ಮೈಸೂರು : ಮೈಸೂರಿನ ಜಿಲ್ಲಾಸ್ಪತ್ರೆ ವೈದ್ಯರಾದ ಡಾ.ಡಿ.ಆರ್.ಮಹದೇಶ್ವರ ಪ್ರಸಾದ್ ಅವರು ರಾಷ್ಟ್ರಮಟ್ಟದ ವಿಚಾರ ಸಂಕಿರಣದಲ್ಲಿ’ಸೀನಿಯರ್ ರಿಸರ್ಚ್ ಸೈಂಟಿಸ್ಟ್’ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಮೈಸೂರು ಜಿಲ್ಲಾಸ್ಪತ್ರೆಯ ಫೋರೆನ್ಸಿಕ್ ಮೆಡಿಸಿನ್ ಮತ್ತು ಟಾಕ್ಸಿಕಾಲಜಿ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿರುವ ಡಾ.ಡಿ.ಆರ್.ಮಹದೇಶ್ವರ ಪ್ರಸಾದ್ ಅವರು ಕಳೆದ 25 ವರ್ಷಗಳಿಂದ ವಿಷ ಶಾಸ್ತ್ರ ವಿಷಯದಲ್ಲಿ ಸಂಶೋಧನೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ.
ಇತ್ತೀಚಿಗೆ ಮಂಗಳೂರಿನ ಕಸ್ತೂರಬಾ ಮೆಡಿಕಲ್ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ವಿಚಾರ ಸಂಕಿರಣದಲ್ಲಿ ‘ದಿ ಇಂಡಿಯನ್ ಸೊಸೈಟಿ ಆಫ್ ಟಾಕ್ಸಿಕಾಲಜಿ’ ವತಿಯಿಂದ ಡಾ.ಡಿ.ಆರ್.ಮಹದೇಶ್ವರ ಪ್ರಸಾದ್ ಅವರಿಗೆ ’ಸೀನಿಯರ್ ರಿಸರ್ಚ್ ಸೈಂಟಿಸ್ಟ್’ ಪ್ರಶಸ್ತಿ ಪ್ರದಾನ ಮಾಡಿದೆ.
ಎಂಎಂಬಿಎಸ್, ಎಂಡಿ, ಪಿಎಚ್ ಡಿ ಪದವೀಧರರಾದ ಡಾ. ಡಿ.ಆರ್. ಮಹದೇಶ್ವರ ಪ್ರಸಾದ್ ಅವರು ಕಳೆದ 25 ವರ್ಷಗಳಿಂದ ಆರೋಗ್ಯ ಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಜತೆಗೆ ಕೋವಿಡ್ ಸಾಂಕ್ರಾಮಿಕದ ಸಮಯದಲ್ಲಿಯೂ ಸಕ್ರಿಯವಾಗಿ ಸೇವೆ ಸಲ್ಲಿಸಿ ಗಮನ ಸೆಳೆದಿದ್ದಾರೆ.
ರಾಯಚೂರು: ರಾಯಚೂರು ಪ್ರವಾಸದಲ್ಲಿದ್ದ ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಜಗದ್ಗುರು ಡಾ.ವಾಲ್ಮೀಕಿ ಪ್ರಸನ್ನಾನಂದ ಪುರಿ ಸ್ವಾಮೀಜಿಗೆ ಲಘು ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.…
ಚಾಮರಾಜನಗರ: ಕಳೆದ ಮೂರು ತಿಂಗಳಿನಿಂದಲೂ ಬಂದ್ ಆಗಿದ್ದ ನಾಗರಹೊಳೆ ಹಾಗೂ ಬಂಡೀಪುರ ಸಫಾರಿ ಆರಂಭಕ್ಕೆ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ.…
ಹಾಸನ: ಫ್ಯಾಕ್ಟರಿ ಕೆಲಸಕ್ಕೆ ಹೋಗಿದ್ದ ಯುವಕ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಹಾಸನ ಹೊರವಲಯದ ಹನುಮಂತಪುರ ಬಳಿ ನಡೆದಿದೆ. 27 ವರ್ಷ…
ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ತಾಪಮಾನ ಹೆಚ್ಚಾಗಿದ್ದು, ಬಿಸಿಲ ಝಳ ಆರಂಭವಾಗಿದೆ. ಹಲವು ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ ಏರಿಕೆಯಾಗುವ ಸಾಧ್ಯತೆಯಿದೆ. ಕರಾವಳಿ…
ಬೆಂಗಳೂರು: ಕರ್ನಾಟಕದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ರಾಜಕೀಯ ಜೀವನಕ್ಕೆ 50 ವರ್ಷಗಳು ತುಂಬಿದೆ. ಇಂದು ನಡೆಯುವ ಬಿಜೆಪಿ ರಾಜ್ಯ ಕಾರ್ಯಕಾರಿಣಿ…
ರಾಜ್ಯದಲ್ಲಿ ಪುರಸಭೆ, ನಗರಸಭೆ, ಮಹಾನಗರ ಪಾಲಿಕೆಗಳಲ್ಲಿ ಐದು ವರ್ಷಗಳಿಗೊಮ್ಮೆ ಆಸ್ತಿ ತೆರಿಗೆಯನ್ನು ಪರಿಷ್ಕರಣೆ ಮಾಡಬೇಕು ಎಂಬ ನಿಯಮವಿದ್ದರೂ ವರ್ಷಕ್ಕೊಮ್ಮೆ ಆಸ್ತಿ…