ಮೈಸೂರು: ಕಳೆ ಹತ್ತು ವರ್ಷಗಳಿಂದ ಬಿಜೆಪಿ ದೇಶಕ್ಕೆ ಮಾಡಿರುವ ಮೋಸ, ದುರಾಡಳಿತ ಕುರಿತು ಮನವರಿಕೆ ಮಾಡಿಕೊಡುವ ಮೂಲಕ ಕುರಿತು ಜನರನ್ನು ಸಂಪರ್ಕಿಸಿ. ಆದರೇ ಯಾವುದೇ ಕಾರಣಕ್ಕೂ ಪಕ್ಷ ಮುಖಂಡರು, ಸ್ಥಳೀಯರು ಅಭ್ಯರ್ಥಿಗಳು, ಸಚಿವರು ಯಾರೂ ಕೂಡಾ ಯದುವೀರ್ ಒಡೆಯರ್ ಅವರನ್ನು ವೈಯಕ್ತಿಕವಾಗಿ ಗುರಿಯಾಗಿಸಿಕೊಂಡು ಮಾತನಾಡುವುದಾಗಲಿ, ಹೇಳಿಕೆ ನೀಡುವುದನ್ನು ಮಾಡಬಾರದು ಎಂದು ಸಿಎಂ ಸಿದ್ದರಾಮಯ್ಯ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.
ಮೈಸೂರಿನ ಖಾಸಗಿ ಹೊಟೇಲ್ನಲ್ಲಿ ಭಾನುವಾರ ನಡೆದ ಮೈಸೂರು-ಕೊಡಗು, ಚಾಮರಾಜನಗರ ಜಿಲ್ಲೆಗಳ ಕಾಂಗ್ರೆಸ್ ಪಕ್ಷದ ಜನಪ್ರತಿನಿಧಿಗಳು ಹಾಗೂ ಸ್ಥಳೀಯ ಮುಖಂಡರೊಂದಿಗಿನ ಸಭೆಯಲ್ಲಿ ಈ ಸೂಚನೆ ನೀಡಿದ್ದಾರೆ.
ನಮ್ಮ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಯನ್ನು ಮನೆ-ಮನೆಗೂ ತಿಳಿಸಿ, ನಮ್ಮ ಪಕ್ಷದ ಅಭ್ಯರ್ಥಿ ಪರ ಮತ ಯಾಚಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಿವಿಮಾತು ಹೇಳಿದ್ದಾರೆ.
ಹಳೇ ಮೈಸೂರು ಭಾಗದಲ್ಲಿ ರಾಜ ವಂಶಸ್ಥರ ಜತೆ ಜನರು ಭಾವನಾತ್ಮಕ ಸಂಬಂಧ ಇಟ್ಟುಕೊಂಡಿದ್ದಾರೆ. ಆದ್ದರಿಂದ ಯದುವೀರ್ ಒಡೆಯರ್ ಅವರನ್ನು ಮಹಾರಾಜ, ರಾಜವಂಶಸ್ಥ ಎಂದು ಪದೇಪದೆ ಉಲ್ಲೇಖಿಸದೆ ಬಿಜೆಪಿ ಅಭ್ಯರ್ಥಿ ಎಂದು ಹೇಳಿ. ಅವರ ವಿರುದ್ಧ ಸಿಕ್ಕಸಿಕ್ಕಂತೆ ಹೇಳಿಕೆಗಳನ್ನು ಕೊಡಬೇಡಿ, ಭಾಷಣ ಮಾಡುವಾಗ ಎಚ್ಚರಿಕೆಯಿಂದ ಮಾತನಾಡಿ ಎಂದು ತಿಳಿಸಿದ್ದಾರೆ.
ನಿಮ್ಮ ಹೇಳಿಕೆಗಳು ಬಿಜೆಪಿಯವರಿಗೆ ಆಹಾರವಾಗಬಾರದು. ಭಾವನಾತ್ಮಕ ವಿಚಾರಗಳನ್ನು ತಿರುಚುವುದರಲ್ಲಿ ಬಿಜೆಪಿಯವರು ನಿಸ್ಸೀಮರು ಹಾಗಾಗಿ ಯದುವೀರ್ ಬಗ್ಗೆ ಮಾತನಾಡುವಾಗ ಎಚ್ಚರ ವಹಿಸಿ ಎಂದು ಮನದಟ್ಟು ಮಾಡಿದ್ದಾರೆ.
ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…
ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ರಾಜ್ಯ ಕಾಂಗ್ರೆಸ್ನಲ್ಲಿ ಪರ್ಯಾಯ ಶಕ್ತಿ ಕೇಂದ್ರ ತಲೆ ಎತ್ತುತ್ತದೆಯೇ? ಇಂತಹದೊಂದು ಪ್ರಶ್ನೆಗೆ ತಕ್ಷಣ ಉತ್ತರ…
ಮಹಾದೇಶ ಎಂ ಗೌಡ ೨೦೧೪ರಿಂದ ೨೦೨೬ರವರೆಗೆ ನಡೆದ ಪ್ರಕರಣಗಳು ಹನೂರು: ತಾಲ್ಲೂಕಿನ ಕಾವೇರಿ ವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ…
ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…