ಮೈಸೂರು

ಎಡಗೈಗೆ ಸಿರಂಜ್ ಚುಚ್ಚಿದ ಸ್ಥಿತಿಯಲ್ಲಿ‌ ಮೃತದೇಹ ಪತ್ತೆ; ವೈದ್ಯನ ಸಾವಿನ ಸುತ್ತ ಅನುಮಾನದ ಹುತ್ತ

ಕುಶಾಲನಗರ: ಪಿರಿಯಾಪಟ್ಟಣದ ಸರ್ಕಾರಿ ಆಯುರ್ವೇದಿಕ್ ಚಿಕಿತ್ಸಾಲಯ ವೈದ್ಯಾಧಿಕಾರಿ ಮೃತದೇಹ ಕಾರಿನಲ್ಲಿ ಶಂಶಯಾಸ್ಪದ ರೀತಿಯಲ್ಲಿ ಪತ್ತೆಯಾದ ಘಟನೆ ಕುಶಾಲನಗರ ಸಮೀಪದ ಆನೆಕಾಡಿನಲ್ಲಿ ನಡೆದಿದೆ.
ಮೂಲತಃ ಮಂಡ್ಯ ಪಾಂಡವಪುರದ ದಿ.ಗಿರಿಗೌಡ ಎಂಬವರ ಪುತ್ರ ಡಾ.ಸತೀಶ್ (48) ಮೃತ ದುರ್ದೈವಿ.

ಕಳೆದ ಒಂದು ವರ್ಷದಿಂದ ಪಿರಿಯಾಪಟ್ಟಣ ಮತ್ತು ಬೆಟ್ಟದಪುರ ಸಮೀಪದ ಕೊಣಸೂರು ಆಯುರ್ವೇದಿಕ್ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ಎಂದಿನಂತೆ ಶುಕ್ರವಾರ ಕೂಡ ಕೊಣಸೂರು ಆಸ್ಪತ್ರೆಗೆ ಆಗಮಿಸಿದ್ದು ಅಲ್ಲಿಂದ ಪಿರಿಯಾಪಟ್ಟಣಕ್ಕೆ ಆಗಮಿಸಿದ್ದಾರೆ.

ಅಲ್ಲಿಂದ ಮಡಿಕೇರಿಯತ್ತ ತಮ್ಮ‌ ಕಾರಿನಲ್ಲಿ‌ ಆಗಮಿಸಿರುವ ವೈದ್ಯರ‌ ಮೃತದೇಹ ಕಾರಿನಲ್ಲಿ ಕಂಡುಬಂದಿದೆ. ಎಡಗೈಗೆ ಸಿರಂಜ್ ಚುಚ್ಚಿದ ಸ್ಥಿತಿಯಲ್ಲಿ‌ ಮೃತದೇಹ ಪತ್ತೆಯಾಗಿದ್ದು ವಿಷ ತೆಗೆದುಕೊಂಡಿರುವ ಶಂಕೆ‌ ವ್ಯಕ್ತಗೊಂಡಿದೆ.
ಹೆದ್ದಾರಿಯ ಒಂದು‌ ಭಾಗದಲ್ಲಿ ಮಾರುತಿ ಸೆಲೆರಿಯೋ ಕಾರು‌ ನಿಲುಗಡೆ ಸ್ಥಿತಿಯಲ್ಲಿ ತುಂಬಾ ಹೊತ್ತಿನಿಂದ ನಿಂತಿರುವುದು ಕಂಡ ಸ್ಥಳೀಯರು ಪರಿಶೀಲಿಸಿದ ಸಂದರ್ಭ ಚಾಲನೆ ಸೀಟ್ ನಲ್ಲಿ‌ ವೈದ್ಯರು‌ ಮೃತಪಟ್ಟ ಸ್ಥಿತಿಯಲ್ಲಿ ಕಂಡುಬಂದಿದ್ದಾರೆ.

ಸ್ಥಳಕ್ಕೆ‌ ಕುಶಾಲನಗರ ಗ್ರಾಮಾಂತರ ಠಾಣಾ ವೃತ್ತ ನಿರೀಕ್ಷಕ ರಾಜೇಶ್ ಕೋಟ್ಯಾನ್, ಠಾಣಾಧಿಕಾರಿ ಮೋಹನ್ ರಾಜ್ ಸೇರಿದಂತೆ ವಿಧಿವಿಜ್ಞಾನ ಪ್ರಯೋಗಾಲದವರು ಆಗಮಿಸಿ ಪರಿಶೀಲನೆ‌ ನಡೆಸಿ ತನಿಖೆ ಕೈಗೊಂಡಿದ್ದಾರೆ.
ಮೃತರ ಪತ್ನಿ‌ ಕುಸುಮ ಕೂಡ ವೈದ್ಯರಾಗಿದ್ದು ಮಂಡ್ಯದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಪಿರಿಯಾಪಟ್ಟಣ ಆಸ್ಪತ್ರೆ ಸಹಾಯಕ ಸಿಬ್ಬಂದಿಯ ಹೇಳಿಕೆ ಪ್ರಕಾರ, ಸ್ನೇಹಜೀವಿಯಾಗಿದ್ದ ವೈದ್ಯರು ಎಂದಿನಂತೆ ಬೆಳಗ್ಗೆ ಕರ್ತವ್ಯಕ್ಕೆ ಹಾಜರಾದ ಸಂದರ್ಭ ಕೊಂಚ ಬಳಲಿದಂತೆ ಕಂಡು ಬಂದಿದ್ದಾರೆ. ಒಂದು ಬಾರಿ ವಾಂತಿ‌ ಕೂಡ ಮಾಡಿಕೊಂಡು ಬಳಿಕ ಕಾರಿನಲ್ಲಿ ವಿಶ್ರಮಿಸುವುದಾಗಿ ಹೇಳಿ ತೆರಳಿದ್ದಾರೆ. ಮಡಿಕೇರಿ ಬಗ್ಗೆ ಅಷ್ಟಾಗಿ ಮಾಹಿತಿಯಿಲ್ಲದ ವೈದ್ಯರು ಇತ್ತ ಯಾಕೆ‌ ಬಂದರು ತಿಳಿದಿಲ್ಲ‌ ಎಂದಿದ್ದಾರೆ.

