ಮೈಸೂರು

ನನ್ನನ್ನು ಸೋಲಿಸಿ ಮುಖ್ಯಮಂತ್ರಿಗೆ ಅವಮಾನ ಮಾಡಬೇಡಿ !

ಮೈಸೂರು: ಚುನಾವಣೆಯಲ್ಲಿ ನನ್ನನ್ನು ಸೋಲಿಸಿ ಮುಖ್ಯಮಂತ್ರಿ ಅವಮಾನ ಮಾಡಬೇಡಿ ನನ್ನನ್ನು ಗೆಲ್ಲಿಸುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಗೌರವ ತಂದುಕೊಡಿ ಎಂದು ಮೈಸೂರು-ಕೊಡಗು ಕ್ಷೇತ್ರದ ಕಾಂಗ್ರೆಸ್‌‍ ಅಭ್ಯರ್ಥಿ ಎಂ.ಲಕ್ಷ್ಮಣ್‌‍ ಮನವಿ ಮಾಡಿದರು.

ನಗರದ ಕಾಂಗ್ರೆಸ್‌‍ ಭವನದಲ್ಲಿ ಜಿಲ್ಲಾ, ನಗರ ಕಾಂಗ್ರೆಸ್‌‍ ಮತ್ತು ಅಲ್ಪಸಂಖ್ಯಾತರ ಜಿಲ್ಲಾ ಘಟಕದ ಸಹಯೋಗದಲ್ಲಿ ನಡೆದ ಜಿಲ್ಲೆಯ ವಿಧಾನ ಸಭಾ ಕ್ಷೇತ್ರಗಳ ಅಲ್ಪಸಂಖ್ಯಾತರ ಘಟಕದ ಪದಾಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಅವರು ಮಾತನಾಡಿದರು.

ಕಳೆದ 10 ವರ್ಷಗಳಿಂದ ಸ್ವಂತ ಜಿಲ್ಲೆಯಲ್ಲಿ ಲೋಕಸಭಾ ಅಭ್ಯರ್ಥಿ ಸೋತಿರುವುದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮನಸ್ಸಿನಲ್ಲಿ ಕೊರಗಿದೆ. ಕುರುಬ ಸಮುದಾಯಕ್ಕೆ ಟಿಕೆಟ್‌‍ ನೀಡಿದ್ದರಿಂದ ಸೋಲಾಯಿತು ಎಂಬ ಕಾರಣ ಬಂದ ಹಿನ್ನೆಲೆಯಲ್ಲಿ ಈ ಬಾರಿ ಒಕ್ಕಲಿಗ ಸಮುದಾಯದ ನನಗೆ ಟಿಕೆಟ್‌‍ ಕೊಟ್ಟಿದ್ದಾರೆ. ಒಕ್ಕಲಿಗ ಸಮುದಾಯ ಮತ ನೀಡಬೇಕು ಎಂದು ಮನವಿ ಮಾಡಿದರು.

ನಾನು ಹಣೆಯ ಮೇಲೆ ಜಾತಿ ಹೆಸರು ಬರೆದುಕೊಂಡವನಲ್ಲ. ನಾನು ಹುಟ್ಟಿದ್ದು ಒಕ್ಕಲಿಗನಾಗಿ, ಆದರೆ ಬೆಳೆಯುತ್ತ ವಿಶ್ವಮಾನನಾದೇ. ಆದರೆ, ಪ್ರತಾಪ ಸಿಂಹ ಟಿಕೆಟ್‌‍ ತಪ್ಪಿರುವ ಹತಾಸೆಯಿಂದ ಮಾಧ್ಯಮಗಳು ಮುಂದೆ ಜಾತಿ ಪ್ರಶ್ನಿಸುತ್ತಿದ್ದಾರೆ, ನನ್ನನ್ನು ಜೈಲಿಗೆ ಕಳುಹಿಸುತ್ತೇನೆ ಎಂಬ ಬೆದರಿಕೆಗಳನ್ನು ಹಾಕುತ್ತಿದ್ದಾರೆ. ಅವರ ವಿರುದ್ಧ ಮಾತನಾಡಬಾರದು ಎಂದು ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡಿದ್ದಾರೆ. ಇದಕ್ಕೆ ಕಾರಣ ಕೇಳಿದರೇ ಉತ್ತರಿಸುತ್ತಿಲ್ಲ ಎಂದು ಹೇಳಿದರು.

