ಮೈಸೂರು : ಮೈಸೂರು ವಿಮಾನ ನಿಲ್ದಾಣಕ್ಕೆ ರಾಜಾ ನಾಲ್ವಡಿ ಕೃಷ್ಣರಾಜ ಒಡೆಯರ್ ಹೆಸರಿನ ಬದಲಿಗೆ ಟಿಪ್ಪು ಹೆಸರಿಡುವಂತೆ ಸದನದಲ್ಲಿ ಕೆಲವು ಕಾಂಗ್ರೆಸ್ ಸಂಸದರು ಅಭಿಪ್ರಾಯ ವ್ಯಕ್ತಪಡಿಸಿದ್ದು, ಸದ್ಯ ಟಿಪ್ಪು ವಿಚಾರ ಮುನ್ನಲೆಗೆ ಬಂದಿದೆ. ಈ ಬಗ್ಗೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ ಮಹದೇವಪ್ಪ ಅವರು ಮಾತನಾಡಿದ್ದು, ಟಿಪ್ಪುವನ್ನು ದೇಶ ದ್ರೋಹಿಯಂತೆ ಬಿಂಬಿಸುವುದು ಸರಿಯಲ್ಲ ಎಂದು ತಿಳಿಸಿದ್ದಾರೆ.
ನಗರದಲ್ಲಿ ಸೋಮವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮೈಸೂರು ವಿಮಾನ ನಿಲ್ದಾಣಕ್ಕೆ ಟಿಪ್ಪು ಹೆಸರಿಡುವುದು ಬಿಡುವುದು ಬೇರೆ ವಿಚಾರ. ಟಿಪ್ಪು ನಮ್ಮ ನಮ್ಮವರಲ್ಲವೇ, ಅವರೇನು ಬೇರೆ ದೇಶದವರಾ ಅವರನ್ನು ದೇಶ ದ್ರೋಹಿಯಂತೆ ಬಿಂಬಿಸಲಾಗುತ್ತಿರುವುದು ಸರಿಯಲ್ಲ ಎಂದು ಸಚಿವರು ಹೇಳಿದ್ದಾರೆ.
ಟಿಪ್ಪು ತನ್ನ ಆಡಳೀತಾವಧಿಯಲ್ಲಿ ಭೂ ಸುಧಾರಣೆ ಕಾಯ್ದೆ, ಸತಿ ಸಹಾಗಮನ ಪದ್ದತಿ ಸೇರಿದಂತೆ ಹಲವಾರು ಜನಪರ ಯೋಜನೆಗಳನ್ನು ಜಾರಿಗೊಳಿಸಿದ್ದಾರೆ. ಪ್ರಮುಖವಾಗಿ ಕೆಆರ್ಎಸ್ ಗೆ ಮೊದಲು ಅಡಿಪಾಯ ಹಾಕಿದ್ದು ಟಿಪ್ಪು ಸುಲ್ತಾನ್ ಅವರೇ ಅಲ್ಲವೇ ಎಂದರು.
ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಹೆಸರಿಡಲು ಸರ್ಕಾರದಿಂದ ತಕರಾರೇನಿಲ್ಲ, ಹಲವರು ಟಟಿಪ್ಪು ಹೆಸರಿಡಲು ಸೂಚಿಸಿದ್ದಾರೆ ಎಂದರು.
ಇನ್ನು ಲೋಕಸಭಾ ಭದ್ರತಾ ಲೋಪಕ್ಕೆ ಸಂಬಂಧಿಸಿದಂತೆ, ಇದೊಂದು ರಾಷ್ಟ್ರೀಯ ಭದ್ರತಾ ವಿಚಾರವಾಗಿದೆ. ಇದೇ ವಿಚಾರ ಬೇರೆ ಧರ್ಮದವರಿಂದ ಪಾಸ್ ನೀಡಿದ್ದರೇ ಏನಾಗುತ್ತಿತ್ತು ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಚೆನ್ನೈ : ತಮಿಳುನಾಡು ರಾಜಕಾರಣದಲ್ಲಿ ತಮ್ಮದೇ ಆದ ಕ್ರೇಜ್ ಸೃಷ್ಟಿಸಿಕೊಂಡಿರುವ ಟಿವಿಕೆ ಪಕ್ಷದ ಅಧ್ಯಕ್ಷ, ನಟ ʼದಳಪತಿʼ ವಿಜಯ್ ಅವರನ್ನು…
ಮೈಸೂರು : ಜನರು ವಿಪರೀತ ಸೆಕೆಯಿಂದಾಗಿ ತತ್ತರಿಸಿ ಹೋಗಿರುವ ನಡುವೆ ಕೆಲ ಜಿಲ್ಲೆಗಳಲ್ಲಿ ಇಂದು(ಮಾರ್ಚ್.15) ಸಂಜೆ ಅಕಾಲಿಕವಾಗಿ ಮಳೆ ಸುರಿದು…
ಮಂಡ್ಯ : ಮಂಡ್ಯ ವಿಧಾನಸಭಾ ಕ್ಷೇತ್ರ ಅಭಿವೃದ್ಧಿಗೆ ಸಮಗ್ರ ಯೋಜನೆ ರೂಪಿಸಲಾಗಿದ್ದು, ಬಸರಾಳು ಭಾಗದ ಹೇಮಾವತಿ ನಾಲೆ ಅಭಿವೃದ್ಧಿಗೆ 350…
ಮಂಡ್ಯ : ನಾನು ಯಾವಾಗ ಮಾತನಾಡಿದರೂ ವಿವಾದ ಆಗುತ್ತೆ. ನನ್ನ ಮಾತಿನಿಂದ ನೋವಾಗಿದ್ದರೆ, ಡಾ.ನಿರ್ಮಲಾನಂದನಾಥ ಸ್ವಾಮೀಜಿ ಅವರ ಕ್ಷಮೆ ಯಾಚಿಸುತ್ತೇನೆ…
ಎಚ್.ಡಿ.ಕೋಟೆ : ಎರಡು ಬೈಕುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸಾವಿಗೀಡಾಗಿರುವ ಘಟನೆ ತಾಲ್ಲೂಕಿನಲ್ಲಿ ನಡೆದಿದೆ. ತಾಲ್ಲೂಕಿನ ಹೆರಿಗೆ…
ಚಿತ್ರದುರ್ಗ : ಚಳ್ಳಕೆರೆ ಸಮೀಪದ ಹೆಗ್ಗೆರೆ ಗೇಟ್ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಪೊಲೀಸ್ ಅಧಿಕಾರಿಗಳು ಮೃತಪಟ್ಟಿದ್ದಾರೆ. ಇಬ್ಬರು…