ಮೈಸೂರು: ಮುಂಗಾರು ಮಳೆ ಆರ್ಭಟದಿಂದ ಈಗಾಗಲೇ ಹಳೇ ಮೈಸೂರು ಭಾಗದ ಜಲಾಶಯಗಳು ಸಂಪೂರ್ಣ ಭರ್ತಿಯಾಗಿದ್ದು, ರೈತರ ಮೊಗದಲ್ಲಿ ಸಂತಸ ಮನೆಮಾಡಿದೆ.
ಹೀಗಿರುವಾಗಲೇ ಹಿಂಗಾರು ಮಳೆಯೂ ಕೂಡ ರಾಜ್ಯದಲ್ಲಿ ಚುರುಕು ಪಡೆದುಕೊಂಡಿದ್ದು, ಮತ್ತೆ ಜಲಾಶಯಗಳು ಭರ್ತಿಯಾಗಿವೆ.
ಕೆಆರ್ಎಸ್ ಜಲಾಶಯದ ಇಂದಿನ ನೀರಿನ ಮಟ್ಟ: ಹಳೆ ಮೈಸೂರು ಭಾಗದ ಜೀವನಾಡಿಯಾಗಿರುವ ಕೆಆರ್ಎಸ್ ಜಲಾಶಯ ಕಳೆದ ನಾಲ್ಕೈದು ತಿಂಗಳುಗಳಿಂದ ತುಂಬಿ ತುಳುಕುತ್ತಿದೆ. 124.80 ಅಡಿಗಳಸ ಸಂಗ್ರಹ ಸಾಮರ್ಥ್ಯದ ಜಲಾಶಯದಲ್ಲಿ ಇಂದು 124.80 ಅಡಿಗಳಷ್ಟು ನೀರು ಸಂಗ್ರಹವಾಗಿದೆ. ಜಲಾಶಯಕ್ಕೆ 6392 ಕ್ಯೂಸೆಕ್ಸ್ ನೀರು ಹರಿದು ಬರುತ್ತಿದ್ದು, ಜಲಾಶಯದಿಂದ 6135 ಕ್ಯೂಸೆಕ್ಸ್ ನೀರನ್ನು ಹೊರಗೆ ಬಿಡಲಾಗುತ್ತಿದೆ.
ಇದನ್ನು ಓದಿ: ಕಾವೇರಿ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆ: ಕೆಆರ್ಎಸ್ ಹೊರಹರಿವು ಭಾರೀ ಹೆಚ್ಚಳ
ಕಬಿನಿ ಜಲಾಶಯದ ನೀರಿನ ಮಟ್ಟ: ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿ ಗ್ರಾಮದಲ್ಲಿರುವ ಕಬಿನಿ ಜಲಾಶಯವು ಇಲ್ಲಿಯವರೆಗೂ ಭರ್ತಿಯಾಗಿಯೇ ಉಳಿದಿದೆ. ಆದರೆ ಜಲಾಶಯಕ್ಕೆ ನೀರಿನ ಒಳಹರಿವು ಕೊಂಚ ಕಡಿಮೆಯಾಗಿದೆ. 84 ಅಡಿಗಳ ಸಾಮರ್ಥ್ಯದ ಜಲಾಶಯದಲ್ಲಿ ಇಂದು 83.82 ಅಡಿಗಳಷ್ಟು ನೀರು ಸಂಗ್ರಹವಾಗಿದೆ. ಜಲಾಶಯದಿಂದ 1 ಸಾವಿರ ಕ್ಯೂಸೆಕ್ಸ್ ನೀರನ್ನು ಹೊರಗೆ ಬಿಡಲಾಗುತ್ತಿದ್ದು, ಸದ್ಯ ಜಲಾಶಯಕ್ಕೆ 1278 ಕ್ಯೂಸೆಕ್ಸ್ ನೀರು ಹರಿದು ಬರುತ್ತಿದೆ.
