ಮೈಸೂರು

ಮತದಾನದಿಂದ ದೂರ ಉಳಿಯಬೇಡಿ: ಕಾರ್ಯನಿರ್ವಾಹಕ ಅಧಿಕಾರಿ ಎಚ್.ಡಿ.ಗಿರೀಶ್

ಮೈಸೂರು: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನ ಮಾಡುವುದು ಪ್ರತಿಯೊಬ್ಬರ ಸಂವಿಧಾನತ್ಮಕ ಹಕ್ಕಾಗಿದ್ದು, ಯಾರೂ ಕೂಡ ಮತದಾನದಿಂದ ದೂರ ಉಳಿಯಬಾರದು ಎಂದು ಮೈಸೂರು ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಎಚ್.ಡಿ.ಗಿರೀಶ್ ಅವರು ಕರೆ ನೀಡಿದರು.

ಮೈಸೂರು ತಾಲ್ಲೂಕಿನ ಇಲವಾಲ ಗ್ರಾಮದಲ್ಲಿ ಗುರುವಾರ ತಾಲ್ಲೂಕು ಸ್ವೀಪ್ ಸಮಿತಿ ಹಾಗೂ ಆರೋಗ್ಯ ಇಲಾಖೆ ಸಹಯೋಗದೊಂದಿಗೆ ಮತದಾನ ಕುರಿತು ಮೇಣದ ಬತ್ತಿ ಮೆರವಣಿಗೆಯಲ್ಲಿ ಜಾಗೃತಿ ಮೂಡಿಸಿ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮತದಾನದ ಮಹತ್ವವನ್ನು ಅರಿತು ಪ್ರತಿಯೊಬ್ಬರೂ ಮತದಾನದ ಪ್ರಕ್ರಿಯೆಯಲ್ಲಿ ತೊಡಗಬೇಕು ಎಂದು ಹೇಳಿದರು.

ಜಗತ್ತಿನಲ್ಲೇ ಅತಿ ದೊಡ್ಡ ಪ್ರಜಾಪ್ರಭುತ್ವ ದೇಶವಾದ ಭಾರತವನ್ನು ಅಭಿವೃದ್ಧಿಯತ್ತ ಮುನ್ನಡೆಸುವ ಹೊಣೆಗಾರಿಕೆ ಪ್ರತಿಯೊಬ್ಬ ಮತದಾರರ ಮೇಲಿದೆ. ದೇಶ ಅಭಿವೃದ್ಧಿಯಾಗಲು ಪ್ರತಿಯೊಬ್ಬ ನಾಗರಿಕರೂ ಯಾವುದೇ ಆಸೆ, ಆಮಿಷಗಳಿಗೆ ಒಳಗಾಗದೆ ಸ್ವಂತ ವಿವೇಚನೆಯಿಂದ ಕಡ್ಡಾಯವಾಗಿ ಮತದಾನ ಮಾಡುವುದು ಆದ್ಯ ಕರ್ತವ್ಯವಾಗಿದೆ ಎಂದು ತಿಳಿಸಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಆಧಿಕಾರಿ ಕೆ.ಎಂ.ಗಾಯಿತ್ರಿ ಅವರ ಮಾರ್ಗದರ್ಶನದಂತೆ ಮತದಾನ ಪ್ರಮಾಣ ಹೆಚ್ಚಿಸಲು ಸ್ವೀಪ್ ಚಟುವಟಿಕೆಯಡಿ ಅನೇಕ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ. ಗ್ರಾಮ ಪಂಚಾಯಿತಿಗಳಿಂದ ಮತಗಟ್ಟೆಗಳಿಗೆ ಮೂಲಭೂತ ಸೌಕರ್ಯ ಕಲ್ಪಿಸಲಾಗಿದ್ದು, ವಿಶೇಷ ಚೇತನರು ಹಾಗೂ ಹಿರಿಯ ನಾಗರಿಕರಿಗೆ ವೀಲ್ ಚೇರ್ ವ್ಯವಸ್ಥೆ, ಮತದಾರರಿಗೆ ನೆರಳು, ಕುಡಿಯುವ ನೀರು ಹಾಗೂ ಶೌಚಾಲಯದ ವ್ಯವಸ್ಥೆ ಕಲ್ಪಿಸಲು ಕ್ರಮಕೈಗೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.

ಮೆರವಣಿಗೆಯು ಇಲವಾಲ ಗ್ರಾಮದ ಬೀದಿಗಳಲ್ಲಿ ಸಾಗಿ ಗ್ರಾಮಸ್ಥರಿಗೆ ‘ಮತದಾನ ನಿಮ್ಮ ಹಕ್ಕು ಕಡ್ಡಾಯವಾಗಿ ಮತದಾನ ಮಾಡಿ, ಆಸೆ- ಆಮಿಷಗಳಿಗೆ ಒಳಗಾಗಬೇಡಿ, ಮತದಾನ ಮಾಡೋಣ ಪ್ರಜಾಪ್ರಭುತ್ವ ಸದೃಢಗೊಳಿಸೋಣ ಎಂಬ ಜಾಗೃತಿ ಫಲಕ ಹಿಡಿದು ಅರಿವು ಮೂಡಿಸಲಾಯಿತು. ಇದೇ ವೇಳೆ ಬೀದಿ ನಾಟಕವನ್ನು ಪ್ರದರ್ಶನ ಮಾಡಲಾಯಿತು.

ಈ ಸಂದರ್ಭದಲ್ಲಿ ಗ್ರಾಮೀಣ ಉದ್ಯೋಗ ಸಹಾಯಕ ನಿರ್ದೇಶಕರಾದ ಕೆ.ಎಂ.ರಘುನಾಥ್, ತಾಲ್ಲೂಕು ಆರೋಗ್ಯ ಅಧಿಕಾರಿ ರಾಜೇಶ್ವರಿ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಾದ ಹೇಮಂತ್ ಕುಮಾರ್, ಪ್ರದೀಪ್ ಕುಮಾರ್, ವಿ.ಕೆ.ಗಿರೀಶ್, ಇಲವಾಲ ಹೋಬಳಿಯ ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು, ಮಹಿಳಾ ಸ್ವಸಹಾಯ ಸಂಘದ ಸದಸ್ಯರು ಸೇರಿದಂತೆ ಮುಂತಾದವರು ಭಾಗವಹಿಸಿದ್ದರು.

andolanait

Recent Posts

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

19 hours ago

ಓದುಗರ ಪತ್ರ: ಎಲ್‌ಇಡಿ ಪರದೆ ಮೂಲಕ ಚಾಮುಂಡಿ ದರ್ಶನ ಮಾಡಿಸಿ

ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…

19 hours ago

ಓದುಗರ ಪತ್ರ: ಪಾಲಿಕೆ ಆಯುಕ್ತರಾದ ಎಂ.ಕೆ. ಸವಿತಾ ನಡೆ ಶ್ಲಾಘನೀಯ

ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…

19 hours ago

ಓದುಗರ ಪತ್ರ: ಏನೇ ಓದಿದ್ದರೂ ಬೇಕು ಪಿಸಿ ಹುದ್ದೆ !

ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…

19 hours ago

ರವಿಯ ನೋಡ ಹೋಗಿ ಶಶಿಯ ಕಂಡುಬಂದೆ

ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್‌ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…

19 hours ago

ಕಾರ್ಗಿಲ್ ಕಾಲದ ಸುಬೇದಾರ್ ಹೈದರ್ ಮೈಸೂರಿನಲ್ಲಿದ್ದಾರೆ

ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…

19 hours ago