Do not delay legal applications: K.N. Phaneendra.
ಮೈಸೂರು: ಕಾನೂನಾತ್ಮಕವಾಗಿ ಇರುವ ಅರ್ಜಿಗಳನ್ನು ವಿಲೇವಾರಿ ಮಾಡಬೇಕೇ ಹೊರತು ವಿಳಂಬ ಮಾಡಬಾರದು. ನಿಯಮದ ಪ್ರಕಾರವಾಗಿ ನಡೆದುಕೊಳ್ಳಬೇಕಾದ ಸಂದರ್ಭದಲ್ಲೂ ಮುಂದೂಡುವುದು ಸರಿಯಲ್ಲ ಎಂದು ಉಪ ಲೋಕಾಯುಕ್ತ ಕೆ.ಎನ್.ಫಣೀಂದ್ರ ಕಿವಿಮಾತು ಹೇಳಿದರು.
ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ದೂರುಗಳ ವಿಚಾರಣೆ ಹಾಗೂ ಪ್ರಕರಣಗಳ ವಿಲೇವಾರಿ ವಿಚಾರವಾಗಿ ಜಿಲ್ಲಾಮಟ್ಟದ ಅಧಿಕಾರಿಗಳೊಂದಿಗೆ ಹಾಗೂ ದೂರುದಾರರು ಮತ್ತು ಎದುರುದಾರರಿಗೆ ವಿಚಾರಣೆಯ ಸಭೆಯಲ್ಲಿ ಅವರು ಮಾತನಾಡಿದರು.
ಮೂರು ದಿನಗಳವರೆಗೆ ನಡೆದ ದೂರುಗಳ ವಿಚಾರಣೆಯು ಯಶಸ್ವಿಯಾಗಿದೆ. ಸಾರ್ವಜನಿಕ, ಸಾಮಾಜಿಕ, ಮತ್ತು ವ್ಯಕ್ತಿಗತ, ವೈಯಕ್ತಿಕ ದೂರುಗಳು ಬಂದಿವೆ. ಇದರಲ್ಲಿ ಬಹುತೇಕ ದೂರುಗಳು ವೈಯಕ್ತಿಕವಾಗಿವೆ. ಇವುಗಳನ್ನು ಸಮಯ ಪ್ರಜ್ಞೆ ಮತ್ತು ಸಮಯೋಚಿತವಾಗಿ ಇತ್ಯರ್ಥಪಡಿಸಬೇಕು. ಆದರೆ. ಕಾನೂನಿನ ವಿರುದ್ಧವಾಗಿ ನಡೆದುಕೊಂಡು ಕೆಲಸ ಮಾಡಲು ಹಿಂಜರಿದರೆ ಭ್ರಷ್ಟಾಚಾರಕ್ಕೆ ಕಾರಣವಾಗಲಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಉಪ ಲೋಕಾಯುಕ್ತಕ್ಕೆ ೬೦೦ ಅರ್ಜಿಗಳು ಬಂದಿದ್ದವು. ಇದರಲ್ಲಿ ವಿಚಾರಣೆ ಮಾಡಬಹುದಾದ ಅರ್ಜಿಗಳನ್ನು ಆಯ್ಕೆ ಮಾಡಿದಾಗ ೪೦೦ ಅರ್ಜಿಗಳನ್ನು ಆಯ್ಕೆ ಮಾಡಲಾಗಿತ್ತು. ಕೆಲವು ಕಾನೂನಾತ್ಮಕ, ತಾಂತ್ರಿಕ ವರದಿ ಆಧರಿಸಿ ವಿಚಾರಣೆ ಮಾಡಬೇಕಿರುವುದರಿಂದ ಸಮಯ ಪಡೆಯಲಾಗಿದೆ. ನಮ್ಮ ಹಂತದಲ್ಲಿ ಇರುವುದನ್ನು ಪರಿಹರಿಸಲು ಮೊದಲ ಆದ್ಯತೆ ನೀಡಲಾಗಿದೆ ಎಂದರು.
ಮಹೇಂದ್ರ ಹಸಗೂಲಿ, ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ಪಟ್ಟಣದ ಜನತಾ ಕಾಲೋನಿಯ ಮನೆಯೊಂದರ ಮೇಲೆ ಪೊಲೀಸರು ದಾಳಿ ನಡೆಸಿ ವೇಶ್ಯಾವಾಟಿಕೆ…
ನವದೆಹಲಿ: ಮದರ್ ಆಫ್ ಆಲ್ ಡೀಲ್ಸ್ ಎಂದೇ ಕರೆಯಲ್ಪಡುವ ಭಾರತ-ಯುರೋಪ್ ಒಕ್ಕೂಟವು ಮುಕಕ್ತ ವ್ಯಾಪಾರ ಒಪ್ಪಂದಕ್ಕೆ ಇಂದು ಅಧಿಕೃತವಾಗಿ ಸಹಿ…
ಬೆಂಗಳೂರು: ಶಿಡ್ಲಘಟ್ಟದಲ್ಲಿ ಪೌರಾಯುಕ್ತಗೆ ಧಮ್ಕಿ ಹಾಕಿದ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡ ರಾಜೀವ್ಗೌಡನನ್ನು ಸರ್ಕಾರ ರಕ್ಷಣೆ ಮಾಡಲ್ಲ. ಕಾನೂನು ಪ್ರಕಾರ ಶಿಕ್ಷೆ…
ಪಿರಿಯಾಪಟ್ಟಣ: ಬೈಕ್ಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗೋಣಿಕೊಪ್ಪ-ಪಿರಿಯಾಪಟ್ಟಣ ರಸ್ತೆಯಲ್ಲಿ ನಡೆದಿದೆ. ತಾಲ್ಲೂಕಿನ…
ಮೈಸೂರು: ಮೈಸೂರಿನ ಸಮತಾ ಅಧ್ಯಯನ ಕೇಂದ್ರ(ರಿ)ವು ಸಂಸ್ಥಾಪಕ ಅಧ್ಯಕ್ಷೆ, ಖ್ಯಾತ ಸ್ತ್ರೀವಾದಿ ವಿಮರ್ಶಕಿ ಹಾಗೂ ಲೇಖಕಿ ಡಾ.ವಿಜಯಾ ದಬ್ಬೆ ಅವರ ಹೆಸರಿನಲ್ಲಿ 2022…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬೊಮ್ಮಲಾಪುರ ಗ್ರಾಮದ ದೊರೆ ಎಂಬುವವರ ವಾಸದ ಮನೆಗೆ ನುಗ್ಗಿದ ಕಡವೆಯನ್ನು…