ಮೈಸೂರು

ಕೆಆರ್‌ಎಸ್‌ ಹಾಗೂ ಕಬಿನಿ ಜಲಾಶಯಗಳ ಇಂದಿನ ನೀರಿನ ಮಟ್ಟ ಎಷ್ಟಿಗೆ ಗೊತ್ತಾ?

ಮೈಸೂರು: ರಾಜ್ಯದಲ್ಲಿ ವರುಣನ ಆರ್ಭಟ ಕೊಂಚ ಕಡಿಮೆಯಾದ ಪರಿಣಾಮ ಕೆಆರ್‌ಎಸ್‌ ಹಾಗೂ ಕಬಿನಿ ಜಲಾಶಯಗಳ ಒಳಹರಿವಿನ ಪ್ರಮಾಣದಲ್ಲಿ ಇಳಿಕೆಯಾಗಿದೆ.

ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯದ ಇಂದಿನ ನೀರಿನ ಮಟ್ಟ 124.30 ಅಡಿಗಳಾಗಿದ್ದು, ಜಲಾಶಯದ ಗರಿಷ್ಠ ನೀರಿನ ಮಟ್ಟ 124.80 ಅಡಿಗಳಾಗಿದೆ. ಜಲಾಶಯಕ್ಕೆ 13,173 ಕ್ಯೂಸೆಕ್ಸ್‌ ಒಳಹರಿವಿದ್ದು, ಜಲಾಶಯದಿಂದ 9733 ಕ್ಯೂಸೆಕ್ಸ್‌ ನೀರನ್ನು ಹೊರಗೆ ಬಿಡಲಾಗುತ್ತಿದೆ.

ಇದನ್ನು ಓದಿ: ಕೆಆರ್‌ಎಸ್‌ ಅಣೆಕಟ್ಟೆ ನಿರ್ಮಾತೃ ವಿವಾದ : ಸಚಿವ ಎಚ್‌ಸಿಎಂ ಹೇಳಿಕೆ ತಿರುಚುವು ಹುನ್ನಾರ ನಡೆದಿದೆ ; ಪುರುಷೊತ್ತಮ್‌ ಆರೋಪ

ಇನ್ನು ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿ ಬಳಿಯಿರುವ ಕಬಿನಿ ಜಲಾಶಯವು ಕೂಡ ಕಳೆದ ಎರಡು ತಿಂಗಳಿನಿಂದ ತುಂಬಿ ತುಳುಕುತ್ತಿದೆ. 84 ಅಡಿ ಸಾಮರ್ಥ್ಯ ಜಲಾಶಯದಲ್ಲಿ ಇಂದು 83.50 ಅಡಿಗಳಷ್ಟು ನೀರು ಸಂಗ್ರಹವಾಗಿದೆ. ಜಲಾಶಯಕ್ಕೆ 4820 ಕ್ಯೂಸೆಕ್ಸ್‌ ನೀರು ಹರಿದು ಬರುತ್ತಿದ್ದು, ಜಲಾಶಯದಿಂದ 5 ಸಾವಿರ ಕ್ಯೂಸೆಕ್ಸ್‌ ನೀರನ್ನು ಹೊರ ಬಿಡಲಾಗುತ್ತಿದೆ.

ಇನ್ನು ಹವಾಮಾನ ಇಲಾಖೆ ಮಾಹಿತಿ ಪ್ರಕಾರ ಸೆಪ್ಟೆಂಬರ್‌ ಅಂತ್ಯದವರೆಗೂ ಮಳೆ ಮುಂದುವರಿಯುವ ಸಾಧ್ಯತೆ ಇರುವುದರಿಂದ ಜಲಾಶಯಕ್ಕೆ ಮತ್ತಷ್ಟು ನೀರು ಹರಿದು ಬರುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಒಳಹರಿವಿನ ಪ್ರಮಾಣ ನೋಡಿಕೊಂಡು ಜಲಾಶಯಗಳಿಂದ ಹೊರಹರಿವಿನ ಪ್ರಮಾಣವನ್ನು ಸಹ ಏರಿಕೆ ಮಾಡಲಾಗುತ್ತದೆ.

