ಮೈಸೂರು

ಕೆಆರ್‌ಎಸ್‌ ಬಳಿ ಟ್ರಯಲ್‌ ಬ್ಲಾಸ್ಟ್‌ಗೆ ಅನುಮತಿ ನೀಡದಿರಿ: ರಾಜಮಾತೆ ಪ್ರಮೋದಾದೇವಿ ಒಡೆಯರ್‌

ಮೈಸೂರು: ಕೆಆರ್‌ಎಸ್‌ ಅಣೆಕಟ್ಟು ಬಳಿ ಯಾವುದೇ ಕಾರಣಕ್ಕೂ ಟ್ರಯಲ್‌ ಬ್ಲಾಸ್ಟ್‌ಗೆ ಅವಕಾಶ ನೀಡಬಾರದು ಎಂದು ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್‌ ಆಗ್ರಹಿಸಿದ್ದಾರೆ.

ಟ್ರಯಲ್‌ ಬ್ಲಾಸ್ಟ್‌ಗೆ ಅವಕಾಶ ನಡೆಸಲು ಉದ್ದೇಶಿಸಿರುವ ಬೇಬಿ ಬೆಟ್ಟ ಸರ್ವೇ ನಂಬರ್‌ 1ರಲ್ಲಿರುವ ಅಮೃತ್‌ ಮಹಲ್‌ ಕಾವಲ್‌ನ 1623 ಎಕರೆ 7 ಗುಂಟೆ ಪ್ರದೇಶ ಮೈಸೂರು ಅರಸು ಮನೆತನಕ್ಕೆ ಸೇರಿದ ಖಾಸಗಿ ಆಸ್ತಿಯಾಗಿದೆ. ಇಲ್ಲಿ ಯಾವುದೇ ರೀತಿಯ ಗಣಿ ಚಟುವಟಿಕೆ, ಟ್ರಯಲ್‌ ಬ್ಲಾಸ್ಟ್‌ ಸೇರಿ ಇನ್ನಿತರ ಯಾವುದೇ ಚಟುವಟಿಕೆಗಳಿಗೆ ಅವಕಾಶ ನೀಡಬಾರದು ಎಂದು ಅಣೆಕಟ್ಟು ಸುರಕ್ಷತಾ ಸಮಿತಿಗೆ ಪತ್ರದ ಮುಖೇನ ಮನವಿ ಮಾಡಿದ್ದಾರೆ.

ಮೈಸೂರು ಸಂಸ್ಥಾನವಿದ್ದ ಸಮಯದಲ್ಲೇ ಭಾರತ ಸರ್ಕಾರ ಈ ಆಸ್ತಿಯನ್ನು ನನ್ನ ಪತಿ ಶ್ರೀ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್‌ ಅವರ ತಂದೆಗೆ ನೀಡಿದ್ದು, ನನ್ನ ಪತಿ 2013ರ ಡಿಸೆಂಬರ್‌ 10ರಂದು ನಿಧನರಾಗಿದ್ದು, ಆನಂತರ ಈ ಆಸ್ತಿಗೆ ನಾನು ವಾರಸುದಾರಳಾಗಿದ್ದೇನೆ ಎಂದು ತಿಳಿಸಿದ್ದಾರೆ. ಈ ಪ್ರದೇಶವನ್ನು ನನ್ನ ಹೆಸರಿಗೆ ಖಾತೆ ಮಾಡಿಕೊಡುವಂತೆ ಕಂದಾಯ ಇಲಾಖೆಯವರಿಗೆ ಅರ್ಜಿ ಸಲ್ಲಿಸಿದ್ದರೂ, ನಾನಾ ಕಾರಣಗಳನ್ನು ಹೇಳುತ್ತಲೇ ಇದುವರೆಗೂ ನನ್ನ ಹೆಸರಿಗೆ ಖಾತೆ ಮಾಡಿಕೊಟ್ಟಿಲ್ಲ. ಅದಕ್ಕಾಗಿ ಹೈಕೋರ್ಟ್‌ನಲ್ಲಿ ಪ್ರಕರಣ ದಾಖಲಿಸಿ ಬೇಬಿಬೆಟ್ಟ ಕಾವಲ್‌ನ ಸರ್ವೇ ನಂಬರ್.‌1ರ ಪ್ರದೇಶವನ್ನು ನನ್ನ ಹೆಸರಿಗೆ ಖಾತೆ ಮಾಡಿಕೊಡುವಂತೆ ಕೋರಿದ್ದೇನೆ.

