ಮೈಸೂರು : ಮೈಸೂರು ವಿಮಾನ ನಿಲ್ದಾಣಕ್ಕೆ ರಾಜಾ ನಾಲ್ವಡಿ ಕೃಷ್ಣರಾಜ ಒಡೆಯರ್ ಹೆಸರಿನ ಬದಲಿಗೆ ಟಿಪ್ಪು ಹೆಸರಿಡುವಂತೆ ಸದನದಲ್ಲಿ ಕೆಲವು ಕಾಂಗ್ರೆಸ್ ಸಂಸದರು ಅಭಿಪ್ರಾಯ ವ್ಯಕ್ತಪಡಿಸಿದ್ದು, ಸದ್ಯ ಟಿಪ್ಪು ವಿಚಾರ ಮುನ್ನಲೆಗೆ ಬಂದಿದೆ. ಈ ಬಗ್ಗೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ ಮಹದೇವಪ್ಪ ಅವರು ಮಾತನಾಡಿದ್ದು, ಟಿಪ್ಪುವನ್ನು ದೇಶ ದ್ರೋಹಿಯಂತೆ ಬಿಂಬಿಸುವುದು ಸರಿಯಲ್ಲ ಎಂದು ತಿಳಿಸಿದ್ದಾರೆ.
ನಗರದಲ್ಲಿ ಸೋಮವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮೈಸೂರು ವಿಮಾನ ನಿಲ್ದಾಣಕ್ಕೆ ಟಿಪ್ಪು ಹೆಸರಿಡುವುದು ಬಿಡುವುದು ಬೇರೆ ವಿಚಾರ. ಟಿಪ್ಪು ನಮ್ಮ ನಮ್ಮವರಲ್ಲವೇ, ಅವರೇನು ಬೇರೆ ದೇಶದವರಾ ಅವರನ್ನು ದೇಶ ದ್ರೋಹಿಯಂತೆ ಬಿಂಬಿಸಲಾಗುತ್ತಿರುವುದು ಸರಿಯಲ್ಲ ಎಂದು ಸಚಿವರು ಹೇಳಿದ್ದಾರೆ.
ಟಿಪ್ಪು ತನ್ನ ಆಡಳೀತಾವಧಿಯಲ್ಲಿ ಭೂ ಸುಧಾರಣೆ ಕಾಯ್ದೆ, ಸತಿ ಸಹಾಗಮನ ಪದ್ದತಿ ಸೇರಿದಂತೆ ಹಲವಾರು ಜನಪರ ಯೋಜನೆಗಳನ್ನು ಜಾರಿಗೊಳಿಸಿದ್ದಾರೆ. ಪ್ರಮುಖವಾಗಿ ಕೆಆರ್ಎಸ್ ಗೆ ಮೊದಲು ಅಡಿಪಾಯ ಹಾಕಿದ್ದು ಟಿಪ್ಪು ಸುಲ್ತಾನ್ ಅವರೇ ಅಲ್ಲವೇ ಎಂದರು.
ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಹೆಸರಿಡಲು ಸರ್ಕಾರದಿಂದ ತಕರಾರೇನಿಲ್ಲ, ಹಲವರು ಟಟಿಪ್ಪು ಹೆಸರಿಡಲು ಸೂಚಿಸಿದ್ದಾರೆ ಎಂದರು.
ಇನ್ನು ಲೋಕಸಭಾ ಭದ್ರತಾ ಲೋಪಕ್ಕೆ ಸಂಬಂಧಿಸಿದಂತೆ, ಇದೊಂದು ರಾಷ್ಟ್ರೀಯ ಭದ್ರತಾ ವಿಚಾರವಾಗಿದೆ. ಇದೇ ವಿಚಾರ ಬೇರೆ ಧರ್ಮದವರಿಂದ ಪಾಸ್ ನೀಡಿದ್ದರೇ ಏನಾಗುತ್ತಿತ್ತು ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಅವಿವಾಹಿತ ಯುವಕರ ವಿಚಿತ್ರ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಪಂಚಾಯಿತಿ ವತಿಯಿಂದ ನಮಗೆ ಮಠ ಕಟ್ಟಿಸಿಕೊಡುವಂತೆ…
ಚಿತ್ರದುರ್ಗ: ಚಿತ್ರದುರ್ಗದಲ್ಲಿ ರೇಣುಕಾಸ್ವಾಮಿ ಸಮಾಧಿ ನಾಮಫಲಕ ಧ್ವಂಸ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಲೇಔಟ್ ನಿರ್ಮಾಣ ಮಾಡುವ ವೇಳೆ ರೇಣುಕಾಸ್ವಾಮಿ…
ಬೆಂಗಳೂರು: ರಾಜ್ಯದಲ್ಲಿ ದ್ವೇಷ ಭಾಷಣ ಮಾಡಿದರೆ 3 ವರ್ಷ ಜೈಲು ಶಿಕ್ಷೆ ಫಿಕ್ಸ್ ಆಗಿದೆ. ವಿಧಾನಸಭೆಯಲ್ಲಿ ಇಂದು ಮಸೂದೆ ಮಂಡನೆ…
ಮಂಗಳೂರು: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿರುವುದಾಗಿ ಚಿನ್ನಯ್ಯ ಆರೋಪಿಸಿದ್ದ ಹಿನ್ನೆಲೆಯಲ್ಲಿ ಎಸ್ಐಟಿ ತನಿಖೆ ವೇಳೆ ಸ್ಪೋಟಕ ಮಾಹಿತಿ ಬಯಲಾಗಿದೆ. ಹಣದ…
ಬೆಳಗಾವಿ: ಗ್ಯಾರಂಟಿಗಳ ಬಗ್ಗೆ ಸಿಎಲ್ಪಿಯಲ್ಲಿ ಚರ್ಚೆಯೇ ಆಗಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದರು. ಗ್ಯಾರಂಟಿ ಯೋಜನೆಗಳ ಪರಿಷ್ಕರಣೆಗೆ ಶಾಸಕರು…
ಬೆಳಗಾವಿ: ನಿಜಲಿಂಗಪ್ಪನವರು ಒಬ್ಬ ದಕ್ಷ, ಪ್ರಾಮಾಣಿಕ ವ್ಯಕ್ತಿ. ಕರ್ನಾಟಕ ಕಂಡ ಅಪರೂಪದ ರಾಜಕಾರಣಿಯಾಗಿದ್ದು ಕೊನೆಯವರೆಗೂ ಪ್ರಾಮಾಣಿಕವಾಗಿ ಇದ್ದವರು ಎಂದು ಮುಖ್ಯಮಂತ್ರಿ…