ಮೈಸೂರು

ಕೆಆರ್‌ಎಸ್‌ ಹಾಗೂ ಕಬಿನಿ ಜಲಾಶಯಗಳ ಇಂದಿನ ನೀರಿನ ಮಟ್ಟ ಎಷ್ಟಿದೆ ಗೊತ್ತಾ?

ಮೈಸೂರು: ಮುಂಗಾರು ಮಳೆ ಆರ್ಭಟದಿಂದ ಈಗಾಗಲೇ ಹಳೇ ಮೈಸೂರು ಭಾಗದ ಜಲಾಶಯಗಳು ಸಂಪೂರ್ಣ ಭರ್ತಿಯಾಗಿದ್ದು, ರೈತರ ಮೊಗದಲ್ಲಿ ಸಂತಸ ಮನೆಮಾಡಿದೆ.

ಹೀಗಿರುವಾಗಲೇ ಹಿಂಗಾರು ಮಳೆಯೂ ಕೂಡ ರಾಜ್ಯದಲ್ಲಿ ಚುರುಕು ಪಡೆದುಕೊಂಡಿದ್ದು, ಮತ್ತೆ ಜಲಾಶಯಗಳು ಭರ್ತಿಯಾಗಿವೆ.

ಕೆಆರ್‌ಎಸ್‌ ಜಲಾಶಯದ ಇಂದಿನ ನೀರಿನ ಮಟ್ಟ: ಹಳೆ ಮೈಸೂರು ಭಾಗದ ಜೀವನಾಡಿಯಾಗಿರುವ ಕೆಆರ್‌ಎಸ್‌ ಜಲಾಶಯ ಕಳೆದ ನಾಲ್ಕೈದು ತಿಂಗಳುಗಳಿಂದ ತುಂಬಿ ತುಳುಕುತ್ತಿದೆ. 124.80 ಅಡಿಗಳಸ ಸಂಗ್ರಹ ಸಾಮರ್ಥ್ಯದ ಜಲಾಶಯದಲ್ಲಿ ಇಂದು 124.80 ಅಡಿಗಳಷ್ಟು ನೀರು ಸಂಗ್ರಹವಾಗಿದೆ. ಜಲಾಶಯಕ್ಕೆ 6392 ಕ್ಯೂಸೆಕ್ಸ್‌ ನೀರು ಹರಿದು ಬರುತ್ತಿದ್ದು, ಜಲಾಶಯದಿಂದ 6135 ಕ್ಯೂಸೆಕ್ಸ್‌ ನೀರನ್ನು ಹೊರಗೆ ಬಿಡಲಾಗುತ್ತಿದೆ.

ಇದನ್ನು ಓದಿ: ಕಾವೇರಿ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆ: ಕೆಆರ್‌ಎಸ್‌ ಹೊರಹರಿವು ಭಾರೀ ಹೆಚ್ಚಳ

ಕಬಿನಿ ಜಲಾಶಯದ ನೀರಿನ ಮಟ್ಟ: ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿ ಗ್ರಾಮದಲ್ಲಿರುವ ಕಬಿನಿ ಜಲಾಶಯವು ಇಲ್ಲಿಯವರೆಗೂ ಭರ್ತಿಯಾಗಿಯೇ ಉಳಿದಿದೆ. ಆದರೆ ಜಲಾಶಯಕ್ಕೆ ನೀರಿನ ಒಳಹರಿವು ಕೊಂಚ ಕಡಿಮೆಯಾಗಿದೆ. 84 ಅಡಿಗಳ ಸಾಮರ್ಥ್ಯದ ಜಲಾಶಯದಲ್ಲಿ ಇಂದು 83.82 ಅಡಿಗಳಷ್ಟು ನೀರು ಸಂಗ್ರಹವಾಗಿದೆ. ಜಲಾಶಯದಿಂದ 1 ಸಾವಿರ ಕ್ಯೂಸೆಕ್ಸ್‌ ನೀರನ್ನು ಹೊರಗೆ ಬಿಡಲಾಗುತ್ತಿದ್ದು, ಸದ್ಯ ಜಲಾಶಯಕ್ಕೆ 1278 ಕ್ಯೂಸೆಕ್ಸ್‌ ನೀರು ಹರಿದು ಬರುತ್ತಿದೆ.

ಇನ್ನು ಮೊಂತಾ ಚಂಡಮಾರುತದ ಪರಿಣಾಮ ಹವಾಮಾನ ಇಲಾಖೆ ರಾಜ್ಯದಲ್ಲೂ ಭಾರೀ ಮಳೆಯಾಗುವ ಎಚ್ಚರಿಕೆ ನೀಡಿರುವ ಹಿನ್ನೆಲೆಯಲ್ಲಿ ಮಳೆ ಹೆಚ್ಚಾದರೆ ಜಲಾಶಯಗಳ ಒಳಹರಿವಿನ ಪ್ರಮಾಣ ಹೆಚ್ಚಾಗುವ ಸಾಧ್ಯತೆಯಿದೆ.

