ಮೈಸೂರು

ಮೈಸೂರಿನ ಡಾ.ಡಿ.ಆರ್.ಮಹದೇಶ್ವರ ಪ್ರಸಾದ್ : ಸೀನಿಯರ್ ರಿಸರ್ಚ್ ಸೈಂಟಿಸ್ಟ್’ ಪ್ರಶಸ್ತಿ

ಮೈಸೂರು : ಮೈಸೂರಿನ ಜಿಲ್ಲಾಸ್ಪತ್ರೆ ವೈದ್ಯರಾದ ಡಾ.ಡಿ.ಆರ್.ಮಹದೇಶ್ವರ ಪ್ರಸಾದ್ ಅವರು ರಾಷ್ಟ್ರಮಟ್ಟದ ವಿಚಾರ ಸಂಕಿರಣದಲ್ಲಿ’ಸೀನಿಯರ್ ರಿಸರ್ಚ್ ಸೈಂಟಿಸ್ಟ್’ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಮೈಸೂರು ಜಿಲ್ಲಾಸ್ಪತ್ರೆಯ ಫೋರೆನ್ಸಿಕ್ ಮೆಡಿಸಿನ್ ಮತ್ತು ಟಾಕ್ಸಿಕಾಲಜಿ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿರುವ ಡಾ.ಡಿ.ಆರ್.ಮಹದೇಶ್ವರ ಪ್ರಸಾದ್ ಅವರು ಕಳೆದ 25 ವರ್ಷಗಳಿಂದ ವಿಷ ಶಾಸ್ತ್ರ ವಿಷಯದಲ್ಲಿ ಸಂಶೋಧನೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ.

ಇತ್ತೀಚಿಗೆ ಮಂಗಳೂರಿನ ಕಸ್ತೂರಬಾ ಮೆಡಿಕಲ್ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ವಿಚಾರ ಸಂಕಿರಣದಲ್ಲಿ ‘ದಿ ಇಂಡಿಯನ್ ಸೊಸೈಟಿ ಆಫ್ ಟಾಕ್ಸಿಕಾಲಜಿ’ ವತಿಯಿಂದ ಡಾ.ಡಿ.ಆರ್.ಮಹದೇಶ್ವರ ಪ್ರಸಾದ್ ಅವರಿಗೆ ’ಸೀನಿಯರ್ ರಿಸರ್ಚ್ ಸೈಂಟಿಸ್ಟ್’ ಪ್ರಶಸ್ತಿ ಪ್ರದಾನ ಮಾಡಿದೆ.

ಎಂಎಂಬಿಎಸ್, ಎಂಡಿ, ಪಿಎಚ್ ಡಿ ಪದವೀಧರರಾದ ಡಾ. ಡಿ.ಆರ್. ಮಹದೇಶ್ವರ ಪ್ರಸಾದ್  ಅವರು ಕಳೆದ 25 ವರ್ಷಗಳಿಂದ ಆರೋಗ್ಯ ಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಜತೆಗೆ ಕೋವಿಡ್ ಸಾಂಕ್ರಾಮಿಕದ ಸಮಯದಲ್ಲಿಯೂ ಸಕ್ರಿಯವಾಗಿ ಸೇವೆ ಸಲ್ಲಿಸಿ ಗಮನ ಸೆಳೆದಿದ್ದಾರೆ.

andolana

Recent Posts

ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ತುಟ್ಟಿ ಭತ್ಯೆ ಹೆಚ್ಚಳ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ(ಡಿಎ)ಯನ್ನು ಶೇ.1.50ರಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 2026 ಜನವರಿ 1ರಿಂದ ಅನ್ವಯವಾಗುವಂತೆ…

11 hours ago

ಮೇ.13ರಂದು ಬೆಂಗಳೂರು ಜನತೆಗೆ ಬಿಗ್‌ ಗಿಫ್ಟ್:‌ ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಮೇ.13ಕ್ಕೆ ಬೆಂಗಳೂರು ಜನತೆಗೆ ಬಿಗ್‌ ಗಿಫ್ಟ್‌ ನೀಡಲಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ…

11 hours ago

ದೇವರಾಜ ಮಾರುಕಟ್ಟೆಗೆ ಸಂಸದ ಯದುವೀರ್‌ ಒಡೆಯರ್‌ ಭೇಟಿ

ಮೈಸೂರು: ಮೈಸೂರಿನ ಪಾರಂಪರಿಕ ಕಟ್ಟಡದಲ್ಲಿ ಒಂದಾಗಿರುವ ದೇವರಾಜ ಮಾರುಕಟ್ಟೆಗೆ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರಿಂದು ಭೇಟಿ ನೀಡಿ…

12 hours ago

ಪಂಚಭೂತಗಳಲ್ಲಿ ಲೀನರಾದ ಸಚಿವ ಡಿ.ಸುಧಾಕರ್‌

ಚಿತ್ರದುರ್ಗ: ಸಕಲ ಸರ್ಕಾರಿ ಗೌರವಗಳೊಂದಿಗೆ ಚಳ್ಳಕೆರೆಯ ಚಿತಾಗಾರದಲ್ಲಿ ಹಿರಿಯೂರು ಶಾಸಕ ಡಿ.ಸುಧಾಕರ್‌ ಅವರ ಅಂತ್ಯಕ್ರಿಯೆ ನೆರವೇರಿತು. ಬೆಳಿಗ್ಗೆಯಿಂದ ಸುಧಾಕರ್‌ ಅವರ…

12 hours ago

ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತನ ಮೇಲೆ ಕಾಡಾನೆ ದಾಳಿ: ಗಂಭೀರ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಜಮೀನಿನಲ್ಲಿದ್ದ ರೈತನೋರ್ವನ ಮೇಲೆ ಕಾಡಾನೆ ದಾಳಿ ಮಾಡಿದ ಪರಿಣಾಮ ತೀವ್ರ…

12 hours ago

ಎಂ.ಕೆ.ಸ್ಟಾಲಿನ್‌ ಭೇಟಿಯಾದ ತಮಿಳುನಾಡು ನೂತನ ಸಿಎಂ ವಿಜಯ್‌

ಚೆನ್ನೈ: ತಮಿಳುನಾಡಿನ ನೂತನ ಸಿಎಂ ವಿಜಯ್‌ ಅವರಿಂದು ಮಾಜಿ ಸಿಎಂ ಎಂ.ಕೆ.ಸ್ಟಾಲಿನ್‌ ಅವರನ್ನು ಭೇಟಿಯಾದರು. ಸದ್ಯ ಇಂದಿನ ಸಭೆಯಲ್ಲಿ ಇಬ್ಬರು…

14 hours ago