ಮೈಸೂರು

ಯದುವೀರ್‌ರನ್ನು ಕೆಣಕಬೇಡಿ; ಗ್ಯಾರೆಂಟಿ ಮೂಲಕ ಪ್ರಚಾರ ಮಾಡಿ: ಸಿಎಂ ಸಿದ್ದರಾಮಯ್ಯ

ಮೈಸೂರು: ಕಳೆ ಹತ್ತು ವರ್ಷಗಳಿಂದ ಬಿಜೆಪಿ ದೇಶಕ್ಕೆ ಮಾಡಿರುವ ಮೋಸ, ದುರಾಡಳಿತ ಕುರಿತು ಮನವರಿಕೆ ಮಾಡಿಕೊಡುವ ಮೂಲಕ ಕುರಿತು ಜನರನ್ನು ಸಂಪರ್ಕಿಸಿ. ಆದರೇ ಯಾವುದೇ ಕಾರಣಕ್ಕೂ ಪಕ್ಷ ಮುಖಂಡರು, ಸ್ಥಳೀಯರು ಅಭ್ಯರ್ಥಿಗಳು, ಸಚಿವರು ಯಾರೂ ಕೂಡಾ ಯದುವೀರ್‌ ಒಡೆಯರ್‌ ಅವರನ್ನು ವೈಯಕ್ತಿಕವಾಗಿ ಗುರಿಯಾಗಿಸಿಕೊಂಡು ಮಾತನಾಡುವುದಾಗಲಿ, ಹೇಳಿಕೆ ನೀಡುವುದನ್ನು ಮಾಡಬಾರದು ಎಂದು ಸಿಎಂ ಸಿದ್ದರಾಮಯ್ಯ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

ಮೈಸೂರಿನ ಖಾಸಗಿ ಹೊಟೇಲ್‌ನಲ್ಲಿ ಭಾನುವಾರ ನಡೆದ ಮೈಸೂರು-ಕೊಡಗು, ಚಾಮರಾಜನಗರ ಜಿಲ್ಲೆಗಳ ಕಾಂಗ್ರೆಸ್‌ ಪಕ್ಷದ ಜನಪ್ರತಿನಿಧಿಗಳು ಹಾಗೂ ಸ್ಥಳೀಯ ಮುಖಂಡರೊಂದಿಗಿನ ಸಭೆಯಲ್ಲಿ ಈ ಸೂಚನೆ ನೀಡಿದ್ದಾರೆ.

ನಮ್ಮ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಯನ್ನು ಮನೆ-ಮನೆಗೂ ತಿಳಿಸಿ, ನಮ್ಮ ಪಕ್ಷದ ಅಭ್ಯರ್ಥಿ ಪರ ಮತ ಯಾಚಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಿವಿಮಾತು ಹೇಳಿದ್ದಾರೆ.

ಹಳೇ ಮೈಸೂರು ಭಾಗದಲ್ಲಿ ರಾಜ ವಂಶಸ್ಥರ ಜತೆ ಜನರು ಭಾವನಾತ್ಮಕ ಸಂಬಂಧ ಇಟ್ಟುಕೊಂಡಿದ್ದಾರೆ. ಆದ್ದರಿಂದ ಯದುವೀರ್‌ ಒಡೆಯರ್‌ ಅವರನ್ನು ಮಹಾರಾಜ, ರಾಜವಂಶಸ್ಥ ಎಂದು ಪದೇಪದೆ ಉಲ್ಲೇಖಿಸದೆ ಬಿಜೆಪಿ ಅಭ್ಯರ್ಥಿ ಎಂದು ಹೇಳಿ. ಅವರ ವಿರುದ್ಧ ಸಿಕ್ಕಸಿಕ್ಕಂತೆ ಹೇಳಿಕೆಗಳನ್ನು ಕೊಡಬೇಡಿ, ಭಾಷಣ ಮಾಡುವಾಗ ಎಚ್ಚರಿಕೆಯಿಂದ ಮಾತನಾಡಿ ಎಂದು ತಿಳಿಸಿದ್ದಾರೆ.

ನಿಮ್ಮ ಹೇಳಿಕೆಗಳು ಬಿಜೆಪಿಯವರಿಗೆ ಆಹಾರವಾಗಬಾರದು. ಭಾವನಾತ್ಮಕ ವಿಚಾರಗಳನ್ನು ತಿರುಚುವುದರಲ್ಲಿ ಬಿಜೆಪಿಯವರು ನಿಸ್ಸೀಮರು ಹಾಗಾಗಿ ಯದುವೀರ್‌ ಬಗ್ಗೆ ಮಾತನಾಡುವಾಗ ಎಚ್ಚರ ವಹಿಸಿ ಎಂದು ಮನದಟ್ಟು ಮಾಡಿದ್ದಾರೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ವಿಚಾರಣೆ ಇಲ್ಲದೆ ಶಿಕ್ಷೆ ಕೊಡಲು ಸಂವಿಧಾನ ಒಪ್ಪುವುದಿಲ್ಲ

ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…

2 hours ago

ಆ ಮೂರು ಜೀವಗಳಿಗೂ ಬೆಲೆಯೇ ಇರಲಿಲ್ಲವೇ?

ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…

2 hours ago

ಅಸಮಾಧಾನದ ಬೇಗೆ: ಸಿಎಂ ಡಿಕೆಶಿಗೆ ಹೈಕಮಾಂಡ್ ‘ಎಸಿ’

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ರಾಜ್ಯ ಕಾಂಗ್ರೆಸ್‌ನಲ್ಲಿ ಪರ್ಯಾಯ ಶಕ್ತಿ ಕೇಂದ್ರ ತಲೆ ಎತ್ತುತ್ತದೆಯೇ? ಇಂತಹದೊಂದು ಪ್ರಶ್ನೆಗೆ ತಕ್ಷಣ ಉತ್ತರ…

2 hours ago

ನಾಲ್ಕು ಶೂಟೌಟ್ ಪ್ರಕರಣ; ಏಳು ಸಾವು

ಮಹಾದೇಶ ಎಂ ಗೌಡ ೨೦೧೪ರಿಂದ ೨೦೨೬ರವರೆಗೆ ನಡೆದ ಪ್ರಕರಣಗಳು ಹನೂರು: ತಾಲ್ಲೂಕಿನ ಕಾವೇರಿ ವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ…

2 hours ago

ಹೋಟೆಲ್,ರೆಸ್ಟೋರೆಂಟ್‌ಗಳ ಮೇಲೆ ಮುಂದುವರೆದ ದಾಳಿ

ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…

11 hours ago