ಮೈಸೂರು: ಕಳೆ ಹತ್ತು ವರ್ಷಗಳಿಂದ ಬಿಜೆಪಿ ದೇಶಕ್ಕೆ ಮಾಡಿರುವ ಮೋಸ, ದುರಾಡಳಿತ ಕುರಿತು ಮನವರಿಕೆ ಮಾಡಿಕೊಡುವ ಮೂಲಕ ಕುರಿತು ಜನರನ್ನು ಸಂಪರ್ಕಿಸಿ. ಆದರೇ ಯಾವುದೇ ಕಾರಣಕ್ಕೂ ಪಕ್ಷ ಮುಖಂಡರು, ಸ್ಥಳೀಯರು ಅಭ್ಯರ್ಥಿಗಳು, ಸಚಿವರು ಯಾರೂ ಕೂಡಾ ಯದುವೀರ್ ಒಡೆಯರ್ ಅವರನ್ನು ವೈಯಕ್ತಿಕವಾಗಿ ಗುರಿಯಾಗಿಸಿಕೊಂಡು ಮಾತನಾಡುವುದಾಗಲಿ, ಹೇಳಿಕೆ ನೀಡುವುದನ್ನು ಮಾಡಬಾರದು ಎಂದು ಸಿಎಂ ಸಿದ್ದರಾಮಯ್ಯ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.
ಮೈಸೂರಿನ ಖಾಸಗಿ ಹೊಟೇಲ್ನಲ್ಲಿ ಭಾನುವಾರ ನಡೆದ ಮೈಸೂರು-ಕೊಡಗು, ಚಾಮರಾಜನಗರ ಜಿಲ್ಲೆಗಳ ಕಾಂಗ್ರೆಸ್ ಪಕ್ಷದ ಜನಪ್ರತಿನಿಧಿಗಳು ಹಾಗೂ ಸ್ಥಳೀಯ ಮುಖಂಡರೊಂದಿಗಿನ ಸಭೆಯಲ್ಲಿ ಈ ಸೂಚನೆ ನೀಡಿದ್ದಾರೆ.
ನಮ್ಮ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಯನ್ನು ಮನೆ-ಮನೆಗೂ ತಿಳಿಸಿ, ನಮ್ಮ ಪಕ್ಷದ ಅಭ್ಯರ್ಥಿ ಪರ ಮತ ಯಾಚಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಿವಿಮಾತು ಹೇಳಿದ್ದಾರೆ.
ಹಳೇ ಮೈಸೂರು ಭಾಗದಲ್ಲಿ ರಾಜ ವಂಶಸ್ಥರ ಜತೆ ಜನರು ಭಾವನಾತ್ಮಕ ಸಂಬಂಧ ಇಟ್ಟುಕೊಂಡಿದ್ದಾರೆ. ಆದ್ದರಿಂದ ಯದುವೀರ್ ಒಡೆಯರ್ ಅವರನ್ನು ಮಹಾರಾಜ, ರಾಜವಂಶಸ್ಥ ಎಂದು ಪದೇಪದೆ ಉಲ್ಲೇಖಿಸದೆ ಬಿಜೆಪಿ ಅಭ್ಯರ್ಥಿ ಎಂದು ಹೇಳಿ. ಅವರ ವಿರುದ್ಧ ಸಿಕ್ಕಸಿಕ್ಕಂತೆ ಹೇಳಿಕೆಗಳನ್ನು ಕೊಡಬೇಡಿ, ಭಾಷಣ ಮಾಡುವಾಗ ಎಚ್ಚರಿಕೆಯಿಂದ ಮಾತನಾಡಿ ಎಂದು ತಿಳಿಸಿದ್ದಾರೆ.
ನಿಮ್ಮ ಹೇಳಿಕೆಗಳು ಬಿಜೆಪಿಯವರಿಗೆ ಆಹಾರವಾಗಬಾರದು. ಭಾವನಾತ್ಮಕ ವಿಚಾರಗಳನ್ನು ತಿರುಚುವುದರಲ್ಲಿ ಬಿಜೆಪಿಯವರು ನಿಸ್ಸೀಮರು ಹಾಗಾಗಿ ಯದುವೀರ್ ಬಗ್ಗೆ ಮಾತನಾಡುವಾಗ ಎಚ್ಚರ ವಹಿಸಿ ಎಂದು ಮನದಟ್ಟು ಮಾಡಿದ್ದಾರೆ.
ಪುನೀತ್ ಮಡಿಕೇರಿ ೨೦೨೭ರ ಏಪ್ರಿಲ್-ಮೇನಲ್ಲಿ ನಡೆಯಲಿರುವ ಹಾಕಿ ಉತ್ಸವಕ್ಕೆ ಸಿದ್ಧತೆ; ಟರ್ಫ್, ಹೊನಲು ಬೆಳಕಿನ ಪಂದ್ಯಾವಳಿಗೆ ಚಿಂತನೆ ಮಡಿಕೇರಿ: ೨೬ನೇ…
ಮಂಜು ಕೋಟೆ ಮೇವು, ಕುಡಿಯುವ ನೀರಿಗಾಗಿ ಬರುವ ವನ್ಯಪ್ರಾಣಿಗಳನ್ನು ಕಣ್ತುಂಬಿಕೊಳ್ಳುತ್ತಿರುವ ಪ್ರವಾಸಿಗರು ಎಚ್.ಡಿ.ಕೋಟೆ: ಬಿಸಿಲಿನ ತಾಪಮಾನದಿಂದ ಮೇವು ಮತ್ತು ಕುಡಿಯುವ…
೧೦೦ ಕಿ.ಮೀ.ಹೆಚ್ಡಿಪಿಇ ಪೈಪ್ ಅಳವಡಿಕೆ ಪ್ರಗತಿಯಲ್ಲಿ; ಕಾವೇರಿ ನೀರು ಪೂರೈಸಲು ನಗರಸಭೆ ಕ್ರಮ ಪ್ರಸಾದ್ ಲಕ್ಕೂರು ಚಾಮರಾಜನಗರ: ನಗರದಲ್ಲಿ…
ಗಿರೀಶ್ ಹುಣಸೂರು ರಾಜ್ಯದ ೫.೫೫ ಕೋಟಿ ಮತದಾರರ ಪರಿಷ್ಕರಣೆ ನಡೆಸಲಿರುವ ಬಿಎಲ್ಒಗಳು ಮೈಸೂರು:ಕಳೆದ ಎಲೆಕ್ಷನ್ನಲ್ಲಿ ಇದೇ ಬೂತ್ನಲ್ಲಿ ವೋಟ್ ಮಾಡಿದ್ದೆ,…
ಮಾಸ್ಕೋ: ಉಕ್ರೇನ್ ಶನಿವಾರ ರಾತ್ರೋರಾತ್ರಿ ಮಾಸ್ಕೋ ಸೇರಿದಂತೆ ರಷ್ಯಾದ ಅನೇಕ ಭಾಗಗಳನ್ನು ಗುರಿಯಾಗಿಸಿಕೊಂಡು ಡ್ರೋನ್ ದಾಳಿ ನಡೆಸಿದೆ. ಈ ವೈಮಾನಿಕ…