ಮೈಸೂರು

ಕರ್ನಾಟಕದ ಜನತೆ ಬಿಜೆಪಿ ನಾಯಕರ ಆಶ್ವಾಸನೆಯನ್ನು ನಂಬಬಾರದು: ಪುಷ್ಪ ಅಮರನಾಥ್‌

ಮೈಸೂರು: ಕಾಂಗ್ರೆಸ್‌ನಿಂದ ಲೋಕಸಭಾ ಚುನಾವಣೆಯ ಪ್ರಣಾಳಿಕೆಯಲ್ಲಿ ಪ್ರಕಟಿಸಿರುವ “ನಾರಿ ನ್ಯಾಯ” ಐದು ಗ್ಯಾರಂಟಿಗಳನ್ನು ಮೈಸೂರಿನ ಕಾಂಗ್ರೆಸ್ ಕಚೇರಿಯಲ್ಲಿ ಬಿಡುಗಡೆಗೊಳಿಸಲಾಯಿತು.

ನಗರದ ಕಾಂಗ್ರೆಸ್ ಭವನದಲ್ಲಿ ಶನಿವಾರ ಕರ್ನಾಟಕ ಪ್ರದೇಶ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಡಾ.ಪುಷ್ಪ ಅಮರನಾಥ್ ಅವರು ನಾರಿ ನ್ಯಾಯ್‌ ಗ್ಯಾರೆಂಟಿ ಯೋಜನೆಯನ್ನು ಬಿಡುಗಡೆ ಮಾಡಿದರು.

ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಮತ್ತು ನಾಯಕ ರಾಹುಲ್ ಗಾಂಧಿ ಅವರು ಘೋಷಿಸಿರುವ ಗ್ಯಾರಂಟಿಗಳು ದೇಶದ ಅರ್ಧದಷ್ಟು ಮಹಿಳೆಯರಿಗೆ ನ್ಯಾಯ ದೊರಕಿಸಲಿವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಮಹಾಲಕ್ಷ್ಮೀ ಗ್ಯಾರಂಟಿಯಡಿ ಬಡ ಕುಟುಂಬಕ್ಕೆ ವಾರ್ಷಿಕ 1 ಲಕ್ಷ ಕೊಡುವುದಾಗಿ ಘೋಷಣೆ ಮಾಡಿದ್ದೇವೆ. ಅಧಿಕಾರ್ ಮೈತ್ರಿ ಮೂಲಕ ದೌರ್ಜನ್ಯಕ್ಕೆ ತುತ್ತಾದ ಹೆಣ್ಣು ಮಕ್ಕಳಿಗೆ ಕಾನೂನಿನ ನೆರವು ದೊರೆಯಲಿದೆ. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ವಕೀಲರನ್ನು ನೇಮಕ ಮಾಡಲಾಗುತ್ತಿದೆ. ಸರ್ಕಾರಿ ಹುದ್ದೆಗಳಲ್ಲಿ ಮಹಿಳೆಯರಿಗೆ ಶೇ. 50 ಮೀಸಲಾತಿ, ಆಶಾ ಕಾರ್ಯಕರ್ತೆಯರ ಸಂಬಳ ದ್ವಿಗುಣ, ಉದ್ಯೋಗ ನಿರತ ಮಹಿಳೆಯರಿಗಾಗಿ ಅಕ್ಷರದ್ವ ಸಾವಿತ್ರಿಬಾಯಿ ಫುಲೆ ಹೆಸರಿನಲ್ಲಿ ಹಾಸ್ಟೆಲ್ ನಿರ್ಮಾಣ ಮಾಡುತ್ತೇವೆ ಎಂದು ಹೇಳಿದರು.

ಕರ್ನಾಟಕದ ಗ್ಯಾರಂಟಿಗಳನ್ನು ಟೀಕೆ ಮಾಡುತ್ತಿದ್ದ ಬಿಜೆಪಿಯವರು ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಯನ್ನು ಕಾಪಿ ಮಾಡಿದ್ದಾರೆ. 10 ವರ್ಷಗಳಿಂದ ಅಧಿಕಾರದಲ್ಲಿದ್ದು ಕೊಟ್ಟ ಭರವಸೆ ಈಡೇರಿಸಲಾಗದೇ ಈಗ ಮತ್ತೊಮ್ಮೆ ಗ್ಯಾರೆಂಟಿಗಳ ಮೂಲಕ ಅವಕಾಶ ಕೇಳುತ್ತಿದ್ದಾರೆ ಎಂದು ಟೀಕಿಸಿದರು.

