ಮೈಸೂರು: ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿದಲ್ಲಿ ಹೆಚ್ಚಿನ ಲಾಭ ಪಡೆಯಬಹುದು ಎಂಬ ಅನ್ಯರ ಮಾತನ್ನು ನಂಬಿದ ವೈದ್ಯೆಯೊಬ್ಬರು 7 ಲಕ್ಷ ರೂ. ಹಣವನ್ನು ವಂಚಕರ ಖಾತೆಗೆ ಹಾಕಿ ಕಳೆದುಕೊಂಡಿದ್ದಾರೆ.
ನಗರದ ಸಾತಗಳ್ಳಿ ಬಡಾವಣೆ ನಿವಾಸಿ ವೈದ್ಯೆಯು ಫೇಸ್ ಬಕ್ ಮೂಲಕ ಷೇರು ಮಾರುಕಟ್ಟೆ ಬಗ್ಗೆ ತಿಳಿದುಕೊಂಡಿದ್ದಾರೆ. ನಂತರ ಅಲ್ಲಿದ್ದ ವರ್ಮಾಸ್ ಬುಕ್ ಡಿಸ್ಕಷನ್ ಗ್ರೂಪ್ಗೆ ಸೇರಿದ್ದಾರೆ.
ಅಲ್ಲಿ ತಮ್ಮ ಷೇರು ವಹಿವಾಟು ಆರಂಭಿಸಿದ್ದಾರೆ. ಕೆಲ ದಿನಗಳ ನಂತರ ಷೇರು ಮಾರುಕಟ್ಟೆಯಲ್ಲಿ ಹೆಚ್ಚಿನ ಹಣ ಹೂಡಿಕೆ ಮಾಡಿದಲ್ಲಿ ಹೆಚ್ಚಿನ ಲಾಭ ಗಳಿಸಬಹುದು ಎಂದು ಆಸೆ ಹುಟ್ಟಿಸಿದ್ದಾನೆ.
ಆತನ ಮಾತನ್ನು ನಂಬಿದ ಆಕೆ ಹಂತಹಂತವಾಗಿ ಆತ ಹೇಳಿದ ಖಾತೆಗೆ 7 ಲಕ್ಷ ರೂ. ಹಣವನ್ನು ಜಮೆ ಮಾಡಿ ವಂಚನೆಗೆ ಒಳಗಾಗಿದ್ದಾರೆ. ಈ ಸಂಬಂದ ಸೈಬರ್ ಠಾಣೆಯಲ್ಲಿ ದೂರು ದಾಖಲಾಗಿದೆ.