ಇನ್ನು ಮೊಂತಾ ಚಂಡಮಾರುತದ ಪರಿಣಾಮ ಹವಾಮಾನ ಇಲಾಖೆ ರಾಜ್ಯದಲ್ಲೂ ಭಾರೀ ಮಳೆಯಾಗುವ ಎಚ್ಚರಿಕೆ ನೀಡಿರುವ ಹಿನ್ನೆಲೆಯಲ್ಲಿ ಮಳೆ ಹೆಚ್ಚಾದರೆ ಜಲಾಶಯಗಳ ಒಳಹರಿವಿನ ಪ್ರಮಾಣ ಹೆಚ್ಚಾಗುವ ಸಾಧ್ಯತೆಯಿದೆ.
ಈ ಹಿನ್ನೆಲೆಯಲ್ಲಿ ಈಗಾಗಲೇ ಭರ್ತಿಯಾಗಿರುವ ಜಲಾಶಯಗಳಿಂದ ಒಳಹರಿವನ್ನು ನೋಡಿಕೊಂಡು ಹೊರಹರಿವನ್ನು ಹೆಚ್ಚಳ ಮಾಡಲಾಗುತ್ತದೆ.
ಪೇಶಾವರ : ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಸೇನಾ ಸಿಬ್ಬಂದಿ ಪ್ರಯಾಣಿಸುತ್ತಿದ್ದ ರೈಲನ್ನು ಗುರಿಯಾಗಿಸಿಕೊಂಡು ನಡೆಸಿದ ಸ್ಪೋಟದಲ್ಲಿ 24 ಮಂದಿ ಸಾವು ಸೇರಿದಂತೆ…
ದೇಶದ ಜನಸಂಖ್ಯೆಯಲ್ಲಾಗುತ್ತಿರುವ ಏರುಪೇರು ರಾಷ್ಟ್ರೀಯ ಜನಸಂಖ್ಯೆ ನಿರ್ವಹಣೆಯ ನೀತಿಯ ದಿಕ್ಕನ್ನೇ ಬದಲಿಸುತ್ತಿದೆ. ಉತ್ತರ ಭಾರತದ ಜನಸಂಖ್ಯೆ ಪ್ರಮಾಣ ಲಂಗು ಲಗಾಮಿಲ್ಲದೆ…
ರಾಜಾರಾಂ ತಲ್ಲೂರು ಬೆಳಿಗ್ಗೆ ಎದ್ದ ತಕ್ಷಣ ಹಲ್ಲು ತಿಕ್ಕಿ ಮುಖ ತೊಳೆಯಬೇಕು ಎಂದು ದೇಶದ ಸಂವಿಧಾನದಲ್ಲಿ ಬರೆದಿದೆಯೇನ್ರಿ? . .…
ಮೋಹಿತ್ ಎಸ್ ಗೌಡ ನಾನು ಪ್ರಾಥಮಿಕ ಶಾಲೆಯಲ್ಲಿ ಓದುವಾಗ ಪರೀಕ್ಷೆಯ ಪ್ರಶ್ನೆಪತ್ರಿಕೆಗಳಲ್ಲಿ ‘ಲಿಂಗ ಬದಲಿಸಿ ಬರೆಯಿರಿ’ ಅಥವಾ ‘ವಿರುದ್ಧ ಪದ…
ರೇಣುಕಾ ನಿಡಗುಂದಿ ಕಾಲೇಜಿನ ದಿನಗಳಲ್ಲಿ ಅವರಿಬ್ಬರೂ ಭೇಟಿಯಾದಾಗಲೇ ಆಕೆ ತಾನು ಬೈ ( Bisexual) ಎಂದು ಹೇಳಿಕೊಂಡಿದ್ದಳು. ಹೊಸತಲೆಮಾರಿನ ಹುಡುಗ…
ವಸುಧೇಂದ್ರ ಹುಡುಗನೊಬ್ಬನಿಗೆ ಮತ್ತೊಬ್ಬ ಹುಡುಗನ ಮೇಲೆ ಅದು ಹೇಗೆ ಆಕರ್ಷಣೆ ಮೂಡುತ್ತದೆ? ಅದು ಅವನ ಆಯ್ಕೆಯೆ? ಕಲಿತ ದುಶ್ಚಟವೆ? ವಿಷಮ…