ಮೈಸೂರು

ಕೆಆರ್‌ಎಸ್‌ ಬಳಿ ಟ್ರಯಲ್‌ ಬ್ಲಾಸ್ಟ್‌ಗೆ ಅನುಮತಿ ನೀಡದಿರಿ: ರಾಜಮಾತೆ ಪ್ರಮೋದಾದೇವಿ ಒಡೆಯರ್‌

ಮೈಸೂರು: ಕೆಆರ್‌ಎಸ್‌ ಅಣೆಕಟ್ಟು ಬಳಿ ಯಾವುದೇ ಕಾರಣಕ್ಕೂ ಟ್ರಯಲ್‌ ಬ್ಲಾಸ್ಟ್‌ಗೆ ಅವಕಾಶ ನೀಡಬಾರದು ಎಂದು ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್‌ ಆಗ್ರಹಿಸಿದ್ದಾರೆ.

ಟ್ರಯಲ್‌ ಬ್ಲಾಸ್ಟ್‌ಗೆ ಅವಕಾಶ ನಡೆಸಲು ಉದ್ದೇಶಿಸಿರುವ ಬೇಬಿ ಬೆಟ್ಟ ಸರ್ವೇ ನಂಬರ್‌ 1ರಲ್ಲಿರುವ ಅಮೃತ್‌ ಮಹಲ್‌ ಕಾವಲ್‌ನ 1623 ಎಕರೆ 7 ಗುಂಟೆ ಪ್ರದೇಶ ಮೈಸೂರು ಅರಸು ಮನೆತನಕ್ಕೆ ಸೇರಿದ ಖಾಸಗಿ ಆಸ್ತಿಯಾಗಿದೆ. ಇಲ್ಲಿ ಯಾವುದೇ ರೀತಿಯ ಗಣಿ ಚಟುವಟಿಕೆ, ಟ್ರಯಲ್‌ ಬ್ಲಾಸ್ಟ್‌ ಸೇರಿ ಇನ್ನಿತರ ಯಾವುದೇ ಚಟುವಟಿಕೆಗಳಿಗೆ ಅವಕಾಶ ನೀಡಬಾರದು ಎಂದು ಅಣೆಕಟ್ಟು ಸುರಕ್ಷತಾ ಸಮಿತಿಗೆ ಪತ್ರದ ಮುಖೇನ ಮನವಿ ಮಾಡಿದ್ದಾರೆ.

ಮೈಸೂರು ಸಂಸ್ಥಾನವಿದ್ದ ಸಮಯದಲ್ಲೇ ಭಾರತ ಸರ್ಕಾರ ಈ ಆಸ್ತಿಯನ್ನು ನನ್ನ ಪತಿ ಶ್ರೀ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್‌ ಅವರ ತಂದೆಗೆ ನೀಡಿದ್ದು, ನನ್ನ ಪತಿ 2013ರ ಡಿಸೆಂಬರ್‌ 10ರಂದು ನಿಧನರಾಗಿದ್ದು, ಆನಂತರ ಈ ಆಸ್ತಿಗೆ ನಾನು ವಾರಸುದಾರಳಾಗಿದ್ದೇನೆ ಎಂದು ತಿಳಿಸಿದ್ದಾರೆ. ಈ ಪ್ರದೇಶವನ್ನು ನನ್ನ ಹೆಸರಿಗೆ ಖಾತೆ ಮಾಡಿಕೊಡುವಂತೆ ಕಂದಾಯ ಇಲಾಖೆಯವರಿಗೆ ಅರ್ಜಿ ಸಲ್ಲಿಸಿದ್ದರೂ, ನಾನಾ ಕಾರಣಗಳನ್ನು ಹೇಳುತ್ತಲೇ ಇದುವರೆಗೂ ನನ್ನ ಹೆಸರಿಗೆ ಖಾತೆ ಮಾಡಿಕೊಟ್ಟಿಲ್ಲ. ಅದಕ್ಕಾಗಿ ಹೈಕೋರ್ಟ್‌ನಲ್ಲಿ ಪ್ರಕರಣ ದಾಖಲಿಸಿ ಬೇಬಿಬೆಟ್ಟ ಕಾವಲ್‌ನ ಸರ್ವೇ ನಂಬರ್.‌1ರ ಪ್ರದೇಶವನ್ನು ನನ್ನ ಹೆಸರಿಗೆ ಖಾತೆ ಮಾಡಿಕೊಡುವಂತೆ ಕೋರಿದ್ದೇನೆ.

