ಮೈಸೂರು

ಜಾತಿ ಟಮಟೆ ಬಾರಿಸುವವರಿಗೆ ಕಿವಿ ಕೊಡಬೇಡಿ, ಎಚ್ಚರದಿಂದಿರಿ : ಪ್ರತಾಪ್‌ ಸಿಂಹ

ಮೈಸೂರು : ಕಾಂಗ್ರೆಸ್‌ ಅಭ್ಯರ್ಥಿ ಯಾವಾಗ ಒಕ್ಕಲಿಗನಾದನೋ ನನಗಂತು ಗೊತ್ತಿಲ ಎಂದು ಸಂಸದ ಪ್ರತಾಪ್‌ ಸಿಂಹ ಕಾಂಗ್ರೆಸ್‌ ಲೋಕಸಭಾ ಅಭ್ಯರ್ಥಿ ಲಕ್ಷ್ಮಣ್‌ ಅವರಿಗೆ ಪರೋಕ್ಷವಾಗಿ ಟೀಕೆ ಮಾಡಿದ್ದಾರೆ.

ಬಿಜೆಪಿ ಮೈಸೂರು ಮಹಾನಗರ ಮತ್ತು ಗ್ರಾಮಾಂತರ ವತಿಯಿಂದ ಏರ್ಪಡಿಸಲಾಗಿದ್ದ ಹಿಂದುಳಿದ ವರ್ಗಗಳ ಮೋರ್ಚಾ ಸಾಮಾಜಿಕ ಸಮ್ಮೇಳನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ನ ಮೈಸೂರು-ಲೋಕಸಭಾ ಅಭ್ಯರ್ಥಿ ಇಂದು ಜಾತಿಯ ಟಮಟೆ ಬಾರಿಸಿಕೊಂಡು ಓಡಾಡುತ್ತಿದ್ದಾನೆ. ನಮಗೆ ದೇಶ ಮುಖ್ಯವೆ ಹೊರತು ಜಾತಿ ಅಲ್ಲ ಎಂದು ಕಿಡಿ ಕಾರಿದ್ದಾರೆ.

ಕಾಂಗ್ರೆಸ್‌ ಅಭ್ಯರ್ಥಿ ಸಭೆ ಸಮಾರಂಭದಲ್ಲಿ ಮಾತು ಮಾತಿಗೆ ಯಾವೆಲ್ಲಾ ಒಕ್ಕಲಿಗ ನಾಯಕರಿದ್ದಾರೋ ಎಲ್ಲರನ್ನು ಸದಾ ನಿಂದಿಸುವ ಕೆಲಸ ಮಾಡಿಕೊಂಡು ಬಂದಿದ್ದಾನೆ. ಈತ ಯಾವಾಗ ಒಕ್ಕಲಿಗನಾದನೋ ನನಗಂತೂ ಗೊತ್ತಿಲ್ಲ ಎಂದು ವ್ಯಂಗ್ಯ ಮಾಡಿದರು.

ಇಂಥ ವ್ಯಕ್ತಿಗಳು ಬಂದು ಜಾತಿಯ ಟಮಟೆ ಬಾರಿಸುತ್ತಿದ್ದಾರೆ. ಯಾವುದೇ ಕಾರಣಕ್ಕು ಕಿವಿಕೊಡಬೇಡಿ. ನಮಗೆ ದೇಶ ಮುಖ್ಯ, ಮೈಸೂರಿನ ಅಭಿವೃದ್ದಿ ಮುಖ್ಯ. ಈ ಎಲ್ಲಾ ಕೆಲಸಗಳು ಬಿಜೆಪಿಯಿಂದ ಮಾತ್ರ ಮಾಡಲು ಸಾಧ್ಯ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಕಾಳು ಮೆಣಸು ಕಳ್ಳತನ; ಆರೋಪಿಗಳ ಬಂಧನ

