ಮೈಸೂರು

ನವ ವಿವಾಹಿತೆ ವೈದ್ಯೆಗೆ ವರದಕ್ಷಿಣೆ ಕಿರುಕುಳ, ಗರ್ಭಪಾತ : ಐವರ ವಿರುದ್ಧ ದೂರು

ಮೈಸೂರು : ವೈದ್ಯೆಗೆ ವರದಕ್ಷಿಣೆ ಕಿರುಕುಳ ನೀಡಿ ಗರ್ಭಪಾತ ಮಾಡಿಸಿರುವ ಆರೋಪದ ಮೇಲೆ ಆಕೆಯ ಪತಿ ಹಾಗೂ ಕುಟುಂಬದ ಐವರ ವಿರುದ್ಧ ದೂರು ದಾಖಲಾಗಿದೆ.

ನಗರದ ಸರಸ್ವತಿಪುರಂ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿರುವ ನವ ವಿವಾಹಿತೆ ನವ್ಯಾ, ಪತಿ ಅಭಿಷೇಕ್, ಮಾವ ಗೋವಿಂದರಾಜ್, ಅತ್ತೆ ಲತಾ, ಜ್ಞಾನಶೇಖರ್, ವೈದ್ಯೆ ಲತಾ ಸೇರಿ ಐವರ ಮೇಲೆ ಎಫ್. ಐ.ಆರ್ ದಾಖಲಿಸಿದ್ದಾರೆ.

ಬಿಎಎಂಎಸ್ ವ್ಯಾಸಂಗ ಮಾಡಿ ವೈದ್ಯೆ ಆಗಿರುವ ನವ್ಯಾರನ್ನ ಮೈಸೂರಿನ ಬಿಳಿಕೆರೆಯ ನಿವಾಸಿ ಚಿನ್ನದ ವ್ಯಾಪಾರಿ ಗೋವಿಂದರಾಜು ಪುತ್ರ ಅಭಿಷೇಕ್ ಜೊತೆ ವಿವಾಹ ಮಾಡಿಕೊಡಲಾಗಿತ್ತು. ಮಹದೇವ್ ಸುಮಾರು 80 ಲಕ್ಷ ಖರ್ಚು ಮಾಡಿ ಮಗಳು ನವ್ಯಾಳನ್ನು ಅದ್ದೂರಿಯಾಗಿ ಮದುವೆ ಮಾಡಿಕೊಟ್ಟಿದ್ದರು. ಇದೀಗ ನನ್ನ ಮಗಳಿಗೆ ವರದಕ್ಷಿಣೆ ಕಿರುಕುಳ ನೀಡಿ ಬಲವಂತವಾಗಿ ಗರ್ಭಪಾತ ಮಾಡಿಸಿದ್ದಾರೆ ಎಂದು ಮಹದೇವ್ ದೂರು ನೀಡಿದ್ದಾರೆ.

ನನ್ನ ಖಾಸಗಿ ವಿಡಿಯೋ ಇಟ್ಟುಕೊಂಡು ನನ್ನ ಗಂಡ ಬೆದರಿಸಿ ನನ್ನ ಕುಟುಂಬದವರನ್ನು ಸಾಯಿಸುತ್ತೇನೆ ಎಂದು ಬೆದರಿಕೆ ಹಾಕಿದ್ದಾರೆ. ನನಗೆ ನ್ಯಾಯ ಬೇಕು ನನ್ನ ಗಂಡನ ಕುಟುಂಬಕ್ಕೆ ಶಿಕ್ಷೆ ಆಗಬೇಕು ಎಂದು ಸಂತ್ರಸ್ತೆ ನವ್ಯ ಆಗ್ರಹಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ | ಚರಂಡಿ ಸೇರುತ್ತಿರುವ ನೀರಿಗೆ ‘ತಡೆ’ಹಾಕಿ

ಮೈಸೂರಿನ ವಿಜಯನಗರ ಎರಡನೇ ಹಂತದ ದಿವ್ಯರೂಪ ಕಲ್ಯಾಣ ಮಂಟಪದ ಸಮೀಪ ಮೂರು ವಾರಗಳಿಂದ ದಿನದಲ್ಲಿ ಆರು ಗಂಟೆಗಳ ಕಾಲ ಪ್ರತಿ…

59 seconds ago

ನಾಡಿನುದ್ದಕ್ಕೂ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆ ಕಂಪು

ಡಿಸೆಂಬರ್‌ನಲ್ಲಿ ವಜ್ರಮಹೋತ್ಸವ ; ಸಂಭ್ರಮಕ್ಕೆ ಸಿದ್ಧತೆ ಚಿರಂಜೀವಿ ಸಿ.ಹುಲ್ಲಹಳ್ಳಿ ಕರ್ನಾಟಕದ ನೆಲ, ಜಲ, ಭಾಷೆಯ ಏಳಿಗೆಗಾಗಿ ಕಾವ್ಯ, ಸಾಹಿತ್ಯ ಮತ್ತು…

13 mins ago

ಗಾಂಧಿ ಅಭಿಯಾನ ಅರಿವಿನ ಯಾನ ; ಗಾಂಧಿ ವಾದಕ್ಕೆ ಮನಸೋತಿದ್ದ ಬಳ್ಳಾರಿ ಸಿದ್ದಮ್ಮ

ಡಾ. ಎಂ. ಡಿ. ಉಮೇಶ, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ ಮೈಸೂರು ವಿಶ್ವವಿದ್ಯಾನಿಲಯ, ಮೈಸೂರು ಬಳ್ಳಾರಿ ಸಿದ್ದಮ್ಮನವರು ೧೯೦೩ರಲ್ಲಿ ಬಸೆಟಪ್ಪ…

31 mins ago

ಗಾಂಧಿ ಅಭಿಯಾನ ಅರಿವಿನ ಯಾನ ; ಆಹಾರದ ಕುರಿತು ಕೆಲವು ಚಿಲ್ಲರೆ ಪ್ರಯೋಗಗಳು

ನಾನು ನನ್ನನ್ನು ಆಳವಾಗಿ ಪರಿಶೋಧಿಸಿಕೊಂಡಂತೆಲ್ಲ ನನ್ನ ಆಂತರಿಕ ಮತ್ತು ಬಾಹ್ಯ ವಿಷಯಗಳಲ್ಲಿ ಬದಲಾವಣೆ ಮಾಡಿಕೊಳ್ಳುವ ಅವಶ್ಯಕತೆ ನನಗೆ ತೋರಿತು. ನನ್ನ…

37 mins ago

ಓದುಗರ ಪತ್ರ: ಪ್ರಕೃತಿ ಪ್ರೀತಿ ಅತಿಮುಖ್ಯ

ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…

1 day ago

ಓದುಗರ ಪತ್ರ: ಪ್ಲಾಸ್ಟಿಕ್ ನೋಟುಗಳ ಬಿಡುಗಡೆ ನಿರ್ಧಾರ ದೂರದೃಷ್ಟಿಯ ಹೆಜ್ಜೆ

ಆರ್‌ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…

1 day ago