ಎಲ್ಲರ ಪರಿಶ್ರಮದಿಂದ ನಿರ್ಮಾಣ ಮಾಡಿರುವ ಅಣೆಕಟ್ಟೆಯನ್ನು ನಾವೆಲ್ಲಾ ಜೋಪಾನ ಮಾಡಬೇಕಿದ್ದು, ಇದು ನಾಲ್ಕು ಜಿಲ್ಲೆಗಳಲ್ಲಿರುವ ಕುಡಿಯುವ ನೀರಿಗೆ, ಕೃಷಿಗೆ ಪ್ರಮುಖ ಆಧಾರವಾಗಿದೆ. ಅಣೆಕಟ್ಟು ನಿರ್ಮಿಸಿದವರ ಪರಿಶ್ರಮವನ್ನು ಹಾಳುಗೆಡವಬಾರದು. ಸಮಿತಿ ಕೂಡಲೇ ಕ್ರಮ ವಹಿಸಿ ನನಗೆ ಸೇರಿದ ಬೇಬಿಬೆಟ್ಟ ಸರ್ವೇ ನಂಬರ್.‌1ರಲ್ಲಿರುವ 1623 ಎಕರೆ 7 ಗುಂಟೆ ವ್ಯಾಪ್ತಿಯಲ್ಲಿ ಟ್ರಯಲ್‌ ಬ್ಲಾಸ್ಟ್‌ಗೆ ಅನುಮತಿ ನೀಡಬಾರದು ಎಂದು ಕೋರಿದ್ದಾರೆ.

 

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಮೇಲುಕೋಟೆಯಲ್ಲಿ ವಾಹನ ದಟ್ಟಣೆ ; ನಿಯಂತ್ರಣಕ್ಕೆ ಶಾಸಕರ ಸೂಚನೆ

ಮೇಲುಕೋಟೆ : ಶ್ರೀ ಚೆಲುವನಾರಾಯಣಸ್ವಾಮಿ ದೇವಾಲಯದ ಸುತ್ತ ಮತ್ತು ಉತ್ಸವ ಬೀದಿಗಳಲ್ಲಿ ಭಕ್ತರ ವಾಹನ ನಿಲುಗಡೆಯನ್ನು ನಿಯಂತ್ರಿಸಬೇಕು ಎಂದು ಮೇಲುಕೋಟೆ…

25 mins ago

ಮಂಗಳೂರು ಬಂದರಿಗೆ ಬಂದ ಎಲ್‌ಪಿಜಿ ಹೊತ್ತ ಎರಡು ಹಡಗು

ಮಂಗಳೂರು : ಅಮೆರಿಕ, ಇಸ್ರೇಲ್ ಹಾಗೂ ಇರಾನ್ ನಡುವಿನ ಯುದ್ಧದ ನಡುವೆ ರಷ್ಯಾದಿಂದ 96 ಸಾವಿರ ಮೆಟ್ರಿಕ್ ಟನ್ ಕಚ್ಚಾತೈಲ…

1 hour ago

ನಮ್ಮ ವೈರಿಗಳಿಗೆ ಮಾತ್ರ ಹೊರ್ಮುಜ್‌ ಮುಚ್ಚಿದೆ : ಇರಾನ್‌

ವಿಶ್ವಸಂಸ್ಥೆ : ಇರಾನ್‌ ವೈರಿಗಳು ಹಾಗೂ ಅವರೊಂದಿಗೆ ನಂಟು ಹೊಂದಿರುವ ರಾಷ್ಟ್ರಗಳಿಗೆ ಮಾತ್ರ ಹೊರ್ಮುಜ್‌ ಜಲಸಂಧಿ ಮುಚ್ಚಲಾಗಿದೆ ಎಂದು ವಿಶ್ವಸಂಸ್ಥೆಯ…

2 hours ago

ಹುಬ್ಬೆ ಹುಣಸೆ ಜಲಾಶಯಕ್ಕೂ ಕಾವೇರಿ ನೀರು : ಶಾಸಕ ಮಂಜುನಾಥ್‌ ಭರವಸೆ

ಹನೂರು : ವಿಧಾನಸಭಾ ಕ್ಷೇತ್ರದ ಪ್ರಮುಖ ಜಲಾಶಯಗಳ ಪೈಕಿ ರಾಮನ ಗುಡ್ಡ ಜಲಾಶಯಕ್ಕೆ ಕಳೆದ ಎರಡು ತಿಂಗಳ ಹಿಂದೆ ಕಾವೇರಿ…

3 hours ago

ಕತಾರ್‌ನಲ್ಲಿ ತಾಂತ್ರಿಕ ದೋಷದಿಂದ ಹೆಲಿಕಾಪ್ಟರ್‌ ಪತನ: 6 ಜನರು ಸಾವು

ಕೈರೋ: ತಾಂತ್ರಿಕ ದೋಷದಿಂದಾಗಿ ಕತಾರ್‌ ಹೆಲಿಕಾಪ್ಟರ್‌ ಅಪಘಾತವಾಗಿ ಆರು ಜನರು ಸಾವನ್ನಪ್ಪಿದ್ದಾರೆ ಎಂದು ಸಚಿವಾಲಯ ಹೇಳಿದೆ. ಕತಾರ್‌ನ ಪ್ರಾದೇಶಿಕ ನೀರಿನಲ್ಲಿ…

3 hours ago

ಬೆಂಗಳೂರಿಗೆ ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಕ್ರಮ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಬೆಂಗಳೂರಿಗೆ ಕುಡಿಯುವ ನೀರಿನ ಸಮಸ್ಯೆಯನ್ನು ಶಾಶ್ವತವಾಗಿ ನಿವಾರಿಸಲು ತಮ್ಮ ಸರ್ಕಾರ ಕ್ರಮ ಕೈಗೊಂಡಿದ್ದು, 6ನೇ ಹಂತದ ಕಾವೇರಿ ನೀರು…

4 hours ago