ತನಿಖೆ ವೇಳೆ ಮತ್ತಷ್ಟು ಕಳ್ಳತನ ಮಾಡಿದ ಪ್ರಕರಣಗಳು ಬೆಳಕಿಗೆ ವಿರಾಜಪೇಟೆ : ಕಾಫಿ ಕಣದಲ್ಲಿ ಒಣಗಿಸಲು ಇಟ್ಟಿದ ಕಾಳು ಮೆಣಸು…

2 mins ago

ಕಿಲ್ಲಿಂಗ್‌ ಡಾಕ್ಟರ್‌ ವಿನಯ್‌ ಅಸಲಿ ಬಣ್ಣ ಬಯಲು ; ವೈದ್ಯನ ಬಲೆಗೆ ಸಿಲುಕಿ ನಲುಗಿದ ಮೂವರು ಸುಂದರಿಯರು!

ಮೈಸೂರು : ಪ್ರೀತಿ-ಪ್ರೇಮದ ಗುಂಗಲ್ಲಿ ಜೀವ ಕಳೆದುಕೊಂಡ ಜೀವಗಳು ಅದೆಷ್ಟೋ, ಜೀವನದಲ್ಲಿ ತೆಗೆದುಕೊಳ್ಳೋ ಒಂದೇ ಒಂದು ನಿರ್ಧಾರ ಬದುಕಿನ ಆಟವನ್ನೇ…

1 hour ago

ಮೈಸೂರಿನ ಸಮಗ್ರ ಅಭಿವೃದ್ಧಿಗೆ ಆದ್ಯತೆ

ನಗರಪಾಲಿಕೆಯಲ್ಲಿ 2026-27ನೇ ಸಾಲಿನ ಆಯವ್ಯಯ ಮಂಡನೆ ಮೈಸೂರು : ರಾಜಧಾನಿ ಬೆಂಗಳೂರು ನಂತರ ವೇಗವಾಗಿ ಬೆಳೆಯುತ್ತಿರುವ ಸಾಂಸ್ಕೃತಿಕ ನಗರಿಯ ಸಮಗ್ರ…

2 hours ago

ಹೈಕಮಾಂಡ್ ಹೇಳುವವರೆಗೂ ನಾನೇ ಸಿಎಂ‌ : ಸಿದ್ದರಾಮಯ್ಯ

ಬೆಂಗಳೂರು : ರಾಜ್ಯದ ಎಲ್ಲ 224 ಮಂದಿ ಶಾಸಕರೂ ಮುಖ್ಯ ಮಂತ್ರಿಯಾಗಲು ಅರ್ಹರಿದ್ದಾರೆ ಎಂದು ಹೇಳುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ…

2 hours ago

ಸರ್ಕಾರದ ಆದೇಶ ಕಡೆಗಣಿಸಿ ಏಕಾತ್ಮ ಮಾನವ ದರ್ಶನ ಸಮ್ಮೇಳನ

ಮೈಸೂರು : ಕರ್ನಾಟಕ ರಾಜ್ಯ ಮುಕ್ತ ವಿವಿಯಲ್ಲಿ ಆಯೋಜಿಸಿದ್ದ ಮೂರು ದಿನಗಳ 'ಏಕಾತ್ಮ ಮಾನವ ದರ್ಶನ: ಭಾರತದ ವಿಶ್ವದೃಷ್ಟಿ' ಎಂಬ…

2 hours ago

ಮಳವಳ್ಳಿ ದರೋಡೆ ಪ್ರಕರಣ : ನಾಲ್ವರು ಆರೋಪಿಗಳ ಬಂಧನ

ಮಳವಳ್ಳಿ : ತಾಲೂಕಿನ ಹಲಗೂರು ಸಮೀಪದ ಜೂಗನಹಳ್ಳಿ ವ್ಯಾಪ್ತಿಯ ತೋಟದ ಮನೆಗೆ ನುಗ್ಗಿ ಮಾರಕಾಸ್ತ್ರ ತೋರಿಸಿ ಚಿನ್ನ ದೋಚಿ ಪರಾರಿಯಾಗಿದ್ದ…

16 hours ago