ಮೈಸೂರು

ಕೆಆರ್‌ಎಸ್‌ ಬಳಿ ಟ್ರಯಲ್‌ ಬ್ಲಾಸ್ಟ್‌ಗೆ ಅನುಮತಿ ನೀಡದಿರಿ: ರಾಜಮಾತೆ ಪ್ರಮೋದಾದೇವಿ ಒಡೆಯರ್‌

ಮೈಸೂರು: ಕೆಆರ್‌ಎಸ್‌ ಅಣೆಕಟ್ಟು ಬಳಿ ಯಾವುದೇ ಕಾರಣಕ್ಕೂ ಟ್ರಯಲ್‌ ಬ್ಲಾಸ್ಟ್‌ಗೆ ಅವಕಾಶ ನೀಡಬಾರದು ಎಂದು ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್‌ ಆಗ್ರಹಿಸಿದ್ದಾರೆ.

ಟ್ರಯಲ್‌ ಬ್ಲಾಸ್ಟ್‌ಗೆ ಅವಕಾಶ ನಡೆಸಲು ಉದ್ದೇಶಿಸಿರುವ ಬೇಬಿ ಬೆಟ್ಟ ಸರ್ವೇ ನಂಬರ್‌ 1ರಲ್ಲಿರುವ ಅಮೃತ್‌ ಮಹಲ್‌ ಕಾವಲ್‌ನ 1623 ಎಕರೆ 7 ಗುಂಟೆ ಪ್ರದೇಶ ಮೈಸೂರು ಅರಸು ಮನೆತನಕ್ಕೆ ಸೇರಿದ ಖಾಸಗಿ ಆಸ್ತಿಯಾಗಿದೆ. ಇಲ್ಲಿ ಯಾವುದೇ ರೀತಿಯ ಗಣಿ ಚಟುವಟಿಕೆ, ಟ್ರಯಲ್‌ ಬ್ಲಾಸ್ಟ್‌ ಸೇರಿ ಇನ್ನಿತರ ಯಾವುದೇ ಚಟುವಟಿಕೆಗಳಿಗೆ ಅವಕಾಶ ನೀಡಬಾರದು ಎಂದು ಅಣೆಕಟ್ಟು ಸುರಕ್ಷತಾ ಸಮಿತಿಗೆ ಪತ್ರದ ಮುಖೇನ ಮನವಿ ಮಾಡಿದ್ದಾರೆ.

ಮೈಸೂರು ಸಂಸ್ಥಾನವಿದ್ದ ಸಮಯದಲ್ಲೇ ಭಾರತ ಸರ್ಕಾರ ಈ ಆಸ್ತಿಯನ್ನು ನನ್ನ ಪತಿ ಶ್ರೀ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್‌ ಅವರ ತಂದೆಗೆ ನೀಡಿದ್ದು, ನನ್ನ ಪತಿ 2013ರ ಡಿಸೆಂಬರ್‌ 10ರಂದು ನಿಧನರಾಗಿದ್ದು, ಆನಂತರ ಈ ಆಸ್ತಿಗೆ ನಾನು ವಾರಸುದಾರಳಾಗಿದ್ದೇನೆ ಎಂದು ತಿಳಿಸಿದ್ದಾರೆ. ಈ ಪ್ರದೇಶವನ್ನು ನನ್ನ ಹೆಸರಿಗೆ ಖಾತೆ ಮಾಡಿಕೊಡುವಂತೆ ಕಂದಾಯ ಇಲಾಖೆಯವರಿಗೆ ಅರ್ಜಿ ಸಲ್ಲಿಸಿದ್ದರೂ, ನಾನಾ ಕಾರಣಗಳನ್ನು ಹೇಳುತ್ತಲೇ ಇದುವರೆಗೂ ನನ್ನ ಹೆಸರಿಗೆ ಖಾತೆ ಮಾಡಿಕೊಟ್ಟಿಲ್ಲ. ಅದಕ್ಕಾಗಿ ಹೈಕೋರ್ಟ್‌ನಲ್ಲಿ ಪ್ರಕರಣ ದಾಖಲಿಸಿ ಬೇಬಿಬೆಟ್ಟ ಕಾವಲ್‌ನ ಸರ್ವೇ ನಂಬರ್.‌1ರ ಪ್ರದೇಶವನ್ನು ನನ್ನ ಹೆಸರಿಗೆ ಖಾತೆ ಮಾಡಿಕೊಡುವಂತೆ ಕೋರಿದ್ದೇನೆ.