ಮೈಸೂರು ಕೊಡಗು ಭಾಗದಲ್ಲಿ ಕಾಂಗ್ರೆಸ್‌‍ ಪಕ್ಷಕ್ಕೆ ಪೂರಕ ವಾತಾವರಣವಿದೆ. ಇಂತಹ ಸಂದರ್ಭದಲ್ಲಿ ನನ್ನನ್ನು ಸೋಲಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅವಮಾನ ಮಾಡಬೇಡಿ. ನಾನು ಸೋತು ಸೋತು ಸಾಕಾಗಿದೆ. ಕೊನೆಯದಾಗಿ ಕಾಂಗ್ರೆಸ್‌‍ ಪಕ್ಷ ಅವಕಾಶ ನೀಡಿದೆ. ಈ ಬಾರಿ ಸೋತರೆ ಸತ್ತಂತೆ ಎಂದು ಪುನರ್‌‍ ಉಚ್ಚರಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಜೈಲಿಗೆ ಕಳುಹಿಸಲು ಯತ್ನಿಸಲಾಗುತ್ತಿದೆ. ಕೇಂದ್ರದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ಅಲ್ಪಸಂಖ್ಯಾತರು, ದಲಿತರು, ಹಿಂದುಳಿದ ವರ್ಗಗಳನ್ನು ಭೀಕ್ಷುಕರನ್ನಾಗಿ ಮಾಡಲಿದೆ. ಈಗಾಗಲೇ ಸರ್ಕಾರಿ ಸಂಸ್ಥೆಗಳನ್ನು ಖಾಸಗೀಕರಣಗೊಳಿಸಿ ಮೀಸಲಾತಿ ಸೌಲಭ್ಯ ದೊರೆಕದಂತೆ ಮಾಡುತ್ತಿದೆ. ಏಕ ರೂಪ ಚುನಾವಣೆ ನಡೆಸಿ ಪ್ರಜಾಪ್ರಭುತ್ವವನ್ನು ಸಂಪೂರ್ಣ ನಾಶಗೊಳಿಸಲಿದೆ ಎಂದು ದೂರಿದರು.

ಸಂಸದ ಪ್ರತಾಪ ಸಿಂಹ ವಿರುದ್ಧ ಸೋಲಿಸಬೇಕು ಎಂದು ಹೋರಾಟ ಮಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌‍ ಅವರಿಗೆ ಮನವರಿಕೆ ಮಾಡಿ ಟಿಕೆಟ್‌‍ ಪಡೆದುಕೊಂಡೆ. ಆದರೆ, ರಾಜಕೀಯ ಕುಸ್ತಿಗೆ ಅವರೆ ಇಲ್ಲ. ಬೇರೆಯವರನ್ನು ಕಳುಹಿಸಿದ್ದಾರೆ ಎಂದು ಹೇಳಿದರು.

ಕಳೆದ ಹತ್ತು ವರ್ಷಗಳಲ್ಲಿ ಕಿಡಿ ಹೊತ್ತಿಸುವುದು ಬಿಟ್ಟರೇ ಏನನ್ನು ಮಾಡಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಾರಿಗೆ ತಂದ ಯೋಜನೆಗಳನ್ನು ಪುಸ್ತಕದಲ್ಲಿ ಪ್ರಕಟಿಸಿ ತನ್ನದು ಎಂದು ಸುಳ್ಳೇಳಿ ಊರೇಲ್ಲ ತಿರುಗಾಡುತ್ತಿದ್ದಾರೆ. ಇವರ ಸುಳ್ಳಗಳನ್ನು ಕಾಂಗ್ರೆಸ್ಸಿಗರು ಬಯಲು ಮಾಡದ್ದಿದ್ದರೇ ಕೆಆರ್‌‍ಎಸ್‌‍ ಅಣೆಕಟ್ಟೆಯನ್ನು ನಮ ತಾತ ನಿರ್ಮಿಸಿದರು ಎಂದು ಹೇಳುತ್ತಿದ್ದರು. ಇದನ್ನು ನಂಬುವ ಮೂರ್ಖರು ನಮಲ್ಲಿದ್ದಾರೆ ಎಂದು ಟೀಕಿಸಿದರು.

ಇದಕ್ಕೂ ಮುನ್ನು ನಮ ಸಂಸದರು ನಮ ಹೆಮೆ ಪೋಸ್ಟರ್‌‍ ಅನ್ನು ಬಿಡುಗಡೆಗೊಳಿಸಲಾಯಿತು.

