ಕುಶಾಲನಗರ: ತಾಲ್ಲೂಕಿನ ಆನೆಕಾಡು ಬಳಿ ರಾಷ್ಟ್ರೀಯ ಹೆದ್ದಾರಿ 275ರ ಬಳಿ ನಿಂತಿದ್ದ ಕಾರಿನಲ್ಲಿ ವೈದ್ಯರೊಬ್ಬರ ಮೃತದೇಹ ಪತ್ತೆಯಾಗಿದೆ. ಮಂಡ್ಯ ಜಿಲ್ಲೆ ಪಾಂಡವಪುರ ಬಳಿಯ ಶಿವಳ್ಳಿ ಗ್ರಾಮದ ಸತೀಶ್ (47) ಮೃತ ವೈದ್ಯ. ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನ ಕೊಣಸೂರು ಆಸ್ಪತ್ರೆಯಲ್ಲಿ ಸತೀಶ್ ವೈದ್ಯರಾಗಿ ಸೇವೆ ಸಲಿಸುತ್ತಿದ್ದರು.
ಮಂಡ್ಯದ ಭ್ರೂಣ ಹತ್ಯೆ ಕೇಸ್ನಲ್ಲಿ ಸತೀಶ್ ಅವರ ಹೆಸರು ಕೇಳಿಬಂದಿತ್ತು ಈ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಭ್ರೂಣ ಹತ್ಯೆಗೆ ಸಂಬಂಧಿಸಿದ ಆಲೆಮನೆಗೆ ಆರೋಗ್ಯ ಸಚಿವರು ಭೇಟಿ ನೀಡಿದಾಗ ಅಲ್ಲಿನ ಸ್ಥಳೀಯರು ಸತೀಶ್ ಅವರ ಬಗ್ಗೆ ಮಾಹಿತಿ ನೀಡಿದ್ದರು ಎನ್ನಲಾಗಿದೆ. ಅಲ್ಲದೇ ಸಚಿವರು ವೈದ್ಯನನ್ನು ವಿಚಾರಿಸುವಂತೆ ಸೂಚನೆ ನೀಡಿದ್ದಾರೆ ಎಂಬ ಮಾಹಿತಿಯೂ ಇದೆ. ಸ್ಥಳಕ್ಕೆ ಕುಶಾಲನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆ ಕೈಗೊಂಡಿದ್ದಾರೆ.
ಮೈಸೂರು: ಮೈಸೂರಿನ ಎಲ್ಲಾ ಕೆರೆಗಳ ಸರ್ವೆ ನಡೆಸಿ, ಒತ್ತುವರಿ ತೆರವುಗೊಳಿಸುವಂತೆ ಮೈಸೂರು ಅಪರ ಜಿಲ್ಲಾಧಿಕಾರಿ ಡಾ.ಪಿ.ಶಿವರಾಜು ಅವರು ಅಧಿಕಾರಿಗಳಿಗೆ ಸೂಚನೆ…
ನವದೆಹಲಿ: ಭಾರತ ಸರ್ಕಾರವು ಚೀನಾದ ನಾಗರಿಕರಿಗೆ ಪ್ರವಾಸಿ ವೀಸಾಗಳನ್ನು ಪುನರಾರಂಭಿಸಲು ಸಿದ್ಧತೆ ನಡೆಸುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ. ಗಾಲ್ವಾನ್ ಕಣಿವೆಯಲ್ಲಿ…
ಮುಂಬೈ: ಆರೋಗ್ಯ ಸಮಸ್ಯೆಯಿಂದ ಮುಂಬೈನ್ ಆಸ್ಪತ್ರೆಗೆ ದಾಖಲಾಗಿದ್ದ ಶರದ್ ಪವಾರ್ ಅವರನ್ನು ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ. ಶರದ್ ಪವಾರ್…
ಅಮರಾವತಿ: ವ್ಯಕ್ತಿಯೊಬ್ಬ ಪತ್ನಿ ಹಾಗೂ ತಾಯಿಯನ್ನು ಕತ್ತು ಹಿಸುಕಿ ಕೊಂದು ಬಳಿಕ ಇಬ್ಬರು ಮಕ್ಕಳೊಂದಿಗೆ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾದ…
ಮೈಸೂರು: ಇಲ್ಲಿನ ಚಲುವಾಂಬ ಆಸ್ಪತ್ರೆಯಲ್ಲಿ ಇರುವೆ ಕಚ್ಚಿ ಮಗು ಸಾವನ್ನಪ್ಪಿರುವ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಗುವಿನ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆಂದು…
ಹಾಸನ: ಮೂವರು ಇಟಿಎಫ್ ಸಿಬ್ಬಂದಿ ಮೇಲೆ ಕಾಡಾನೆ ದಾಳಿ ಮಾಡಿರುವ ಘಟನೆ ಬೇಲೂರು ತಾಲ್ಲೂಕಿನ ಚೀಕನಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ…