ಮೈಸೂರು

ನನ್ನನ್ನು ಸೋಲಿಸಿ ಮುಖ್ಯಮಂತ್ರಿಗೆ ಅವಮಾನ ಮಾಡಬೇಡಿ !

ಮೈಸೂರು: ಚುನಾವಣೆಯಲ್ಲಿ ನನ್ನನ್ನು ಸೋಲಿಸಿ ಮುಖ್ಯಮಂತ್ರಿ ಅವಮಾನ ಮಾಡಬೇಡಿ ನನ್ನನ್ನು ಗೆಲ್ಲಿಸುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಗೌರವ ತಂದುಕೊಡಿ ಎಂದು ಮೈಸೂರು-ಕೊಡಗು ಕ್ಷೇತ್ರದ ಕಾಂಗ್ರೆಸ್‌‍ ಅಭ್ಯರ್ಥಿ ಎಂ.ಲಕ್ಷ್ಮಣ್‌‍ ಮನವಿ ಮಾಡಿದರು.

ನಗರದ ಕಾಂಗ್ರೆಸ್‌‍ ಭವನದಲ್ಲಿ ಜಿಲ್ಲಾ, ನಗರ ಕಾಂಗ್ರೆಸ್‌‍ ಮತ್ತು ಅಲ್ಪಸಂಖ್ಯಾತರ ಜಿಲ್ಲಾ ಘಟಕದ ಸಹಯೋಗದಲ್ಲಿ ನಡೆದ ಜಿಲ್ಲೆಯ ವಿಧಾನ ಸಭಾ ಕ್ಷೇತ್ರಗಳ ಅಲ್ಪಸಂಖ್ಯಾತರ ಘಟಕದ ಪದಾಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಅವರು ಮಾತನಾಡಿದರು.

ಕಳೆದ 10 ವರ್ಷಗಳಿಂದ ಸ್ವಂತ ಜಿಲ್ಲೆಯಲ್ಲಿ ಲೋಕಸಭಾ ಅಭ್ಯರ್ಥಿ ಸೋತಿರುವುದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮನಸ್ಸಿನಲ್ಲಿ ಕೊರಗಿದೆ. ಕುರುಬ ಸಮುದಾಯಕ್ಕೆ ಟಿಕೆಟ್‌‍ ನೀಡಿದ್ದರಿಂದ ಸೋಲಾಯಿತು ಎಂಬ ಕಾರಣ ಬಂದ ಹಿನ್ನೆಲೆಯಲ್ಲಿ ಈ ಬಾರಿ ಒಕ್ಕಲಿಗ ಸಮುದಾಯದ ನನಗೆ ಟಿಕೆಟ್‌‍ ಕೊಟ್ಟಿದ್ದಾರೆ. ಒಕ್ಕಲಿಗ ಸಮುದಾಯ ಮತ ನೀಡಬೇಕು ಎಂದು ಮನವಿ ಮಾಡಿದರು.

ನಾನು ಹಣೆಯ ಮೇಲೆ ಜಾತಿ ಹೆಸರು ಬರೆದುಕೊಂಡವನಲ್ಲ. ನಾನು ಹುಟ್ಟಿದ್ದು ಒಕ್ಕಲಿಗನಾಗಿ, ಆದರೆ ಬೆಳೆಯುತ್ತ ವಿಶ್ವಮಾನನಾದೇ. ಆದರೆ, ಪ್ರತಾಪ ಸಿಂಹ ಟಿಕೆಟ್‌‍ ತಪ್ಪಿರುವ ಹತಾಸೆಯಿಂದ ಮಾಧ್ಯಮಗಳು ಮುಂದೆ ಜಾತಿ ಪ್ರಶ್ನಿಸುತ್ತಿದ್ದಾರೆ, ನನ್ನನ್ನು ಜೈಲಿಗೆ ಕಳುಹಿಸುತ್ತೇನೆ ಎಂಬ ಬೆದರಿಕೆಗಳನ್ನು ಹಾಕುತ್ತಿದ್ದಾರೆ. ಅವರ ವಿರುದ್ಧ ಮಾತನಾಡಬಾರದು ಎಂದು ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡಿದ್ದಾರೆ. ಇದಕ್ಕೆ ಕಾರಣ ಕೇಳಿದರೇ ಉತ್ತರಿಸುತ್ತಿಲ್ಲ ಎಂದು ಹೇಳಿದರು.

ಮೈಸೂರು ಕೊಡಗು ಭಾಗದಲ್ಲಿ ಕಾಂಗ್ರೆಸ್‌‍ ಪಕ್ಷಕ್ಕೆ ಪೂರಕ ವಾತಾವರಣವಿದೆ. ಇಂತಹ ಸಂದರ್ಭದಲ್ಲಿ ನನ್ನನ್ನು ಸೋಲಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅವಮಾನ ಮಾಡಬೇಡಿ. ನಾನು ಸೋತು ಸೋತು ಸಾಕಾಗಿದೆ. ಕೊನೆಯದಾಗಿ ಕಾಂಗ್ರೆಸ್‌‍ ಪಕ್ಷ ಅವಕಾಶ ನೀಡಿದೆ. ಈ ಬಾರಿ ಸೋತರೆ ಸತ್ತಂತೆ ಎಂದು ಪುನರ್‌‍ ಉಚ್ಚರಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಜೈಲಿಗೆ ಕಳುಹಿಸಲು ಯತ್ನಿಸಲಾಗುತ್ತಿದೆ. ಕೇಂದ್ರದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ಅಲ್ಪಸಂಖ್ಯಾತರು, ದಲಿತರು, ಹಿಂದುಳಿದ ವರ್ಗಗಳನ್ನು ಭೀಕ್ಷುಕರನ್ನಾಗಿ ಮಾಡಲಿದೆ. ಈಗಾಗಲೇ ಸರ್ಕಾರಿ ಸಂಸ್ಥೆಗಳನ್ನು ಖಾಸಗೀಕರಣಗೊಳಿಸಿ ಮೀಸಲಾತಿ ಸೌಲಭ್ಯ ದೊರೆಕದಂತೆ ಮಾಡುತ್ತಿದೆ. ಏಕ ರೂಪ ಚುನಾವಣೆ ನಡೆಸಿ ಪ್ರಜಾಪ್ರಭುತ್ವವನ್ನು ಸಂಪೂರ್ಣ ನಾಶಗೊಳಿಸಲಿದೆ ಎಂದು ದೂರಿದರು.

ಸಂಸದ ಪ್ರತಾಪ ಸಿಂಹ ವಿರುದ್ಧ ಸೋಲಿಸಬೇಕು ಎಂದು ಹೋರಾಟ ಮಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌‍ ಅವರಿಗೆ ಮನವರಿಕೆ ಮಾಡಿ ಟಿಕೆಟ್‌‍ ಪಡೆದುಕೊಂಡೆ. ಆದರೆ, ರಾಜಕೀಯ ಕುಸ್ತಿಗೆ ಅವರೆ ಇಲ್ಲ. ಬೇರೆಯವರನ್ನು ಕಳುಹಿಸಿದ್ದಾರೆ ಎಂದು ಹೇಳಿದರು.

ಕಳೆದ ಹತ್ತು ವರ್ಷಗಳಲ್ಲಿ ಕಿಡಿ ಹೊತ್ತಿಸುವುದು ಬಿಟ್ಟರೇ ಏನನ್ನು ಮಾಡಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಾರಿಗೆ ತಂದ ಯೋಜನೆಗಳನ್ನು ಪುಸ್ತಕದಲ್ಲಿ ಪ್ರಕಟಿಸಿ ತನ್ನದು ಎಂದು ಸುಳ್ಳೇಳಿ ಊರೇಲ್ಲ ತಿರುಗಾಡುತ್ತಿದ್ದಾರೆ. ಇವರ ಸುಳ್ಳಗಳನ್ನು ಕಾಂಗ್ರೆಸ್ಸಿಗರು ಬಯಲು ಮಾಡದ್ದಿದ್ದರೇ ಕೆಆರ್‌‍ಎಸ್‌‍ ಅಣೆಕಟ್ಟೆಯನ್ನು ನಮ ತಾತ ನಿರ್ಮಿಸಿದರು ಎಂದು ಹೇಳುತ್ತಿದ್ದರು. ಇದನ್ನು ನಂಬುವ ಮೂರ್ಖರು ನಮಲ್ಲಿದ್ದಾರೆ ಎಂದು ಟೀಕಿಸಿದರು.

ಇದಕ್ಕೂ ಮುನ್ನು ನಮ ಸಂಸದರು ನಮ ಹೆಮೆ ಪೋಸ್ಟರ್‌‍ ಅನ್ನು ಬಿಡುಗಡೆಗೊಳಿಸಲಾಯಿತು.

ಕಾಂಗ್ರೆಸ್‌‍ ಜಿಲ್ಲಾಧ್ಯಕ್ಷ ಡಾ.ಬಿ.ಜೆ.ವಿಜಯಕುಮಾರ್‌‍, ನಗರಾಧ್ಯಕ್ಷ ಆರ್‌‍.ಮೂರ್ತಿ, ಮಾಜಿ ಸಚಿವ ಕೋಟೆ ಎಂ.ಶಿವಣ್ಣ, ಪ್ರಧಾನ ಕಾರ್ಯದರ್ಶಿ ಶಿವಣ್ಣ, ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷ ಮೋಸಿನ್‌‍ ಖಾನ್‌‍, ಶಿವಪ್ರಸಾದ್‌‍, ಮಾಧ್ಯಮ ವಕ್ತಾರ ಕೆ.ಮಹೇಶ್‌‍ ಮುಂತಾದವರು ಹಾಜರಿದ್ದರು

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಪ್ರಕರಣ : ಡಿಐಜಿ ನೇತೃತ್ವದಲ್ಲಿ ತನಿಖೆ

ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…

1 hour ago

ಭಾಷಣ ಮಾಡಿದ ವೇದಿಕೆ ಸ್ಥಳದ ಶುದ್ಧೀಕರಣ : ಇದು ನನ್ನ ವಿರುದ್ಧ ತೋರಿದ ಅಸ್ಪೃಶ್ಯತೆ ; ಖರ್ಗೆ ಕಿಡಿ

ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…

2 hours ago

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

4 hours ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

10 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

16 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

16 hours ago