ಈ ಹಿನ್ನೆಲೆಯಲ್ಲಿ ಈಗಾಗಲೇ ಭರ್ತಿಯಾಗಿರುವ ಜಲಾಶಯಗಳಿಂದ ಒಳಹರಿವನ್ನು ನೋಡಿಕೊಂಡು ಹೊರಹರಿವನ್ನು ಹೆಚ್ಚಳ ಮಾಡಲಾಗುತ್ತದೆ.

ಆಂದೋಲನ ಡೆಸ್ಕ್

Recent Posts

ಡಿ.ಕೆ.ಶಿವಕುಮಾರ್‌ ಪಟ್ಟಾಭಿಷೇಕಕ್ಕೆ ಮುಹೂರ್ತ ಫಿಕ್ಸ್‌: ಬುಧವಾರ ಪ್ರಮಾಣವಚನ ಸ್ವೀಕಾರ

ಬೆಂಗಳೂರು: ಡಿ.ಕೆ.ಶಿವಕುಮಾರ್‌ ಅವರ ಪದಗ್ರಹಣಕ್ಕೆ ಮುಹೂರ್ತ ಫಿಕ್ಸ್‌ ಆಗಿದೆ. ಬುಧವಾರ ರಾಜ್ಯದ ನೂತನ ಸಿಎಂ ಆಗಿ ಡಿಕೆಶಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ…

11 mins ago

ಓದುಗರ ಪತ್ರ: ಕ್ರಿಕೆಟ್ ಕ್ರೀಡಾಂಗಣಕ್ಕೆ ಡಾ.ಅಂಬೇಡ್ಕರ್ ಹೆಸರಿಡಿ

ಬೆಂಗಳೂರಿನ ಆನೇಕಲ್ ತಾಲ್ಲೂಕಿನ ಸೂರ್ಯನಗರದಲ್ಲಿ ನಿರ್ಮಾಣಗೊಳ್ಳಲಿರುವ ದೇಶದ ಎರಡನೇ ಅತಿದೊಡ್ಡ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣಕ್ಕೆ ರಾಜ್ಯ ಸರ್ಕಾರದಿಂದ ಶಂಕುಸ್ಥಾಪನೆ ನೆರವೇರಿಸಲಾಗಿದೆ.…

51 mins ago

ಓದುಗರ ಪತ್ರ: ನಾಳಿನ ನೆರಳಿಗೆ ಇಂದೇ ಗಿಡ ನೆಡೋಣ

ಈ ಬಾರಿಯ ಬೇಸಿಗೆಯ ಧಗೆ ಮಧ್ಯಾಹ್ನದ ವೇಳೆ ಯಾರೂ ಹೊರಗಡೆ ಓಡಾಡದಂತೆ ಮಾಡಿದೆ. ವಾಹನ ಸವಾರರ ಸ್ಥಿತಿಯಂತೂ ಹೇಳತೀರದು. ರಸ್ತೆ…

53 mins ago

ಓದುಗರ ಪತ್ರ: ಸಿದ್ದರಾಮಯ್ಯನವರ ಆಡಳಿತ ಮಾದರಿ

ರಾಜ್ಯದಲ್ಲಿ ಅತ್ಯಂತ ಪ್ರಬಲ ನಾಯಕರಲ್ಲಿ ಸಿದ್ದರಾಮಯ್ಯನವರೂ ಕೂಡ ಒಬ್ಬರು. ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡುವುದರ ಮೂಲಕ ಅವರ ಆಡಳಿತ…

57 mins ago

ಸಿದ್ದು ರಾಜೀನಾಮೆ; ಒಂದು ಯುಗದ ಅಂತ್ಯ!

ಕೆ.ಪಿ.ನಾಗರಾಜ್, ಮೈಸೂರು ಕರ್ನಾಟಕ ರಾಜಕೀಯ ವ್ಯಾಕರಣವನ್ನೇ ಬದಲಾಯಿಸಿದ ಸಿದ್ದರಾಮಯ್ಯ ಮೈಸೂರು ರಾಜಕಾರಣ ಅಂದರೆ ಒಮ್ಮೆ ಒಡೆಯರ್ ಯುಗ, ನಂತರ ದೇವರಾಜ…

60 mins ago

ಗಾಂಧಿಯ ಸರಳತೆಯತ್ತ ನಡೆಯುತ್ತಿರುವ ಯುವಜನತೆ

ಮಹಾತ್ಮ ಗಾಂಧೀಜಿ ಅವರ ಆತ್ಮಕತೆಗೆ ನೂರು ವರ್ಷ ಸಂದಿರುವುದು ಸಂತಸದ ವಿಷಯ. ಇವತ್ತು ಗಾಂಧಿಜಿ ಅವರ ವಿಚಾರಕ್ಕೆ ಏನಾಗುತ್ತಿದೆ? ಆಚಾರಕ್ಕೆ…

4 hours ago