10 ವರ್ಷಗಳ ಆಡಳಿತದಲ್ಲಿ ಒಮ್ಮೆಯೂ ಪ್ರಧಾನಿ ಮೋದಿ ಪತ್ರಿಕಾಗೋಷ್ಠಿ ನಡೆಸಲಿಲ್ಲ. ಪ್ರಶ್ನೆಗಳನ್ನು ಎದುರಿಸಲಾಗದೇ ಮನ್ ಕಿ ಬಾತ್ ನಲ್ಲಿ ಮಾತಾಡುತ್ತಿದ್ದಾರೆ. ಚುನಾವಣಾ ಬಾಂಡ್ ಹಗರಣ ಬೆಳಕಿಗೆ ಬಂದಿದೆ. ಇದಕ್ಕೆಲ್ಲಾ ಯಾರು ಉತ್ತರಿಸಬೇಕು? ಎಂದು ಪ್ರಶ್ನಿಸಿದರು.

ಕೇಂದ್ರ ಸರ್ಕಾರದಿಂದ ಕರ್ನಾಟಕಕ್ಕೆ ನಿರಂತರವಾಗಿ ಅನ್ಯಾಯವಾಗುತ್ತಿದೆ. ಮಲತಾಯಿ ಧೋರಣೆ ಅನುಸರಿಸಲಾಗುತ್ತಿದೆ. ನ್ಯಾಯಯುತ ತೆರಿಗೆ ಹಣ ಕೊಡದೇ ಮಹಾಮೋಸ ಮಾಡಲಾಗುತ್ತಿದೆ. ಕರ್ನಾಟಕದ ಹಣವನ್ನು ಬೇರೆ ರಾಜ್ಯಗಳಿಗೆ ಹಂಚುತ್ತಿದ್ದಾರೆ. ಹಾಗಾಗಿ ಕರ್ನಾಟಕದ ಜನತೆ ಬಿಜೆಪಿ ನಾಯಕರ ಆಶ್ವಾಸನೆಯನ್ನು ನಂಬಬಾರದು ಎಂದು ಎಚ್ಚರಿಸಿದರು.

ಮಾಜಿ ಮಹಾಪೌರರಾದ ಪುಷ್ಪಾಲತಾ ಚಿಕ್ಕಣ್ಣ, ಮೋದಾಮಣಿ, ಉಪ ಮೇಯರ್ ಪುಷ್ಪವಲ್ಲಿ, ಮುಖಂಡರಾದ ರಾಧಾಮಣಿ, ಡಾ.ಸುಜಾತಾರಾವ್, ಲತಾ ಮೋಹನ್, ಭವ್ಯ, ಚಂದ್ರಕಲಾ, ಇಂದ್ರ, ಸುಶೀಲಾ ಮರಿಗೌಡ ಕಾರ್ಯಕ್ರಮದಲ್ಲಿದ್ದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಓದುಗರ ಪತ್ರ: ಪ್ರಕೃತಿ ಪ್ರೀತಿ ಅತಿಮುಖ್ಯ

ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…

7 hours ago

ಓದುಗರ ಪತ್ರ: ಪ್ಲಾಸ್ಟಿಕ್ ನೋಟುಗಳ ಬಿಡುಗಡೆ ನಿರ್ಧಾರ ದೂರದೃಷ್ಟಿಯ ಹೆಜ್ಜೆ

ಆರ್‌ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…

7 hours ago

ಓದುಗರ ಪತ್ರ: ಸಮಾನತೆ ಮಾತನಾಡುವವರ ನಡವಳಿಕೆ ಇದೇನಾ?

ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…

7 hours ago

ಚಲನಚಿತ್ರ: ಪ್ರಮಾಣೀಕರಣ ಮಂಡಳಿಯದೇ ಅಂತಿಮ ತೀರ್ಪು

ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…

7 hours ago

ಕೊಡಗು ಜಿಲ್ಲೆಯಲ್ಲಿ ಶೇ.37ರಷ್ಟು ಮಳೆ ಕೊರತೆ

ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…

7 hours ago

ಕಬಿನಿ ಜಲಾಶಯದಿಂದ ಹರಿಸುತ್ತಿದ್ದ ನೀರು ಸ್ಥಗಿತ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್‌ಗೇಟ್‌ಗಳನ್ನು ಬಂದ್…

7 hours ago