ಎಲ್ಲರ ಪರಿಶ್ರಮದಿಂದ ನಿರ್ಮಾಣ ಮಾಡಿರುವ ಅಣೆಕಟ್ಟೆಯನ್ನು ನಾವೆಲ್ಲಾ ಜೋಪಾನ ಮಾಡಬೇಕಿದ್ದು, ಇದು ನಾಲ್ಕು ಜಿಲ್ಲೆಗಳಲ್ಲಿರುವ ಕುಡಿಯುವ ನೀರಿಗೆ, ಕೃಷಿಗೆ ಪ್ರಮುಖ ಆಧಾರವಾಗಿದೆ. ಅಣೆಕಟ್ಟು ನಿರ್ಮಿಸಿದವರ ಪರಿಶ್ರಮವನ್ನು ಹಾಳುಗೆಡವಬಾರದು. ಸಮಿತಿ ಕೂಡಲೇ ಕ್ರಮ ವಹಿಸಿ ನನಗೆ ಸೇರಿದ ಬೇಬಿಬೆಟ್ಟ ಸರ್ವೇ ನಂಬರ್.‌1ರಲ್ಲಿರುವ 1623 ಎಕರೆ 7 ಗುಂಟೆ ವ್ಯಾಪ್ತಿಯಲ್ಲಿ ಟ್ರಯಲ್‌ ಬ್ಲಾಸ್ಟ್‌ಗೆ ಅನುಮತಿ ನೀಡಬಾರದು ಎಂದು ಕೋರಿದ್ದಾರೆ.

 

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಸಫಾರಿಗಳಲ್ಲಿ ಇನ್ಮುಂದೆ ತೆರೆದ ವಾಹನಕ್ಕೆ ಅವಕಾಶವಿಲ್ಲ : ಈಶ್ವರ ಖಂಡ್ರೆ

ಸಫಾರಿ ಕ್ಯಾಂಪರ್ ಗಳಿಗೆ ಕಬ್ಬಿಣದ ಸರಳು, ಒಡೆಯದ ಗಾಜು ಅಳವಡಿಸಲು ಖಂಡ್ರೆ ಸೂಚನೆ ಬೆಂಗಳೂರು :  ರಾಜ್ಯದ ಐದು ಹುಲಿ…

59 mins ago

ಮ.ಬೆಟ್ಟ | ಮರದ ಕೊಂಬೆ ಬಿದ್ದು ಮೂವರಿಗೆ ಗಾಯ

ಹನೂರು : ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಬಂದಿದ್ದ ಭಕ್ತರ ಮೇಲೆ ಮರದ ಕೊಂಬೆ ಬಿದ್ದು ಮೂವರು ಗಾಯಗೊಂಡಿರುವ…

3 hours ago

ಔಷಧಿ ಮಾರಾಟಗಾರರ ಸಂಘ ಕರೆ ನೀಡಿದ್ದ ಬಂದ್‍ಗೆ ಮಿಶ್ರ ಪ್ರತಿಕ್ರಿಯೆ

ಬೆಂಗಳೂರು: ಆನ್‍ಲೈನ್‍ನಲ್ಲಿ ಔಷಧಿಗಳ ಮಾರಾಟ ವಿರೋಧಿಸಿ ಅಖಿಲ ಭಾರತ ಔಷಧಿ ಮಾರಾಟಗಾರರ ಸಂಘ ಕರೆ ನೀಡಿದ್ದ ಕರ್ನಾಟಕ ಬಂದ್‍ಗೆ ಮಿಶ್ರ…

6 hours ago

ಯಳಂದೂರು: ಬೋನಿಗೆ ಬಿದ್ದ ಚಿರತೆ

ಯಳಂದೂರು: ಕಳೆದ ಕೆಲ ದಿನಗಳಿಂದ ಉಪಟಳ ನೀಡುತ್ತಿದ್ದ ಚಿರತೆಯೊಂದು ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಸೆರೆಯಾಗಿದೆ. ತಾಲ್ಲೂಕಿನ ಗುಂಬಳ್ಳಿ ಗ್ರಾಮದಲ್ಲಿ…

6 hours ago

ಜಿಬಿಎ ಚುನಾವಣೆಗೆ ಕಾಲಾವಕಾಶ ನೀಡಿದ ಸುಪ್ರೀಂಕೋರ್ಟ್‌

ಬೆಂಗಳೂರು: ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ ಚುನಾವಣೆ ನಡೆಸಲು ಕಾಲಾವಕಾಶ ಕೋರಿದ್ದ ರಾಜ್ಯ ಸರ್ಕಾರಕ್ಕೆ ಸುಪ್ರೀಂಕೋರ್ಟ್‌ ರಿಲೀಫ್‌ ನೀಡಿದೆ. ಜಿಬಿಎ ಚುನಾವಣೆಗೆ…

8 hours ago

ರಾಜ್ಯದಲ್ಲಿ ಒಂದು ವಾರ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಒಂದು ವಾರ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮೇ.20ರಿಂದ 26ರವರೆಗೆ ರಾಜ್ಯದ…

8 hours ago