ಮೈಸೂರು: ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಗ್ರಾಮಗಳಲ್ಲಿ ನೀರನ್ನು ಸರಬರಾಜು ಮಾಡುವ ಮುನ್ನ ಪ್ರತಿ ನೀರಿನ ಮೂಲ, ನೀರಿನ ಸಂಗ್ರಹಣೆ ಹಾಗೂ ನೀರು ಪೂರೈಕೆ ಮಾಡುವ ಸ್ಥಳಕ್ಕೆ ಅಧಿಕಾರಿಗಳ ತಂಡ ರಚಿಸಿ ಖುದ್ದಾಗಿ ಭೇಟಿ ನೀಡಿ ನೀರಿನ ಗುಣಮಟ್ಟವನ್ನು ಪರಿಶೀಲಿಸಿ ವರದಿ ನೀಡಬೇಕು ಎಂದು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ. ಎಂ. ಗಾಯಿತ್ರಿ ಅಧಿಕಾರಿಗಳಿಗೆ ಸೂಚಿಸಿದರು.
ಇಂದು ಜಿಲ್ಲಾ ಪಂಚಾಯತ್ನ ಮಿನಿ ಸಭಾಂಗಣದಲ್ಲಿ ಆಯಾ ತಾಲೂಕಿನ ಕಾರ್ಯನಿರ್ವಾಹಕ ಅಧಿಕಾರಿಗಳು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಧಿಕಾರಿಗಳೊಂದಿಗೆ ಕುಡಿಯುವ ನೀರು ಪೂರೈಕೆ ಸಂಬಂಧ ಸಭೆ ನಡೆಸಿ ಮಾತನಾಡಿದರು.
ಗ್ರಾಮೀಣ ಪ್ರದೇಶದಲ್ಲಿನ ಕುಡಿಯುವ ನೀರಿನ ಪೈಪುಗಳು ರಸ್ತೆ, ಚರಂಡಿಗಳ ಮೂಲಕ ಹಾದು ಹೊಗಿ ಒಡೆದಿದ್ದರೆ, ತಕ್ಷಣ ಸರಿಪಡಿಸಿ, ಇಲ್ಲದಿದ್ದರೆ ಒಡೆದ ಪೈಪ್ನಿಂದ ಸೋರಿಕೆಯಾದ ನೀರು ಕಲುಷಿತ ನೀರಿನೊಂದಿಗೆ ಬೆರೆಯುವ ಸಂಭವವಿರುವುದರಿಂದ ಇದರ ಬಗ್ಗೆ ಮುನ್ನಚ್ಚರಿಕೆ ವಹಿಸಿ ಎಂದರು.
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ, ಗ್ರಾಮದ ಸ್ವಚ್ಛತೆ, ಚರಂಡಿ ಸ್ವಚ್ಛತೆ, OHT tank, ತೊಂಬೆ ಹಾಗೂ ಬೋರ್ವೆಲ್ ಗಳ ಸ್ವಚ್ಛತೆ ಬಗ್ಗೆ ಅಧಿಕಾರಿಗಳು ಅಗತ್ಯವಾಗಿ ಕ್ರಮವಹಿಸಬೇಕು ಎಂದು ಅವರು ತಿಳಿಸಿದರು.
ಜಿಲ್ಲೆಯ ತಗ್ಗು ಪ್ರದೇಶಗಳಲ್ಲಿರುವ ನೀರಿನ ಮೂಲಗಳ ದುರಸ್ಥಿ ಕೈಗೊಂಡು ಕಲುಷಿತ ನೀರು ಸೇರ್ಪಡೆಯಾಗದಂತೆ ಕ್ರಮವಹಿಸಬೇಕು. FTK ಟೆಸ್ಟ್ ಮೂಲಕ ಪ್ರತಿ ನೀರಿನ ಮೂಲಗಳ sample ಟೆಸ್ಟ್ ಮಾಡಲು ಕ್ರಮವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…