Do not delay legal applications: K.N. Phaneendra.
ಮೈಸೂರು: ಕಾನೂನಾತ್ಮಕವಾಗಿ ಇರುವ ಅರ್ಜಿಗಳನ್ನು ವಿಲೇವಾರಿ ಮಾಡಬೇಕೇ ಹೊರತು ವಿಳಂಬ ಮಾಡಬಾರದು. ನಿಯಮದ ಪ್ರಕಾರವಾಗಿ ನಡೆದುಕೊಳ್ಳಬೇಕಾದ ಸಂದರ್ಭದಲ್ಲೂ ಮುಂದೂಡುವುದು ಸರಿಯಲ್ಲ ಎಂದು ಉಪ ಲೋಕಾಯುಕ್ತ ಕೆ.ಎನ್.ಫಣೀಂದ್ರ ಕಿವಿಮಾತು ಹೇಳಿದರು.
ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ದೂರುಗಳ ವಿಚಾರಣೆ ಹಾಗೂ ಪ್ರಕರಣಗಳ ವಿಲೇವಾರಿ ವಿಚಾರವಾಗಿ ಜಿಲ್ಲಾಮಟ್ಟದ ಅಧಿಕಾರಿಗಳೊಂದಿಗೆ ಹಾಗೂ ದೂರುದಾರರು ಮತ್ತು ಎದುರುದಾರರಿಗೆ ವಿಚಾರಣೆಯ ಸಭೆಯಲ್ಲಿ ಅವರು ಮಾತನಾಡಿದರು.
ಮೂರು ದಿನಗಳವರೆಗೆ ನಡೆದ ದೂರುಗಳ ವಿಚಾರಣೆಯು ಯಶಸ್ವಿಯಾಗಿದೆ. ಸಾರ್ವಜನಿಕ, ಸಾಮಾಜಿಕ, ಮತ್ತು ವ್ಯಕ್ತಿಗತ, ವೈಯಕ್ತಿಕ ದೂರುಗಳು ಬಂದಿವೆ. ಇದರಲ್ಲಿ ಬಹುತೇಕ ದೂರುಗಳು ವೈಯಕ್ತಿಕವಾಗಿವೆ. ಇವುಗಳನ್ನು ಸಮಯ ಪ್ರಜ್ಞೆ ಮತ್ತು ಸಮಯೋಚಿತವಾಗಿ ಇತ್ಯರ್ಥಪಡಿಸಬೇಕು. ಆದರೆ. ಕಾನೂನಿನ ವಿರುದ್ಧವಾಗಿ ನಡೆದುಕೊಂಡು ಕೆಲಸ ಮಾಡಲು ಹಿಂಜರಿದರೆ ಭ್ರಷ್ಟಾಚಾರಕ್ಕೆ ಕಾರಣವಾಗಲಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಉಪ ಲೋಕಾಯುಕ್ತಕ್ಕೆ ೬೦೦ ಅರ್ಜಿಗಳು ಬಂದಿದ್ದವು. ಇದರಲ್ಲಿ ವಿಚಾರಣೆ ಮಾಡಬಹುದಾದ ಅರ್ಜಿಗಳನ್ನು ಆಯ್ಕೆ ಮಾಡಿದಾಗ ೪೦೦ ಅರ್ಜಿಗಳನ್ನು ಆಯ್ಕೆ ಮಾಡಲಾಗಿತ್ತು. ಕೆಲವು ಕಾನೂನಾತ್ಮಕ, ತಾಂತ್ರಿಕ ವರದಿ ಆಧರಿಸಿ ವಿಚಾರಣೆ ಮಾಡಬೇಕಿರುವುದರಿಂದ ಸಮಯ ಪಡೆಯಲಾಗಿದೆ. ನಮ್ಮ ಹಂತದಲ್ಲಿ ಇರುವುದನ್ನು ಪರಿಹರಿಸಲು ಮೊದಲ ಆದ್ಯತೆ ನೀಡಲಾಗಿದೆ ಎಂದರು.
ಮೈಸೂರು : ಆಂತರಿಕ ಭದ್ರತಾ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಎಂ.ಚಂದ್ರಶೇಖರ್ ಅವರು ಮಂಗಳವಾರ ಬೆಳಿಗ್ಗೆ ಮೈಸೂರಿಗೆ ಭೇಟಿ ನೀಡಿ…
ಮೈಸೂರು : ತಿಬ್ಬಾಸ್ ಗ್ರೂಪ್ ಸಹಯೋಗದೊಂದಿಗೆ ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರ ಆವರಣದಲ್ಲಿ ಡಿ.೨೮ರಂದು ‘ಫ್ಯೂಚರ್ ಮಾಡೆಲ್ ಆಫ್ ಇಂಡಿಯಾ’ ಶೀರ್ಷಿಕೆಯಡಿ…
ಮೈಸೂರು : ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ ವತಿಯಿಂದ ೬೬/೧೧ ಕೆ.ವಿ ದೊಡ್ಡಕೆರೆ ಮೈದಾನ ವಿದ್ಯುತ್ ವಿತರಣಾ ಕೇಂದ್ರದಲ್ಲಿ…
ಬೆಳಗಾವಿ : ವಿರೋಧ ಪಕ್ಷದವರು ಅಸತ್ಯವನ್ನು ಹೇಳುವುದನ್ನು ಸಾಧ್ಯವಾದಷ್ಟು ನಿಲ್ಲಿಸಿ ವಾಸ್ತವದ ತಳಹದಿಯ ಮೇಲೆ ಟೀಕೆಗಳನ್ನು ಮಾಡಬೇಕು. ಉತ್ತರಗಳನ್ನು ಕೊಡುವಾಗ…
ಬೆಳಗಾವಿ : ರಾಜ್ಯ ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ ಬೆಳಗಾವಿಯಲ್ಲಿ ಬಿಜೆಪಿ ನಾಯಕರು ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ಸುವರ್ಣ…
ಡಿಸಿ ಶಿಲ್ಪಾನಾಗ್ ಸೂಚನೆ ಮೇರೆಗೆ ಅರಣ್ಯ ಇಲಾಖೆಯ ಸಫಾರಿ ವಾಹನದಲ್ಲಿ ಮಕ್ಕಳನ್ನು ಕರೆತರಲು ಕ್ರಮ ಹನೂರು : ಅಂತೂ ಇಂತೂ…