ಮೈಸೂರು

ಸ್ವಚ್ಛವಾಹಿನಿ ಮಹಿಳಾ ಚಾಲಕರಿಗೆ ಪರವಾನಗಿ ವಿತರಿಸಿದ ಡಾ.ಹೆಚ್.ಸಿ.ಮಹದೇವಪ್ಪ

ಮೈಸೂರು :  ಸ್ವಚ್ಚ ಭಾರತ್ ಮಿಷನ್ ಯೋಜನೆಯಡಿ ಗ್ರಾಮ ಪಂಚಾಯಿತಿಗಳಲ್ಲಿ ಕಸ ಸಂಗ್ರಹಿಸಿ ಸ್ವಚ್ಛವಾಹಿನಿ ಮೂಲಕ ವಿಲೇವಾರಿ ಮಾಡುವ ಸ್ವಸಹಾಯ ಸಂಘದ ಮಹಿಳಾ ಸದಸ್ಯರಿಗೆ ವಾಹನ ಪರವಾನಗಿಯನ್ನು ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ ಅವರು ಸಾಂಕೇತಿಕವಾಗಿ ವಿತರಿಸಿದರು.

ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಇಂದು ವಿತರಿಸಿದ ಬಳಿಕ ಮಾತನಾಡಿದ ಸಚಿವರು ಗ್ರಾಮ ಪಂಚಾಯಿತಿಗಳಲ್ಲಿ 176 ಮಹಿಳೆಯರು ವಾಹನ ತರಬೇತಿ ಪಡೆದು, ಸ್ವಚ್ಚವಾಹಿನಿಗಳಲ್ಲಿ ಚಾಲಕ ವೃತ್ತಿ ಮಾಡುತ್ತಿರುವುದು ಸಂತೋಷದ ವಿಚಾರ. ಮಹಿಳಾ ಸಬಲೀಕರಣಕ್ಕೆ ಇದು ಉತ್ತೇಜನೆ ನೀಡಲಿದ್ದು, ಸ್ವಾಭಿಮಾನದಿಂದ ಬದುಕಲು ನೆರವಾಗಲಿದೆ ಎಂದು ಹೇಳಿದರು.

ಸ್ವಚ್ಛವಾಹಿನಿಯಲ್ಲಿ ಕೆಲಸ ಮಾಡುತ್ತೇವೆಂದು ಹಿಂಜರೆಯಬಾರದು. ಧರ್ಮ, ಜಾತಿ ಆಧಾರದಲ್ಲಿ ಕೀಳು ಅಭಿರುಚಿಯುಳ್ಳ ಜನರು ಅಣುಕಿಸುತ್ತಾರೆ. ಅದಕ್ಕೆಲ್ಲ ಧೃತಿಗೆಡದೆ ಆತ್ಮವಿಶ್ವಾಸದಿಂದ ಮನಸಾಕ್ಷಿ ಮೆಚ್ಚುವಂತೆ ಕೆಲಸ ಮಾಡಬೇಕು. ಇದು ಒಂದು ಉದ್ಯೋಗವಾಗಿ ಪರಿಗಣಿಸಿ ಎಂದು ಕಿವಿಮಾತು ನೀಡಿದರು.

ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಗ್ರಾಮೀಣ ಮಹಿಳೆಯರಿಗೆ ಹೆಚ್ಚು ಕೌಶಲ್ಯಾಧಾರಿತ ತರಬೇತಿ ನೀಡುವ ಮೂಲಕ ಅವರಿಗೆ ಹೆಚ್ಚು ಉದ್ಯೋಗವಕಾಶ ಕಲ್ಪಿಸಲು ಕ್ರಮವಹಿಸಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಇದೇ ವೇಳೆ ಕೋವಿಡ್ ಸಂದರ್ಭದಲ್ಲಿ ಮೃತಪಟ್ಟ ಗ್ರಾಮಪಂಚಾಯಿತಿ ನೌಕರರಿಗೆ ಸಹಾಯಧನದ ಚಕ್ ವಿತರಿಸಿ, ಹಸು ಖರೀದಿಸಿ ಹೈನುಗಾರಿಕೆ ಮಾಡುವ ಮೂಲಕ ಜೀವನ ಕಟ್ಟಿಕೊಳ್ಳಬೇಕು. ಈ ಹಣವನ್ನು ಅನವಶ್ಯಕವಾಗಿ ಖರ್ಚು ಮಾಡಬಾರದು ಎಂದು ಸಲಹೆ ನೀಡಿದರು.