ಕಾಂಗ್ರೆಸ್‌‍ ಜಿಲ್ಲಾಧ್ಯಕ್ಷ ಡಾ.ಬಿ.ಜೆ.ವಿಜಯಕುಮಾರ್‌‍, ನಗರಾಧ್ಯಕ್ಷ ಆರ್‌‍.ಮೂರ್ತಿ, ಮಾಜಿ ಸಚಿವ ಕೋಟೆ ಎಂ.ಶಿವಣ್ಣ, ಪ್ರಧಾನ ಕಾರ್ಯದರ್ಶಿ ಶಿವಣ್ಣ, ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷ ಮೋಸಿನ್‌‍ ಖಾನ್‌‍, ಶಿವಪ್ರಸಾದ್‌‍, ಮಾಧ್ಯಮ ವಕ್ತಾರ ಕೆ.ಮಹೇಶ್‌‍ ಮುಂತಾದವರು ಹಾಜರಿದ್ದರು

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಉದ್ಯಮಿಯ ಪರಿಶ್ರಮದಿಂದ ಕಾಯಕಲ್ಪ ಪಡೆದ ಉದ್ಯಾನ

ತಿ.ನರಸೀಪುರ: ಪಟ್ಟಣದ ಕಪಿಲಾ ನದಿ ದಂಡೆಯ ಶ್ರೀ ಬಳ್ಳೇಶ್ವರ ಸ್ವಾಮಿ ದೇವಸ್ಥಾನದ ಬಳಿಯ ಪಾರ್ಕ್ ಹೋಟೆಲ್ ಉದ್ಯಮಿಯೊಬ್ಬರ ಪರಿಶ್ರಮದಿಂದ ಕಾಯಕಲ್ಪ…

10 mins ago

ಶತಮಾನದ ದೇವರಾಜ ಶಾಲೆಯ ಶೋಕಗೀತೆ

ವರಹಳ್ಳಿ ಆನಂದ, ಸಂಶೋಧನಾ ವಿದ್ಯಾರ್ಥಿ, ಮೈಸೂರು ವಿಶ್ವವಿದ್ಯಾನಿಲಯ ಮೈಸೂರು: ನಗರದ ದೇವರಾಜ ಮೊಹಲ್ಲಾದಲ್ಲಿರುವ ಶತಮಾನ ತುಂಬಿರುವ ದೇವರಾಜ ಸರ್ಕಾರಿ ಹಿರಿಯ…

13 mins ago

ಅಭದ್ರತೆ ಹಾದಿಯಲಿ ವಿಕಸಿತ ಭಾರತದತ್ತ ‘ಆನಿ (ಆಮೆ) ನಡಿಗೆ’

ರಾಜಾರಾಂ ತಲ್ಲೂರು ಆರ್ಥಿಕ ಶಿಸ್ತಿನ ಚೌಕಟ್ಟಿನ ಒಂದೊಂದೇ ಅಂಶಗಳನ್ನು ಮುಂದಿಟ್ಟುಕೊಂಡು - ‘ನೋಡಿ, ನಾವು ಆರ್ಥಿಕವಾಗಿ ಸ್ಥಿರವಾಗಿದ್ದು, ವಿಕಸಿತ ಭಾರತದತ್ತ…

37 mins ago

2030ರ ವೇಳೆಗೆ 2 ಮಿಲಿಯನ್‌ ಉದ್ಯೋಗ ಸೃಷ್ಟಿ, ಅಭಿವೃದ್ಧಿ ಪರ ಆಯವ್ಯಯ : ಸಂಸದ ಯದುವೀರ್‌

ಮೈಸೂರು : ಯುವ ಸಮುದಾಯಕ್ಕೆ ಹಾಗೂ ತಾಂತ್ರಿಕ ಕ್ಷೇತ್ರಕ್ಕೆ ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ ಹೆಚ್ಚು ಒತ್ತು ನೀಡುವ ಮೂಲಕ ವಿಕಸಿತ…

9 hours ago

ಜನರನ್ನು ದಿಕ್ಕು ತಪ್ಪಿಸುತ್ತಿರುವ ಎನ್‌ಸಿಬಿ : ಎಂ.ಲಕ್ಷ್ಮಣ್‌ ಆರೋಪ

ಮೈಸೂರು : ನಗರದ ಕೆಮಿಕಲ್ ಫ್ಯಾಕ್ಟರಿಯಲ್ಲಿ ವಶಪಡಿಸಿಕೊಳ್ಳಲಾಗಿದೆ ಎನ್ನಲಾದ ವಸ್ತುಗಳಿಗೆ ಸಂಬಂಸಿದಂತೆ ಎನ್‌ಸಿಬಿ ನ್ಯಾಯಾಲಯಕ್ಕೆ ಸಲ್ಲಿಸಿರುವ ಪ್ರಮಾಣ ಪತ್ರವೇ ಬೇರೆ.…

9 hours ago