ಮೈಸೂರು : ಮೈಸೂರಿನ ಜಿಲ್ಲಾಸ್ಪತ್ರೆ ವೈದ್ಯರಾದ ಡಾ.ಡಿ.ಆರ್.ಮಹದೇಶ್ವರ ಪ್ರಸಾದ್ ಅವರು ರಾಷ್ಟ್ರಮಟ್ಟದ ವಿಚಾರ ಸಂಕಿರಣದಲ್ಲಿ’ಸೀನಿಯರ್ ರಿಸರ್ಚ್ ಸೈಂಟಿಸ್ಟ್’ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಮೈಸೂರು ಜಿಲ್ಲಾಸ್ಪತ್ರೆಯ ಫೋರೆನ್ಸಿಕ್ ಮೆಡಿಸಿನ್ ಮತ್ತು ಟಾಕ್ಸಿಕಾಲಜಿ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿರುವ ಡಾ.ಡಿ.ಆರ್.ಮಹದೇಶ್ವರ ಪ್ರಸಾದ್ ಅವರು ಕಳೆದ 25 ವರ್ಷಗಳಿಂದ ವಿಷ ಶಾಸ್ತ್ರ ವಿಷಯದಲ್ಲಿ ಸಂಶೋಧನೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ.
ಇತ್ತೀಚಿಗೆ ಮಂಗಳೂರಿನ ಕಸ್ತೂರಬಾ ಮೆಡಿಕಲ್ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ವಿಚಾರ ಸಂಕಿರಣದಲ್ಲಿ ‘ದಿ ಇಂಡಿಯನ್ ಸೊಸೈಟಿ ಆಫ್ ಟಾಕ್ಸಿಕಾಲಜಿ’ ವತಿಯಿಂದ ಡಾ.ಡಿ.ಆರ್.ಮಹದೇಶ್ವರ ಪ್ರಸಾದ್ ಅವರಿಗೆ ’ಸೀನಿಯರ್ ರಿಸರ್ಚ್ ಸೈಂಟಿಸ್ಟ್’ ಪ್ರಶಸ್ತಿ ಪ್ರದಾನ ಮಾಡಿದೆ.
ಎಂಎಂಬಿಎಸ್, ಎಂಡಿ, ಪಿಎಚ್ ಡಿ ಪದವೀಧರರಾದ ಡಾ. ಡಿ.ಆರ್. ಮಹದೇಶ್ವರ ಪ್ರಸಾದ್ ಅವರು ಕಳೆದ 25 ವರ್ಷಗಳಿಂದ ಆರೋಗ್ಯ ಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಜತೆಗೆ ಕೋವಿಡ್ ಸಾಂಕ್ರಾಮಿಕದ ಸಮಯದಲ್ಲಿಯೂ ಸಕ್ರಿಯವಾಗಿ ಸೇವೆ ಸಲ್ಲಿಸಿ ಗಮನ ಸೆಳೆದಿದ್ದಾರೆ.
ನಾನು ಶಾಕಾಹಾರಿ ಮಂಡಲಿಯ ಕಾರ್ಯಕಾರಿ ಸಮಿತಿಯ ಸದಸ್ಯನಾಗಿ ಆರಿಸಲ್ಪಟ್ಟೆನು. ಆದರ ಪ್ರತಿ ಯೊಂದು ಸಭೆಗೂ ನಾನು ತಪ್ಪದೆ ಹಾಜರಾಗುತ್ತಿದ್ದೆ. ಆದರೆ…
ಸಾಮಾಜಿಕ ಕಳವಳಿಯ ನೆಲೆಯಲ್ಲಿ ಮೂಡಿರುವ ಕಥಾ ಸಂಕಲನ ಹೆಚ್.ಎಸ್.ಸಿದ್ದಮಲ್ಲಿಕಾರ್ಜುನಸ್ವಾಮಿ, ಹುಂಡೀಪುರ ಸಾಹಿತಿ ಕೊತ್ತಲವಾಡಿ ಶಿವಕುಮಾರ್ ಅವರ ಹೊಸ ಕೃತಿ ‘ಅರವಟ್ಟಿಗೆ’…
ಪ್ರೊ. ಜಿ. ಬಿ. ಶಿವರಾಜು, ಟ್ರಸ್ಟಿ, ಕಸ್ತೂರ ಬಾ ಗಾಂಧಿ ಆಶ್ರಮ ಗಾಂಧೀಜಿ ಆತ್ಮಕತೆ ‘ಸತ್ಯದೊಡನೆ ನನ್ನ ಅನ್ವೇಷಣೆ’ಗೆ ೧೦೦…
ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…
ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…