ಎಲ್ಲರ ಪರಿಶ್ರಮದಿಂದ ನಿರ್ಮಾಣ ಮಾಡಿರುವ ಅಣೆಕಟ್ಟೆಯನ್ನು ನಾವೆಲ್ಲಾ ಜೋಪಾನ ಮಾಡಬೇಕಿದ್ದು, ಇದು ನಾಲ್ಕು ಜಿಲ್ಲೆಗಳಲ್ಲಿರುವ ಕುಡಿಯುವ ನೀರಿಗೆ, ಕೃಷಿಗೆ ಪ್ರಮುಖ ಆಧಾರವಾಗಿದೆ. ಅಣೆಕಟ್ಟು ನಿರ್ಮಿಸಿದವರ ಪರಿಶ್ರಮವನ್ನು ಹಾಳುಗೆಡವಬಾರದು. ಸಮಿತಿ ಕೂಡಲೇ ಕ್ರಮ ವಹಿಸಿ ನನಗೆ ಸೇರಿದ ಬೇಬಿಬೆಟ್ಟ ಸರ್ವೇ ನಂಬರ್.‌1ರಲ್ಲಿರುವ 1623 ಎಕರೆ 7 ಗುಂಟೆ ವ್ಯಾಪ್ತಿಯಲ್ಲಿ ಟ್ರಯಲ್‌ ಬ್ಲಾಸ್ಟ್‌ಗೆ ಅನುಮತಿ ನೀಡಬಾರದು ಎಂದು ಕೋರಿದ್ದಾರೆ.

 

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ವಿಚಾರಣೆ ಇಲ್ಲದೆ ಶಿಕ್ಷೆ ಕೊಡಲು ಸಂವಿಧಾನ ಒಪ್ಪುವುದಿಲ್ಲ

ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…

50 mins ago

ಆ ಮೂರು ಜೀವಗಳಿಗೂ ಬೆಲೆಯೇ ಇರಲಿಲ್ಲವೇ?

ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…

55 mins ago

ಅಸಮಾಧಾನದ ಬೇಗೆ: ಸಿಎಂ ಡಿಕೆಶಿಗೆ ಹೈಕಮಾಂಡ್ ‘ಎಸಿ’

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ರಾಜ್ಯ ಕಾಂಗ್ರೆಸ್‌ನಲ್ಲಿ ಪರ್ಯಾಯ ಶಕ್ತಿ ಕೇಂದ್ರ ತಲೆ ಎತ್ತುತ್ತದೆಯೇ? ಇಂತಹದೊಂದು ಪ್ರಶ್ನೆಗೆ ತಕ್ಷಣ ಉತ್ತರ…

1 hour ago

ನಾಲ್ಕು ಶೂಟೌಟ್ ಪ್ರಕರಣ; ಏಳು ಸಾವು

ಮಹಾದೇಶ ಎಂ ಗೌಡ ೨೦೧೪ರಿಂದ ೨೦೨೬ರವರೆಗೆ ನಡೆದ ಪ್ರಕರಣಗಳು ಹನೂರು: ತಾಲ್ಲೂಕಿನ ಕಾವೇರಿ ವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ…

1 hour ago

ಹೋಟೆಲ್,ರೆಸ್ಟೋರೆಂಟ್‌ಗಳ ಮೇಲೆ ಮುಂದುವರೆದ ದಾಳಿ

ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…

10 hours ago