ಶಿಕ್ಷಣ ಫೌಂಡೇಶನ್ ವತಿಯಿಂದ ನೀಡಿದ ಟ್ಯಾಬ್ ಹಾಗೂ ಲ್ಯಾಪ್‌ಟಾಪ್ ಗಳನ್ನು ಗ್ರಂಥಾಲಯ (ಅರಿವು ಕೇಂದ್ರ)ಗಳಿಗೆ ನೀಡಿ, ಪರಿಶಿಷ್ಟ ವರ್ಗದವರು ಹಾಗೂ ಹಿಂದುಳಿದ ವರ್ಗದವರು ಹೆಚ್ಚು ವಾಸಿಸುವ ಗ್ರಾಮಗಳಲ್ಲಿ ಸುಸಜ್ಜಿತ ಗ್ರಂಥಾಲಯ ತೆರೆಯಲು ಕ್ರಮ ವಹಿಸಿ ಎಂದು ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಸಿಇಒ ಕೆ.ಎಂ.ಗಾಯಿತ್ರಿ , ಉಪ ಕಾರ್ಯದರ್ಶಿ ಸವಿತಾ, ಮುಖ್ಯ ಯೋಜನಾಧಿಕಾರಿ ಪ್ರಭುಸ್ವಾಮಿ ಸೇರಿದಂತೆ ಮುಂತಾದ ಅಧಿಕಾರಿಗಳು ಹಾಜರಿದ್ದರು.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಅರಣ್ಯದಲ್ಲಿ ಮಾನವನ ಹಸ್ತಕ್ಷೇಪ; ನಗರಕ್ಕೂ ಚಿರತೆ ದಾಂಗುಡಿ

ಎಚ್.ಎಸ್.ದಿನೇಶ್‌ಕುಮಾರ್ ಮೈಸೂರು ನಗರದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹೆಚ್ಚುತ್ತಿರುವ ಆತಂಕ ಒಂದು ವರ್ಷದಲ್ಲಿ ೨೫ ಚಿರತೆಗಳ ಸೆರೆ ಅರಣ್ಯ ಇಲಾಖೆಯಿಂದ ಜನ…

2 mins ago

ಹಾರ್ಮುಝ್ ಜಲಸಂಧಿಯಲ್ಲಿ ಭಾರತೀಯ ಧ್ವಜ ಹೊಂದಿರುವ ಟ್ಯಾಂಕರ್ ಮೇಲೆ ದಾಳಿ

ನವದೆಹಲಿ : ಇರಾನ್-ಅಮೆರಿಕ ಉದ್ವಿಗ್ನತೆಯ ನಡುವೆ ಹಾರ್ಮುಝ್ ಜಲಸಂಧಿಯಲ್ಲಿ ಭಾರತೀಯ ಧ್ವಜ ಹೊಂದಿರುವ ಸೂಪರ್ ಟ್ಯಾಂಕರ್ ಮೇಲೆ ಇರಾನಿಯನ್ ಗನ್‌ಬೋಟ್‌ಗಳಿಂದ…

10 hours ago

ಮತ್ತೆ ಹೊರ್ಮುಜ್‌ ಬಂದ್‌ ಮಾಡಿದ ಇರಾನ್‌

ಟೆಹ್ರಾನ್ : ಅಮೆರಿಕ ಜೊತೆಗಿನ ಮಾತುಕತೆ ಭಾಗವಾಗಿ ಹೊರ್ಮುಜ್‌ ಜಲಸಂಧಿಯಲ್ಲಿ ಮುಕ್ತ ಸಂಚಾರಕ್ಕೆ ಅವಕಾಶ ಕಲ್ಪಿಸಿದ್ದ ಇರಾನ್‌, ತನ್ನ ನಿರ್ಧಾರವನ್ನು…

10 hours ago

ಚಿರತೆಯಿಂದ ಅತ್ತೆ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ : ಸಚಿವೆ ಹೆಬ್ಬಾಳ್ಕರ್‌ ಭರವಸೆ

ಬೆಂಗಳೂರು : ಮೈಸೂರಿನ ಸಿದ್ಧಾರ್ಥನಗರದ ಮನೆಯೊಂದರಲ್ಲಿ ಚಿರತೆ ಮಂಚದಡಿ ಅಡಗಿದ್ದ ವೇಳೆ ಪ್ರಾಣದ ಹಂಗು ತೊರೆದು ವೃದ್ಧ ಅತ್ತೆಯನ್ನು ಸುರಕ್ಷಿತವಾಗಿ…

11 hours ago

ದಕ್ಷಿಣ ಆಫ್ರಿಕಾದಿಂದ ಬನ್ನೇರುಘಟ್ಟ ಮೃಗಾಲಯಕ್ಕೆ ಬಂದ ನಾಲ್ಕು ಚೀತಾ

ಬೆಂಗಳೂರು : ಬನ್ನೇರುಘಟ್ಟ ಮೃಗಾಲಯಕ್ಕೆ ದಕ್ಷಿಣ ಆಫ್ರಿಕಾದಿಂದ ತರಿಸಿಕೊಂಡ 4 ಶಿವಂಗಿ (ಚೀತಾ)ಗಳನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ…

11 hours ago