ಮೈಸೂರು: ವರದಕ್ಷಿಣೆ ಕಿರುಕುಳಕ್ಕೆ ಸಂಬಂಧಿಸಿದಂತೆ ತನ್ನ ತಂಗಿಯೇ ಮುಂದೆಯೇ ಆಕೆಯ ಅಣ್ಣನನ್ನು ಕೊಂದು ಹಾಕಿದ ಘಟನೆ ಮೈಸೂರು ನಗರದ ಕುವೆಂಪುನಗರದಲ್ಲಿ ಶನಿವಾರ (ಜೂನ್.8) ರಂದು ನಡೆದಿದೆ.
ಅಭಿಷೇಕ್ (27) ಕೊಲೆಯಾದ ಮೃತ ಯುವಕನಾದರೇ, ರವಿಚಂದ್ರ ಕೊಲೆ ಮಾಡಿದ ಆರೋಪಿಯಾಗಿದ್ದಾನೆ. ಇನ್ನು ಕೊಲೆಯಾದ ಅಭಿಷೇಕ್ ತಂಗಿ ವಿದ್ಯಾ ಆಗಿದ್ದಾರೆ. ಮೈಸೂರಿನ ಕುವೆಂಪು ನಗರ ಐ ಬ್ಲಾಕ್ ನಲ್ಲಿ ಈ ಘಟನೆ ನಡೆದಿದೆ.
ವಿದ್ಯಾ ಹಾಗೂ ರವಿಚಂದ್ರ ಅವರಿಬ್ಬರ ವಿವಾಹವನ್ನು ಕುಟುಂಬ ನಾಲ್ಕು ವರ್ಷಗಳ ಹಿಂದೆ ಮಾಡಿತ್ತು. ಇದಾದ ಬಳಿಕ ಈಗ 6 ತಿಂಗಳಿನಿಂದ ವರದಕ್ಷಿಣೆ ರೂಪದಲ್ಲಿ ಹಣ ತಂದು ಕೊಡುವಂತೆ ಕಿರುಕುಳ ನೀಡುತ್ತಿದ್ದ ರವಿಚಂದ್ರ. ತಾನು ಜಿಮ್ ತೆರೆಯಲು 5 ಲಕ್ಷ ಹಣ ಕೇಳಿದ್ದು, ಇದನ್ನು ತವರು ಮೆನಯಿಂದ ವರದಕ್ಷಿಣೆ ತರುವಂತೆ ಪ್ರತಿನಿತ್ಯ ವಿದ್ಯಾಗೆ ರವಿಚಂದ್ರ ಕಿರುಕುಳ ನೀಡುತ್ತಿದ್ದ. ಇದನ್ನು ಸಹಿಸದ ತಂಗಿ ತನ್ನ ಅಣ್ಣ ಅಭಿಷೇಕ್ಗೆ ಕರೆ ಮಾಡಿದ್ದಾಳೆ.
ವಿದ್ಯಾ ಅಣ್ಣ ಅಭಿಷೇಕ್ ಮನೆಗೆ ಬರುತ್ತಿದ್ದಂತೆ ಬಾಗಿಲು ಹಾಕಿ ತಂಗಿಯ ಗಂಡ ರವಿಚಂದ್ರ ಹಾಗೂ ಅವರ ತಮ್ಮ ಕುಮಾರ್ ಏಕಾಏಕಿ ಚಾಕುವಿನಿಂದ ಹಲ್ಲೆ ಮಾಡಿದ್ದಾರೆ. ಅಭಿಷೇಕ್ ಜೊತೆ ಬಂದ ಸ್ನೇಹಿತನಿಗೂ, ಅಭಿಷೇಕ್ ತಾಯಿ ಭಾಗ್ಯಮ್ಮ ಮೇಲೂ ಹಲ್ಲೆ ಮಾಡಿದ್ದಾರೆ.
ಹಲ್ಲೆಯಿಂದ ತೀವ್ರ ರಕ್ತಸ್ರಾವವಾಗಿ ಅಭಿಷೇಕ್ ಮಡಿದಿದ್ದಾರೆ. ಘಟನಾ ಸ್ಥಳಕ್ಕಾಗಮಿಸಿದ ಕುವೆಂಪುನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಕೈಗೊಂಡಿದ್ದಾರೆ.
ಮಂಡ್ಯ : ಚಾಲಕನ ನಿಯಂತ್ರಣ ತಪ್ಪಿದ ಗೂಡ್ಸ್ ಆಟೋ (ಟಾಟಾ ಏಸ್) ರಸ್ತೆ ಬದಿಗೆ ಉರುಳಿಬಿದ್ದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟು,…
ಹಾಸನ: ಮಗನನ್ನು ಶಾಲೆಗೆ ಸೇರಿಸಲಯ ಪತ್ರಕ್ಕಾಗಿ ಆಟೋದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚಾಲಕನ ಅತಿಬೇಗ ಮತ್ತು ನಿರ್ಲಕ್ಷ್ಯದಿಂದ ಪಲ್ಟಿಯಾದ ಪರಿಣಾಮ ಅಮ್ಮ…
ಮೈಸೂರು: ನಾಡ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಬಾಲಿವುಡ್ ನಟ ರಣವೀರ್ ಸಿಂಗ್ ಭೇಟಿ ನೀಡಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಚಾಮುಂಡಿಬೆಟ್ಟದ…
ಬೆಂಗಳೂರು: ಇಂದು ಕೃಷಿ ಕ್ಷೇತ್ರ ಅನೇಕ ಸವಾಲುಗಳನ್ನು ಎದುರಿಸುತ್ತಿದೆ. ಹವಾಮಾನ ವೈಪರೀತ್ಯ, ಉತ್ಪಾದನಾ ವೆಚ್ಚದ ಏರಿಕೆ, ಮಾರುಕಟ್ಟೆ ಅಸ್ಥಿರತೆ ಮತ್ತು…
ಬೆಂಗಳೂರು: ಸಿಎಂ ಬದಲಾವಣೆ ಆದರೆ ಪರಮೇಶ್ವರ್ ಮುಖ್ಯಮಂತ್ರಿಯಾಗಲಿ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಇಂದು…
ಮೈಸೂರು: ರಸಗೊಬ್ಬರ ಖರೀದಿಗೆ ಎಫ್ಐಡಿ ಕಡ್ಡಾಯ ಮಾಡಿರುವುದನ್ನು ವಿರೋಧಿಸಿ ರೈತ ಮುಖಂಡರು ಪ್ರತಿಭಟನೆ ನಡೆಸಿದರು. ಮೈಸೂರಿನ ಕಾಡಾ ಕಛೇರಿ ಆವರಣದಲ್ಲಿರುವ…