Mandya: Police raid prostitution ring: Two women rescued
ಮೈಸೂರು : ವೈದ್ಯೆಗೆ ವರದಕ್ಷಿಣೆ ಕಿರುಕುಳ ನೀಡಿ ಗರ್ಭಪಾತ ಮಾಡಿಸಿರುವ ಆರೋಪದ ಮೇಲೆ ಆಕೆಯ ಪತಿ ಹಾಗೂ ಕುಟುಂಬದ ಐವರ ವಿರುದ್ಧ ದೂರು ದಾಖಲಾಗಿದೆ.
ನಗರದ ಸರಸ್ವತಿಪುರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿರುವ ನವ ವಿವಾಹಿತೆ ನವ್ಯಾ, ಪತಿ ಅಭಿಷೇಕ್, ಮಾವ ಗೋವಿಂದರಾಜ್, ಅತ್ತೆ ಲತಾ, ಜ್ಞಾನಶೇಖರ್, ವೈದ್ಯೆ ಲತಾ ಸೇರಿ ಐವರ ಮೇಲೆ ಎಫ್. ಐ.ಆರ್ ದಾಖಲಿಸಿದ್ದಾರೆ.
ಬಿಎಎಂಎಸ್ ವ್ಯಾಸಂಗ ಮಾಡಿ ವೈದ್ಯೆ ಆಗಿರುವ ನವ್ಯಾರನ್ನ ಮೈಸೂರಿನ ಬಿಳಿಕೆರೆಯ ನಿವಾಸಿ ಚಿನ್ನದ ವ್ಯಾಪಾರಿ ಗೋವಿಂದರಾಜು ಪುತ್ರ ಅಭಿಷೇಕ್ ಜೊತೆ ವಿವಾಹ ಮಾಡಿಕೊಡಲಾಗಿತ್ತು. ಮಹದೇವ್ ಸುಮಾರು 80 ಲಕ್ಷ ಖರ್ಚು ಮಾಡಿ ಮಗಳು ನವ್ಯಾಳನ್ನು ಅದ್ದೂರಿಯಾಗಿ ಮದುವೆ ಮಾಡಿಕೊಟ್ಟಿದ್ದರು. ಇದೀಗ ನನ್ನ ಮಗಳಿಗೆ ವರದಕ್ಷಿಣೆ ಕಿರುಕುಳ ನೀಡಿ ಬಲವಂತವಾಗಿ ಗರ್ಭಪಾತ ಮಾಡಿಸಿದ್ದಾರೆ ಎಂದು ಮಹದೇವ್ ದೂರು ನೀಡಿದ್ದಾರೆ.
ನನ್ನ ಖಾಸಗಿ ವಿಡಿಯೋ ಇಟ್ಟುಕೊಂಡು ನನ್ನ ಗಂಡ ಬೆದರಿಸಿ ನನ್ನ ಕುಟುಂಬದವರನ್ನು ಸಾಯಿಸುತ್ತೇನೆ ಎಂದು ಬೆದರಿಕೆ ಹಾಕಿದ್ದಾರೆ. ನನಗೆ ನ್ಯಾಯ ಬೇಕು ನನ್ನ ಗಂಡನ ಕುಟುಂಬಕ್ಕೆ ಶಿಕ್ಷೆ ಆಗಬೇಕು ಎಂದು ಸಂತ್ರಸ್ತೆ ನವ್ಯ ಆಗ್ರಹಿಸಿದ್ದಾರೆ.
ಮೈಸೂರು : ಕೆ-ಸೆಟ್ ಮತ್ತು ಯುಜಿಸಿ-ನೆಟ್, ಜೆಆರ್ಎಫ್ ಅರ್ಹತಾ ಪರೀಕ್ಷೆ ಬರೆಯುವವರಿಗೆ 45 ದಿನಗಳ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಕರ್ನಾಟಕ…
ಹಾಸನ : ಹಠಾತ್ ಕುಸಿದು ಬಿದ್ದು ಮೆದುಳಿನಲ್ಲಿ ತೀವ್ರ ರಕ್ತಸ್ರಾವವಾಗಿ ಕೋಮಾಗೆ ಜಾರಿದ್ದ ಸಾಫ್ಟ್ವೇರ್ ಇಂಜಿನಿಯರ್ ಯುವತಿ ಚಿಕಿತ್ಸೆ ಫಲಿಸದೆ…
ಮೈಸೂರು : ಮೈಸೂರು ಪ್ರಾಂತ್ಯದಲ್ಲೇ ಪ್ರಸೂತಿ, ಸ್ತ್ರೀರೋಗ ಮತ್ತು ಮಕ್ಕಳಿಗೆ ಗುಣಮಟ್ಟದ ಚಿಕಿತ್ಸೆ ನೀಡುವಲ್ಲಿ ಹೆಸರುವಾಸಿಯಾಗಿದ್ದ ಮೈಸೂರಿನ ಚೆಲುವಾಂಬ ಆಸ್ಪತ್ರೆಯ…
ಕೊಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಎರಡನೇ ಹಂತದ ಬಹಿರಂಗ ಚುನಾವಣೆ ಸೋಮವಾರ ಅಂತ್ಯವಾಗಿದೆ. ಏ.29ರಂದು ಮತದಾನ ನಡೆಯಲಿದ್ದು,…
ಶಿವಮೊಗ್ಗ : ಎಸ್ಎಸ್ಎಲ್ಸಿ ಫಲಿತಾಂಶದಲ್ಲಿ ‘ಕಾಪಿ ಹೊಡೆಸಿ ಶೇ.94.1 ಫಲಿತಾಂಶ ತಂದಿದ್ದಾರೆ’ ಎಂಬ ಬಿಜೆಪಿ ಎಂಎಲ್ಸಿ ಎಚ್.ವಿಶ್ವನಾಥ್ ಅವರ ಹೇಳಿಕೆಗೆ…
ನವದೆಹಲಿ : ಭಾರತ ಮತ್ತು ನ್ಯೂಜಿಲೆಂಡ್ ನಡುವೆ ದ್ವಿಪಕ್ಷೀಯ ವ್ಯಾಪಾರ ಮತ್ತು ಹೂಡಿಕೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಸೋಮವಾರ ನವದೆಹಲಿಯಲ್ಲಿ ʼಮುಕ್ತ…