ನಂಜನಗೂಡು : ವೈದ್ಯರ ಮನೆಯಲ್ಲಿ ಖದೀಮರು ಕೈಚಳಕ ತೋರಿಸಿದ್ದಾರೆ. ನಂಜನಗೂಡು ನಗರದ ಹೌಸಿಂಗ್ ಬೋರ್ಡ್ ಕಾಲೋನಿಯಲ್ಲಿರುವ ಮನೆ ಬಾಗಿಲು ಮೀಟಿ ಕೃತ್ಯವೆಸಗಿರುವ ಕಳ್ಳರು 225 ಗ್ರಾಂ ಚಿನ್ನ ಹಾಗೂ ಮೂರು ಲಕ್ಷ ನಗದು ದೋಚಿದ್ದಾರೆ.
ನಂಜನಗೂಡು ಪಟ್ಟಣದಲ್ಲಿ ಸರ್ಕಾರಿ ಆಯುರ್ವೇದಿಕ್ ವೈದ್ಯ ಡಾ .ಅಮೂಲ್ಯ, ಡಾ .ಮಧು ಎಂಬುವರ ಮನೆಯಲ್ಲಿ ಕಳ್ಳತನ ನಡೆದಿದೆ. ಮನೆಯಲ್ಲಿ ಯಾರು ಇಲ್ಲದ ಸಮಯ ನೋಡಿ ಬೀಗ ಮುರಿದು ಕೃತ್ಯವೆಸಗಿದ್ದಾರೆ. ವೈದ್ಯದಂಪತಿ ಶನಿವಾರ ಚಿಕ್ಕಮಂಗಳೂರಿಗೆ ತೆರಳಿದ್ದರು.
ಸೋಮವಾರ ಹಿಂದಿರುಗಿದಾಗ ಬೀಗ ಮುರಿದು ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ.
ಡಿವೈಎಸ್ಪಿ ರಘು, ಸರ್ಕಲ್ ಇನ್ಸ್ಪೆಕ್ಟರ್ ರವೀಂದ್ರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಶ್ವಾನದಳ ಮತ್ತು ಬೆರಳು ಮುದ್ರಾ ತಂಡ ಪರಿಶೀಲನೆ ನಡೆಸಿದ್ದಾರೆ. ಕಳ್ಳರ ಬಂಧನಕ್ಕೆ ನಂಜನಗೂಡು ಪೊಲೀಸರು ಬಲೆ ಬೀಸಿದ್ದಾರೆ.
ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…
ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್ಟಿಆರ್ ಹಾಗೂ ಎಚ್ಎಸ್ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…