Do not delay legal applications: K.N. Phaneendra.
ಮೈಸೂರು: ಕಾನೂನಾತ್ಮಕವಾಗಿ ಇರುವ ಅರ್ಜಿಗಳನ್ನು ವಿಲೇವಾರಿ ಮಾಡಬೇಕೇ ಹೊರತು ವಿಳಂಬ ಮಾಡಬಾರದು. ನಿಯಮದ ಪ್ರಕಾರವಾಗಿ ನಡೆದುಕೊಳ್ಳಬೇಕಾದ ಸಂದರ್ಭದಲ್ಲೂ ಮುಂದೂಡುವುದು ಸರಿಯಲ್ಲ ಎಂದು ಉಪ ಲೋಕಾಯುಕ್ತ ಕೆ.ಎನ್.ಫಣೀಂದ್ರ ಕಿವಿಮಾತು ಹೇಳಿದರು.
ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ದೂರುಗಳ ವಿಚಾರಣೆ ಹಾಗೂ ಪ್ರಕರಣಗಳ ವಿಲೇವಾರಿ ವಿಚಾರವಾಗಿ ಜಿಲ್ಲಾಮಟ್ಟದ ಅಧಿಕಾರಿಗಳೊಂದಿಗೆ ಹಾಗೂ ದೂರುದಾರರು ಮತ್ತು ಎದುರುದಾರರಿಗೆ ವಿಚಾರಣೆಯ ಸಭೆಯಲ್ಲಿ ಅವರು ಮಾತನಾಡಿದರು.
ಮೂರು ದಿನಗಳವರೆಗೆ ನಡೆದ ದೂರುಗಳ ವಿಚಾರಣೆಯು ಯಶಸ್ವಿಯಾಗಿದೆ. ಸಾರ್ವಜನಿಕ, ಸಾಮಾಜಿಕ, ಮತ್ತು ವ್ಯಕ್ತಿಗತ, ವೈಯಕ್ತಿಕ ದೂರುಗಳು ಬಂದಿವೆ. ಇದರಲ್ಲಿ ಬಹುತೇಕ ದೂರುಗಳು ವೈಯಕ್ತಿಕವಾಗಿವೆ. ಇವುಗಳನ್ನು ಸಮಯ ಪ್ರಜ್ಞೆ ಮತ್ತು ಸಮಯೋಚಿತವಾಗಿ ಇತ್ಯರ್ಥಪಡಿಸಬೇಕು. ಆದರೆ. ಕಾನೂನಿನ ವಿರುದ್ಧವಾಗಿ ನಡೆದುಕೊಂಡು ಕೆಲಸ ಮಾಡಲು ಹಿಂಜರಿದರೆ ಭ್ರಷ್ಟಾಚಾರಕ್ಕೆ ಕಾರಣವಾಗಲಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಉಪ ಲೋಕಾಯುಕ್ತಕ್ಕೆ ೬೦೦ ಅರ್ಜಿಗಳು ಬಂದಿದ್ದವು. ಇದರಲ್ಲಿ ವಿಚಾರಣೆ ಮಾಡಬಹುದಾದ ಅರ್ಜಿಗಳನ್ನು ಆಯ್ಕೆ ಮಾಡಿದಾಗ ೪೦೦ ಅರ್ಜಿಗಳನ್ನು ಆಯ್ಕೆ ಮಾಡಲಾಗಿತ್ತು. ಕೆಲವು ಕಾನೂನಾತ್ಮಕ, ತಾಂತ್ರಿಕ ವರದಿ ಆಧರಿಸಿ ವಿಚಾರಣೆ ಮಾಡಬೇಕಿರುವುದರಿಂದ ಸಮಯ ಪಡೆಯಲಾಗಿದೆ. ನಮ್ಮ ಹಂತದಲ್ಲಿ ಇರುವುದನ್ನು ಪರಿಹರಿಸಲು ಮೊದಲ ಆದ್ಯತೆ ನೀಡಲಾಗಿದೆ ಎಂದರು.
ಧಾರ್ಮಿಕ ಶ್ರದ್ಧಾ ಕೇಂದ್ರಗಳ ಬಗೆಗೆ ಭಕ್ತರು ಭಕ್ತಿಯಿಂದ ನಡೆದುಕೊಳ್ಳುವುದು ಮಾತ್ರವಲ್ಲ, ತಮ್ಮ ಇಚ್ಛೆಯ ಈಡೇರಿಕೆಗಾಗಿ ಹರಕೆ ಹೊತ್ತವರು , ದಾನ…
ಕೇರಳಂ ಎಂಬ ಈ ಸ್ತ್ರೀ ರಾಜ್ಯದ ಮಹಿಳೆಯರು ಉಚಿತ ಪ್ರಯಾಣದ ಸಂಪೂರ್ಣ ಸುಖವನ್ನು ಪಡೆಯುತ್ತಿದ್ದಾರೆ. ಈ ಸುಖ ಕ್ಷಣಿಕವೋ, ಶಾಶ್ವತವೋ…
ಕೃಪಾ ದೇವರಾಜ್, ಮಡಿಕೇರಿ ಧೋ... ಎಂದು ಸುರಿಯುವ ಮಳೆ, ಅಜ್ಜ ಕಟ್ಟಿದ ಹಳೇ ನಾಡ ಹೆಂಚಿನ ಮನೆ, ನಿರಂತರವಾಗಿ ಸುರಿಯುವ…
ಜುಲೈ ನಾಲ್ಕು ಮತ್ತು ಐದರ ಶನಿವಾರ ಮತ್ತು ಭಾನುವಾರ ಮೈಸೂರಿನ ಸದರ್ನ್ ಸ್ಟಾರ್ನಲ್ಲಿ ವಾರ್ಷಿಕ ಸಾಹಿತ್ಯ ರಸದೂಟ ಪೃಥ್ವಿ ಸುಧೀಂದ್ರ…
ಮೈಸೂರು : ನಗರದ ದಟ್ಟಗಳ್ಳಿಯಲ್ಲಿರುವ ಮಾರಾ ಬಾರ್ ಅಂಡ್ ರೆಸ್ಟೋರೆಂಟ್ (ಫಾಕ್ಸ್ಡೆನ್ಬಾರ್) ನಲ್ಲಿ ಸಂಭವಿಸಿದ ಅಗ್ನಿದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ…
ನನ್ನ ಆದರ್ಶ ವ್ಯಕ್ತಿ ಗಾಂಧಿ ಮಹಾತ್ಮ ಗಾಂಧೀಜಿ ತಮ್ಮ ಜೀವನದಲ್ಲಿ ಬಹಳ ಕಷ್ಟಪಟ್ಟು ಮೇಲೆ ಬಂದರು. ಭಾರತದ ಸ್ವಾತಂತ್ರ್ಯ ಕ್ಕಾಗಿ…