ಆಂದೋಲನ ಡೆಸ್ಕ್

Recent Posts

ಅಡುಗೆ ಅನಿಲ ಸೋರಿಕೆಯಾಗಿ ಅಗ್ನಿ ಅವಘಡ: ದಂಪತಿಗೆ ಗಂಭೀರ ಗಾಯ

ಚಾಮರಾಜನಗರ: ಅಡುಗೆ ಅನಿಲ ಸೋರಿಕೆಯಾಗಿ ಅಗ್ನಿ ಅವಘಡ ಸಂಭವಿಸಿದ ಪರಿಣಾಮ ದಂಪತಿಗೆ ಗಂಭೀರ ಗಾಯಗಳಾಗಿರುವ ಘಟನೆ ಚಾಮರಾಜನಗರದ ರೈಲ್ವೆ ಬಡಾವಣೆಯಲ್ಲಿ…

17 mins ago

ಕನ್ನಡ ಶಾಲೆಗಳ ಉಳಿವಿಗೆ ಆಗ್ರಹಿಸಿ ವಾಟಾಳ್‌ ನಾಗರಾಜ್‌ ಪ್ರತಿಭಟನೆ

ಮಂಡ್ಯ: ರಾಜ್ಯದಲ್ಲಿರುವ ಕನ್ನಡ ಶಾಲೆಗಳನ್ನು ಉಳಿಸುವಂತೆ ಆಗ್ರಹಿಸಿ ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಪ್ರತಿಭಟನೆ ನಡೆಸಿದರು. ಮಂಡ್ಯ ಜಿಲ್ಲಾಧಿಕಾರಿ ಕಚೇರಿ…

26 mins ago

ನಾಳೆ ಕೇರಳ, ತಮಿಳುನಾಡಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ

ಕೇರಳ: ಕೇರಳ ಮತ್ತು ತಮಿಳುನಾಡು ಚುನಾವಣೆಗೆ ದಿನಾಂಕ ಘೋಷಣೆಯಾಗಲು ಕೆಲವೇ ದಿನಗಳು ಬಾಕಿ ಇದೆ. ಈ ಹಿನ್ನೆಲೆಯಲ್ಲಿ ಮಾರ್ಚ್.‌11ರಂದು ಪ್ರಧಾನಿ…

27 mins ago

ಬಂಡೀಪುರ: ಸಫಾರಿಗೆ ತೆರಳಿದ್ದ ಪ್ರವಾಸಿಗರಿಗೆ ಹುಲಿಗಳ ದರ್ಶನ

ಗುಂಡ್ಲುಪೇಟೆ: ಸೋಮವಾರ ಬೆಳಗ್ಗೆ ಬಂಡೀಪುರದ ಸಫಾರಿಗೆ ಹೋಗಿದ್ದ ಪ್ರವಾಸಿಗರು ಏಕಕಾಲದಲ್ಲಿ ಸಫಾರಿಗೆ ತೆರಳಿದ್ದ ವೇಳೆ ಕಿರುಬನ ಕೊಳಚಿ ಕೆರೆಯಲ್ಲಿ ಒಂದು…

1 hour ago

ಹನೂರು: ಬೆಟ್ಟಳ್ಳಿ ಮಾರಮ್ಮ ದೇವಸ್ಥಾನಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮುತ್ತುರಾಜು ಭೇಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಪಟ್ಟಣದಲ್ಲಿ ನಡೆಯುತ್ತಿರುವ ಶ್ರೀ ಬೆಟ್ಟಳ್ಳಿ ಮಾರಮ್ಮ ಜಾತ್ರಾ ಮಹೋತ್ಸವದ ಪ್ರಯುಕ್ತ…

1 hour ago

ಶ್ರೀ ಬೆಟ್ಟಳ್ಳಿ ಮಾರಮ್ಮ ಜಾತ್ರಾ ಮಹೋತ್ಸವ: ವಿಜೃಂಭಣೆಯಿಂದ ನಡೆದ ತಂಪುಜ್ಯೋತಿ ಹಾಗೂ ರಥೋತ್ಸವ

ಮಹಾದೇಶ್ ಎಂ.ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದ ಗ್ರಾಮದೇವತೆ ಶ್ರೀ ಬೆಟ್ಟಳ್ಳಿ ಮಾರಮ್ಮ ಜಾತ್ರಾ ಮಹೋತ್ಸವದ ಎರಡನೇ ದಿನ…

2 hours ago