andolana

Recent Posts

ಚೀನಾ ಪಟಾಕಿ ಕಾರ್ಖಾನೆಯಲ್ಲಿ ಭಾರೀ ಸ್ಫೋಟ: 21 ಜನರು ಸಾವು

ಬೀಜಿಂಗ್:‌ ಮಧ್ಯ ಚೀನಾದ ಪಟಾಕಿ ಉತ್ಪಾದನಾ ಘಟಕದಲ್ಲಿ ಸಂಭವಿಸಿದ ಪ್ರಬಲ ಸ್ಫೋಟದಲ್ಲಿ ಕನಿಷ್ಠ 21 ಜನರು ಸಾವನ್ನಪ್ಪಿದ್ದು, 60ಕ್ಕೂ ಹೆಚ್ಚು…

27 mins ago

ಶ್ರೀರಂಗಪಟ್ಟಣ: ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ

ಶ್ರೀರಂಗಪಟ್ಟಣ: ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದ ಗಂಜಾಮ್‌ನಲ್ಲಿ ನಡೆದಿದೆ. ಮೈಸೂರು ಮೂಲದ…

1 hour ago

ನೀರಿಗಿಳಿಯುವ ಮುನ್ನ ಇರಲಿ ಎಚ್ಚರ !

ಜಿಲ್ಲೆಯಲ್ಲಿ ೧೧ ಮಂದಿ ಸಾವು ಮುಂಜಾಗ್ರತೆ ಪಾಲಿಸುವುದು ಅಗತ್ಯ ಮೈಸೂರು: ಬಿರು ಬೇಸಿಗೆ ಸಂದರ್ಭದಲ್ಲಿ ನದಿ, ಕೆರೆ ಹಾಗೂ ಕಾಲುವೆಗಳಲ್ಲಿ…

5 hours ago

ಸರಳ, ಸಜ್ಜನ ರಾಜಕಾರಣಿ ಎಸ್.ಎಂ.ಕೃಷ್ಣ

ಪ್ರೊ.ಜಯಪ್ರಕಾಶಗೌಡ, ಅಧ್ಯಕ್ಷರು, ಕರ್ನಾಟಕ ಸಂಘ, ಮೈಸೂರು  ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರಿಗೆ ಎಸ್.ಎಂ.ಕೃಷ್ಣ ಪ್ರಶಸ್ತಿ ಪುರಸ್ಕಾರ ಮಂಡ್ಯ ಜಿಲ್ಲೆಯ…

5 hours ago

ಬಿಸಿಲಿಗೆ ಪರ್ಯಾಯ ಈಜುಕೊಳಗಳು

ಚಿರಂಜೀವಿ ಸಿ.ಹುಲ್ಲಹಳ್ಳಿ ೩,೭೫೦ ರೂ., ಶೇ.೧೮ರಷ್ಟು ಜಿಎಸ್‌ಟಿ ಸೇರಿ ಒಟ್ಟು ೪,೭೫೦ ರೂ.ಶುಲ್ಕ ಪ್ರತಿ ಶಿಬಿರಾರ್ಥಿಗೆ ನಿಗದಿ ಮೈಸೂರು: ಮಲ್ಲಿಗೆ…

5 hours ago

ಗ್ರಾಪಂ ಅಧಿಕಾರಿಗಳ ನಿಗಾಕ್ಕೆ ಜಿಪಿಎಸ್ ಸಿಸ್ಟಂ

ಕೆ.ಬಿ.ರಮೇಶನಾಯಕ ಬಯೋಮೆಟ್ರಿಕ್ ಹಾಜರಾತಿ ಜತೆಗೆ ಜಿಪಿಎಸ್ ವ್ಯವಸ್ಥೆ ಜಾರಿಗೆ ಚಿಂತನೆ ಹಾಜರಾತಿ ಹಾಕಿ ಬೇಕಾಬಿಟ್ಟಿ ಓಡಾಡುವ ಸಿಬ್ಬಂದಿಗಳಿಗೆ ಬ್ರೇಕ್ ಮೈಸೂರು:…

5 hours ago