Do not delay legal applications: K.N. Phaneendra.
ಮೈಸೂರು: ಕಾನೂನಾತ್ಮಕವಾಗಿ ಇರುವ ಅರ್ಜಿಗಳನ್ನು ವಿಲೇವಾರಿ ಮಾಡಬೇಕೇ ಹೊರತು ವಿಳಂಬ ಮಾಡಬಾರದು. ನಿಯಮದ ಪ್ರಕಾರವಾಗಿ ನಡೆದುಕೊಳ್ಳಬೇಕಾದ ಸಂದರ್ಭದಲ್ಲೂ ಮುಂದೂಡುವುದು ಸರಿಯಲ್ಲ ಎಂದು ಉಪ ಲೋಕಾಯುಕ್ತ ಕೆ.ಎನ್.ಫಣೀಂದ್ರ ಕಿವಿಮಾತು ಹೇಳಿದರು.
ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ದೂರುಗಳ ವಿಚಾರಣೆ ಹಾಗೂ ಪ್ರಕರಣಗಳ ವಿಲೇವಾರಿ ವಿಚಾರವಾಗಿ ಜಿಲ್ಲಾಮಟ್ಟದ ಅಧಿಕಾರಿಗಳೊಂದಿಗೆ ಹಾಗೂ ದೂರುದಾರರು ಮತ್ತು ಎದುರುದಾರರಿಗೆ ವಿಚಾರಣೆಯ ಸಭೆಯಲ್ಲಿ ಅವರು ಮಾತನಾಡಿದರು.
ಮೂರು ದಿನಗಳವರೆಗೆ ನಡೆದ ದೂರುಗಳ ವಿಚಾರಣೆಯು ಯಶಸ್ವಿಯಾಗಿದೆ. ಸಾರ್ವಜನಿಕ, ಸಾಮಾಜಿಕ, ಮತ್ತು ವ್ಯಕ್ತಿಗತ, ವೈಯಕ್ತಿಕ ದೂರುಗಳು ಬಂದಿವೆ. ಇದರಲ್ಲಿ ಬಹುತೇಕ ದೂರುಗಳು ವೈಯಕ್ತಿಕವಾಗಿವೆ. ಇವುಗಳನ್ನು ಸಮಯ ಪ್ರಜ್ಞೆ ಮತ್ತು ಸಮಯೋಚಿತವಾಗಿ ಇತ್ಯರ್ಥಪಡಿಸಬೇಕು. ಆದರೆ. ಕಾನೂನಿನ ವಿರುದ್ಧವಾಗಿ ನಡೆದುಕೊಂಡು ಕೆಲಸ ಮಾಡಲು ಹಿಂಜರಿದರೆ ಭ್ರಷ್ಟಾಚಾರಕ್ಕೆ ಕಾರಣವಾಗಲಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಉಪ ಲೋಕಾಯುಕ್ತಕ್ಕೆ ೬೦೦ ಅರ್ಜಿಗಳು ಬಂದಿದ್ದವು. ಇದರಲ್ಲಿ ವಿಚಾರಣೆ ಮಾಡಬಹುದಾದ ಅರ್ಜಿಗಳನ್ನು ಆಯ್ಕೆ ಮಾಡಿದಾಗ ೪೦೦ ಅರ್ಜಿಗಳನ್ನು ಆಯ್ಕೆ ಮಾಡಲಾಗಿತ್ತು. ಕೆಲವು ಕಾನೂನಾತ್ಮಕ, ತಾಂತ್ರಿಕ ವರದಿ ಆಧರಿಸಿ ವಿಚಾರಣೆ ಮಾಡಬೇಕಿರುವುದರಿಂದ ಸಮಯ ಪಡೆಯಲಾಗಿದೆ. ನಮ್ಮ ಹಂತದಲ್ಲಿ ಇರುವುದನ್ನು ಪರಿಹರಿಸಲು ಮೊದಲ ಆದ್ಯತೆ ನೀಡಲಾಗಿದೆ ಎಂದರು.
ಚೆನ್ನೈ : ದಳಪತಿ ವಿಜಯ್ ತಮಿಳುನಾಡಿನ ನೂತನ ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸಮಾರಂಭದಲ್ಲಿ ಅನೇಕ ಗಣ್ಯರು ಸೇರಿದ್ದರು.…
ಮಡಿಕೇರಿ : ಸ್ನಾನಕ್ಕೆ ತೆರಳಿದ್ದ ಯುವಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಇಲ್ಲಿಗೆ ಸಮೀಪದ ಬಲಮುರಿ ಗ್ರಾಮದಲ್ಲಿ ಭಾನುವಾರ ನಡೆದಿದೆ.…
ಹನೂರು : ತಮಿಳುನಾಡಿನ ಮುಖ್ಯಮಂತ್ರಿಯಾಗಿ ಟಿವಿಕೆ ಪಕ್ಷದ ಮುಖ್ಯಸ್ಥ ಹಾಗೂ ನಟ ಸಿ.ಜೋಸೆಫ್ ವಿಜಯ್ ಅಧಿಕಾರ ಸ್ವೀಕರಿಸಿದ ಹಿನ್ನೆಲೆ ಪಟ್ಟಣದಲ್ಲಿ…
ಬೆಂಗಳೂರು : ಪ್ರಧಾನಿ ನರೇಂದ್ರಮೋದಿ ಅವರು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ನಗರಕ್ಕೆ ಬಂದಿದ್ದ ವೇಳೆ ಜಿಲಿಟಿನ್ ಕಡ್ಡಿಗಳು ಪತ್ತೆಯಾಗಿ ಕೆಲಕಾಲ…
ಚೆನ್ನೈ : ಟಿವಿಕೆ ಮುಖ್ಯಸ್ಥ ಮತ್ತು ತಮಿಳುನಾಡು ಮುಖ್ಯಮಂತ್ರಿ ಸಿ.ಜೋಸೆಫ್ ವಿಜಯ್ ಭಾನುವಾರ ತಿರುಚಿರಾಪಳ್ಳಿ ಪೂರ್ವ ವಿಧಾನಸಭಾ ಕ್ಷೇತ್ರಕ್ಕೆ ರಾಜೀನಾಮೆ…
ಹುಣಸೂರು : ಬಿರುಗಾಳಿ ಮಳೆಗೆ ತಾಲ್ಲೂಕಿನ ಹನಗೋಡು ಹೋಬಳಿಯ ವದ್ಲಿ ಮನುಗನಹಳ್ಳಿಯಲ್ಲಿ ಮನೆಯ ಚಾವಣಿಗೆ ಹಾಕಿದ್ದ ಕಲ್ನಾರ್ ಶೀಟ್ ಹಾರಿಹೋಗಿದ್ದು,…