ಮೈಸೂರು

ನಿಂತಿದ್ದ ಕಾರಿನಲ್ಲಿ ಪತ್ತೆಯಾಯಿತು ವೈದ್ಯನ ಶವ; ಭ್ರೂಣ ಹತ್ಯೆ ಪ್ರಕರಣದಲ್ಲಿ ಹೆಸರು ಕೇಳಿಬಂದಿದ್ದಕ್ಕೆ ಆತ್ಮಹತ್ಯೆ?

ಕುಶಾಲನಗರ: ತಾಲ್ಲೂಕಿನ ಆನೆಕಾಡು ಬಳಿ ರಾಷ್ಟ್ರೀಯ ಹೆದ್ದಾರಿ 275ರ ಬಳಿ ನಿಂತಿದ್ದ ಕಾರಿನಲ್ಲಿ ವೈದ್ಯರೊಬ್ಬರ ಮೃತದೇಹ ಪತ್ತೆಯಾಗಿದೆ. ಮಂಡ್ಯ ಜಿಲ್ಲೆ ಪಾಂಡವಪುರ ಬಳಿಯ ಶಿವಳ್ಳಿ ಗ್ರಾಮದ ಸತೀಶ್ (47) ಮೃತ ವೈದ್ಯ. ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನ ಕೊಣಸೂರು ಆಸ್ಪತ್ರೆಯಲ್ಲಿ ಸತೀಶ್ ವೈದ್ಯರಾಗಿ ಸೇವೆ ಸಲಿಸುತ್ತಿದ್ದರು.

ಮಂಡ್ಯದ ಭ್ರೂಣ ಹತ್ಯೆ ಕೇಸ್‌ನಲ್ಲಿ ಸತೀಶ್‌ ಅವರ ಹೆಸರು ಕೇಳಿಬಂದಿತ್ತು ಈ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಭ್ರೂಣ ಹತ್ಯೆಗೆ ಸಂಬಂಧಿಸಿದ ಆಲೆಮನೆಗೆ ಆರೋಗ್ಯ ಸಚಿವರು ಭೇಟಿ ನೀಡಿದಾಗ ಅಲ್ಲಿನ ಸ್ಥಳೀಯರು ಸತೀಶ್‌ ಅವರ ಬಗ್ಗೆ ಮಾಹಿತಿ ನೀಡಿದ್ದರು ಎನ್ನಲಾಗಿದೆ. ಅಲ್ಲದೇ ಸಚಿವರು ವೈದ್ಯನನ್ನು ವಿಚಾರಿಸುವಂತೆ ಸೂಚನೆ ನೀಡಿದ್ದಾರೆ ಎಂಬ ಮಾಹಿತಿಯೂ ಇದೆ. ಸ್ಥಳಕ್ಕೆ ಕುಶಾಲನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆ ಕೈಗೊಂಡಿದ್ದಾರೆ.

andolana

Recent Posts

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

6 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

6 hours ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

6 hours ago

ತಂಬಾಕು ನಿಯಂತ್ರಣ: ಕೇಂದ್ರ ದ್ವಂದ್ವ ನೀತಿ

ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…

6 hours ago

ಮಳೆಗಾಲದಲ್ಲಿ ಶುದ್ಧ ಕುಡಿಯುವ ನೀರು, ಬಿಸಿ ನೀರು ಒದಗಿಸಿ

ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…

6 hours ago

ಹಿಂದಿನ ಉಸ್ತುವಾರಿಗಿದ್ದ ಖಾತೆಗಳು ಪುಟ್ಟರಂಗಶೆಟ್ಟರಿಗೆ!

ರಾಜೇಶ್ ಬೆಂಡರವಾಡಿ ಪಶುಸಂಗೋಪನೆ, ರೇಷ್ಮೆ ಖಾತೆ ಹಂಚಿಕೆ; ಉಭಯ ಕ್ಷೇತ್ರಗಳಲ್ಲಿ ಅನುಭವ ಇರುವ ಹಿನ್ನೆಲೆ  ಚಾಮರಾಜನಗರ: ರಾಜ್ಯದಲ್ಲಿ ಎರಡನೇ ಹಂತದಲ್ಲಿ…

6 hours ago