಕೈಗೊಂಡು ಕಲುಷಿತ ನೀರು ಸೇರ್ಪಡೆಯಾಗದಂತೆ ಕ್ರಮವಹಿಸಬೇಕು. FTK ಟೆಸ್ಟ್ ಮೂಲಕ ಪ್ರತಿ ನೀರಿನ ಮೂಲಗಳ sample ಟೆಸ್ಟ್ ಮಾಡಲು ಕ್ರಮವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಪ್ರೀಮಿಯಂ ಪೆಟ್ರೋಲ್‌ ದರ 2 ರೂ ಏರಿಕೆ

ನವದೆಹಲಿ: ಇರಾನ್‌ ಯುದ್ಧದ ಬಿಸಿ ಸವಾರರಿಗೆ ತಟ್ಟಿದೆ. ತೈಲ ಕಂಪನಿಗಳು ಪ್ರೀಮಿಯಂ ಪೆಟ್ರೋಲ್‌ ದರವನ್ನು 2 ರೂಗೆ ಏರಿಕೆ ಮಾಡಿದೆ.…

24 mins ago

ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದ ಬೈಕ್:‌ ಸವಾರ ಸಾವು

ಸುಂಟಿಕೊಪ್ಪ: ಮಾದಾಪುರ ರಾಜ್ಯ ಹೆದ್ದಾರಿ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸಾವಿಗೀಡಾಗಿ ಹಿಂಬದಿ ಸವಾರ…

34 mins ago

ಚಿಕ್ಕಮಗಳೂರು| ಹೊತ್ತಿ ಉರಿಯುತ್ತಿರುವ ಶೋಲಾರಣ್ಯ: ಅಪರೂಪದ ಸಸ್ಯ ಸಂಪತ್ತು ನಾಶ

ಚಿಕ್ಕಮಗಳೂರು: ಬಿಸಿಲ ಬೇಗೆಗೆ ಅಪರೂಪದ ಶೋಲಾ ಹುಲ್ಲುಗಾವಲು ಹೊತ್ತಿ ಉರಿಯುತ್ತಿದೆ. ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಬರುವ ಶೃಂಗೇರಿಯ ಕೆರೆಕಟ್ಟೆ…

40 mins ago

ಇರಾನ್‌ ಮೇಲೆ ಅಮೇರಿಕಾ-ಇಸ್ರೇಲ್‌ ವೈಮಾನಿಕ ದಾಳಿ: ಇರಾನ್‌ ಗುಪ್ತಚರ ಸಚಿವ ಸಾವು

ಟೆಹರಾನ್:‌ ಇರಾನ್‌ ಮೇಲೆ ಅಮೇರಿಕಾ ಹಾಗೂ ಇಸ್ರೇಲ್‌ ಜಂಟಿ ದಾಳಿ ಮುಂದುವರಿಸಿದ್ದು, ಇರಾನ್‌ ಗುಪ್ತಚರ ಸಚಿವ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.…

1 hour ago

ಸರ್ಕಾರ ರಾಜ್ಯದ ಜನರ ಭರವಸೆ ನುಚ್ಚು ನೂರು ಮಾಡಿದೆ: ವಿಜಯೇಂದ್ರ ಆಕ್ರೋಶ

ಕಲಬುರ್ಗಿ: ಸಿಎಂ ಸಿದ್ದರಾಮಯ್ಯ ಮಂಡಿಸಿದ ಬಜೆಟ್‌ಗೆ ಆಡಳಿತ ಪಕ್ಷದಲ್ಲೇ ವಿರೋಧ ವ್ಯಕ್ತವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ಮಾಡಿದ್ದಾರೆ.…

1 hour ago

ಧುರಂಧರ್‌-2 ಚಿತ್ರ ವೀಕ್ಷಿಸಿ ನಟಿ ರಮ್ಯಾ ಗರಂ: ಫ್ಯಾನ್ಸ್‌ಗೆ ಏನಂದು ಗೊತ್ತಾ?

ಬಹುನಿರೀಕ್ಷಿತ ಧುರಂಧರ್‌-2 ಸಿನಿಮಾ ಬಗ್ಗೆ ನಟಿ ರಮ್ಯಾ ಬರೆದಿರುವ ಟೂ ಪೇಜ್‌ ವಿಮರ್ಶೆ ಈಗ ಸೋಚಷಿಯಲ್‌ ಮೀಡಿಯಾದಲ್ಲಿ ಕಿಚ್ಚು ಹಬ್ಬಿಸಿದೆ.…

2 hours ago